ಜಯಾ ವಿರುದ್ಧದ ಮೇಲ್ಮನವಿಗೆ ಕಾನೂನು ತೊಡಕಿದೆಯೇ?
ಬೆಂಗಳೂರು, ಮೇ 27 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಮೇಲ್ಮನವಿ ಕುರಿತು ಎರಡು ವಿಚಾರಗಳಲ್ಲಿ ಸರ್ಕಾರಕ್ಕೆ ಕಾನೂನು ಇಲಾಖೆಯಿಂದ ಸ್ಪಷ್ಟೀಕರಣ ಬೇಕಾಗಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ತೀರ್ಮಾನ ಕೈಗೊಂಡಿಲ್ಲ. ಕಾನೂನು ಇಲಾಖೆ ವರದಿ ನೀಡಿದ ಬಳಿಕ ನಿರ್ಧಾರ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. [ಜಯಲಲಿತಾ ಪ್ರಕರಣ Timeline]

ಕಾನೂನು ತಜ್ಞರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿರುವ ಇಲಾಖೆ ವರದಿಯನ್ನು ತಯಾರಿಸುತ್ತಿದೆ. ಸದ್ಯ, ಜಯಲಲಿತಾ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಮೇಲ್ಮನವಿ ಸಲ್ಲಿಸುವ ಬಗ್ಗೆ ಕಾನೂನು ತೊಡಕುಗಳು ಎದುರಾಗಿವೆ. [ಮೇಲ್ಮನವಿ ಸಲ್ಲಿಸಲು ಡಿಎಂಕೆ ತೀರ್ಮಾನ]
ಮುಖ್ಯಮಂತ್ರಿಯಾಗಿದ್ದಾರೆ : ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಕಾನೂನು ರೀತಿಯ ಹುದ್ದೆಯಲ್ಲಿದ್ದಾರೆ. ಆದ್ದರಿಂದ, ಅವರ ವಿರುದ್ಧ ಮೇಲ್ಮನವಿಯನ್ನು ಹೇಗೆ ಸಲ್ಲಿಸಬೇಕು? ಎಂಬ ಬಗ್ಗೆ ಕಾನೂನು ಇಲಾಖೆ ಮಾಹಿತಿ ಸಂಗ್ರಹಣೆ ಮಾಡುತ್ತಿದೆ. [ಬಿ.ವಿ.ಆಚಾರ್ಯ ಸಂದರ್ಶನ]
ಎಸ್ಪಿಪಿ ನೇಮಕ : ಹೈಕೋರ್ಟ್ನಲ್ಲಿ ಪ್ರಕರಣದ ಪರವಾಗಿ ವಾದ ಮಾಡಲು ಬಿ.ವಿ.ಆಚಾರ್ಯ ಅವರನ್ನು ಕರ್ನಾಟಕ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕ ಮಾಡಿಕೊಂಡಿತ್ತು. ಈಗ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರೆ ಅಲ್ಲಿಯೂ ಅವರು ವಾದ ಮಂಡಿಸಬಹುದೇ?, ಅವರನ್ನು ನೇಮಕ ಮಾಡಿಕೊಳ್ಳಲು ಮುಖ್ಯ ನ್ಯಾಯಮೂರ್ತಿಗಳ ಅನುಮತಿ ಬೇಕೆ? ಎಂಬ ಬಗ್ಗೆ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿಗಳನ್ನು ನಿರ್ದೋಷಿಗಳು ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. [ಪಿಟಿಐ ಚಿತ್ರ]
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications