ಜಯಲಲಿತಾ ವಿರುದ್ಧ ಮೇಲ್ಮನವಿಗೆ 'ಹಸಿರು' ನಿಶಾನೆ
ಬೆಂಗಳೂರು, ಮೇ. 23 : ಹಸಿರು ಸೀರೆಯುಟ್ಟು, ಹಸಿರು ಪೆನ್ನಿನಿಂದ ಹಸಿರು ಇಂಕನ್ನು ಹರಿಸಿ, ಐದನೇ ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಜಯರಾಂ ಅವರು ಹಸ್ತಾಕ್ಷರ ಹಾಕಿದ ಸಂದರ್ಭದಲ್ಲೇ, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ ಹಸಿರು ನಿಶಾನೆ ತೋರಿದ್ದಾರೆ.
ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಗಳಿಕೆ ಕೇಸನಿಂದ ದೋಷಮುಕ್ತರನ್ನಾಗಿ ಮಾಡಿ ಕರ್ನಾಟಕ ಹೈಕೋರ್ಟ್ ಮೇ 11ರಂದು ನೀಡಿದ ತೀರ್ಪಿನ ವಿರುದ್ಧ ಕರ್ನಾಟಕದ ಅಡ್ವೊಕೇಟ್ ಜನರಲ್ ಆಗಿರುವ ರವಿ ವರ್ಮಾ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಒಪ್ಪಿಗೆ ನೀಡಿದ್ದಾರೆ. [ಐದನೇ ಬಾರಿ ಮುಖ್ಯಮಂತ್ರಿಯಾಗಿ ಜಯಾ]

ಹತ್ತು ಅಂಶಗಳ ಮೇಲ್ಮನವಿ : ಜಯಲಲಿತಾ, ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರ ಬಿಡುಗಡೆಗೆ ಕಾರಣವಾದ ಆಸ್ತಿಯ ಕೂಡಿಕೆ ಕಳಿಕೆಯಲ್ಲಿ ಆದ ತಪ್ಪು ಲೆಕ್ಕಾಚಾರ ಸೇರಿದಂತೆ 10 ಅಂಶಗಳನ್ನು ಪಟ್ಟಿ ಮಾಡಲಾಗಿದೆ. ಮೇಲ್ಮನವಿಯನ್ನು ಆದಷ್ಟು ಬೇಗನೆ ಸಲ್ಲಿಸಬೇಕು ಎಂದು ಎಜಿ ತಮ್ಮ ಶಿಫಾರಸಿನಲ್ಲಿ ತಿಳಿಸಿದ್ದಾರೆ.
ಮೇಲ್ಮನವಿಯನ್ನು ರಜಾ ಪೀಠದ ಮುಂದೆಯೇ ಸಲ್ಲಿಸಿ, ಕರ್ನಾಟಕ ಭ್ರಷ್ಟಾಚಾರದ ವಿರುದ್ಧವಾಗಿದೆ ಎಂಬ ದಿಟ್ಟ ಸಂದೇಶವನ್ನು ಸಾರಬೇಕು ಎಂಬುದು ಅಡ್ವೊಕೇಟ್ ಜನರಲ್ ರವಿ ವರ್ಮಾ ಅವರ ಸ್ಪಷ್ಟ ನಿಲುವಾಗಿದೆ. ಮೇಲ್ಮನವಿ ಸಲ್ಲಿಸಲು ಸರಕಾರ ಹಿಂದೆಮುಂದೆ ನೋಡುತ್ತಿದ್ದ ಹಿನ್ನೆಲೆಯಲ್ಲಿ ವಿರೋಧಪಕ್ಷಗಳಿಂದ ಮತ್ತಿತರ ಸಂಘಸಂಸ್ಥೆಗಳಿಂದ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. [ಜಯಾ ಬಂಧಮುಕ್ತ ಮಾಡಿದ ನ್ಯಾಯಮೂರ್ತಿ ಇವರೇ]
ಕಾನೂನು ಸಚಿವಾಲಯ ಮೇಲ್ಮನವಿಯನ್ನು ಸಿದ್ಧಪಡಿಸುತ್ತಿದ್ದು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಬಿ.ವಿ. ಆಚಾರ್ಯ ಅವರು ಈ ಮೇಲ್ಮನವಿ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಜಯಲಲಿತಾ ಆಸ್ತಿಯ ಗಣಿತದಲ್ಲಿ ಆದ ಪ್ರಮಾದಗಳನ್ನು ಮೊದಲಿಗೆ ಬೆರಳು ಮಾಡಿ ತೋರಿಸಿದವರೇ ಬಿವಿ ಆಚಾರ್ಯ ಅವರು. ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ತಿರುವುಮುರುವು ಮಾಡುತ್ತದೆ ಎಂಬ ಆಶಾಭಾವನೆಯನ್ನು ಆಚಾರ್ಯ ಹೊಂದಿದ್ದಾರೆ.
ಹೈಕೋರ್ಟ್ ತೀರ್ಪನ್ನು ತಡೆದರೆ : ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ತಡೆಹಿಡಿಯಬೇಕು ಎಂಬ ಮನವಿಯನ್ನು ಸುಪ್ರೀಂಗೆ ರಾಜ್ಯ ಸಲ್ಲಿಸಲಿದೆ. ಆದರೆ, ಇದರ ಸಾಧ್ಯತೆ ಕಡಿಮೆ. ಏಕೆಂದರೆ, ತೀರ್ಪನ್ನು ತಡೆಹಿಡಿದರೆ ವಿಚಾರಣೆ ಕೋರ್ಟ್ ನೀಡಿದ ಶಿಕ್ಷೆ ಜಾರಿಗೆ ಬರಲಿದೆ ಮತ್ತು ಜಯಲಲಿತಾ ಮತ್ತೆ ಮುಖ್ಯಮಂತ್ರಿ ಗದ್ದುಗೆಯಿಂದ ಕೆಳಗಿಳಿಯಬೇಕಾಗುತ್ತದೆ. ತೀರ್ಪಿಗೆ ಸ್ಟೇ ಕೇಳುವ ಬದಲು ಹೈಕೋರ್ಟ್ ತೀರನ್ನೇ ತಿರುವುಮುರುವು ಮಾಡಲು ರಾಜ್ಯ ಸರಕಾರ ಯತ್ನಿಸಲಿದೆ. ಈ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸುವುದೆ? ಸದ್ಯಕ್ಕೆ ಇದು ಮಿಲಿಯನ್ ಡಾಲರ್ ಪ್ರಶ್ನೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications