ಪರಿಷತ್ ಚುನಾವಣೆ : ಪಕ್ಷೇತರರಾಗಿ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆ
ಉಡುಪಿ, ಡಿಸೆಂಬರ್ 07 : ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಅವರ ನಿರ್ಧಾರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಕಾರ್ಯಕರ್ತರು ಅವರ ಬೆಂಬಲಕ್ಕೆ ನಿಂತಿದ್ದಾರೆ. ಇಂದು ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಉಡುಪಿಯಲ್ಲಿ ಸೋಮವಾರ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. [ಪರಿಷತ್ ಫೈಟ್ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ]

ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದಲ್ಲಿ ಎರಡು ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಆದರೆ, ಕಾಂಗ್ರೆಸ್ ಒಬ್ಬರು ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಿದೆ. ಟಿಕೆಟ್ ಬೇಡ, ತಾನೂ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರೂ ಹಿರಿಯ ನಾಯಕ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ. [ಜೆಡಿಎಸ್ 12 ಅಭ್ಯರ್ಥಿಗಳ ಪಟ್ಟಿ]
ಪ್ರತಾಪಚಂದ್ರ ಶೆಟ್ಟಿ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಬಳಿಕ ಆಕಾಂಕ್ಷಿಯಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ, ಟಿಕೆಟ್ ಬೇಡವೆಂದರೂ ಟಿಕೆಟ್ ನೀಡಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಕಣಕ್ಕಿಳಿಸಿರುವುದು ವಿರೋಧಕ್ಕೆ ಕಾರಣವಾಗಿದೆ.
'ಪಕ್ಷದಲ್ಲಿ ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಸೂಕ್ತ ಮಾತುಕತೆ ಮೂಲಕ ಎಲ್ಲವನ್ನೂ ಸರಿಪಡಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications