Get Updates
Get notified of breaking news, exclusive insights, and must-see stories!

ವಿ ಸೋಮಣ್ಣಗೆ ಎದುರಾಯ್ತು ಸಂಕಷ್ಟ: ಕೈ ನಾಯಕರ ಸಂಪರ್ಕದಲ್ಲಿರುವ ಮಾಧುಸ್ವಾಮಿ: ಕಾಂಗ್ರೆಸ್‌ ಸೇರ್ಪಡೆ?

ತುಮಕೂರು, ಮಾರ್ಚ್‌ 19: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ತುಮಕೂರಿನಿಂದ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿದೆ. ಲೋಕಸಭಾ ಚುನಾವಣೆಯ ಟಿಕೆಟ್‌ ಹಂಚಿಕೆಯ ಭಿನ್ನಮತ ಬಿಜೆಪಿಯಲ್ಲಿ ಜೋರಾಗಿದೆ.

ಬಿಜೆಪಿ ಹೈಕಮಾಂಡ್‌ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಗಾಗಿ ಮಾಜಿ ಸಚಿವ ಮಾಧುಸ್ವಾಮಿ ಅವರು ಸಹ ಬೇಡಿಕೆ ಇಟ್ಟಿದ್ರು. ಆದರೆ, ಬಿಜೆಪಿ ಹೈಕಮಾಂಡ್‌ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಮಣೆ ಹಾಕಿದ್ದು, ಹೈಕಮಾಂಡ್‌ ನಿರ್ಧಾರಕ್ಕೆ ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

Jc Madhuswamy May Join Congress Over V Somanna Gets Bjp Ticket In Tumkur

ಲೋಕಸಭಾ ಚುನಾವಣೆಯ ಟಿಕೆಟ್‌ ಹಂಚಿಕೆಯ ಭಿನ್ನಮತ ಬಿಜೆಪಿಯನ್ನು ಸುಡುತ್ತಿದೆ. ತುಮಕೂರಲ್ಲಿ ವಿ ಸೋಮಣ್ಣ ಅವರಿಗೆ ಟಿಕೆಟ್‌ ನೀಡಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಈಗಾಗಲೇ ವಿ ಸೋಮಣ್ಣ ತುಮಕೂರು ಸ್ಪರ್ಧೆಯಿಂದ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕೊರಟಗೆರೆ ಕಾಂಗ್ರೆಸ್‌ ಶಾಸಕ ಹಾಗೂ ಗೃಹ ಸಚಿವ ಜಿ ಪರಮೇಶ್ವರ್‌ ಜೊತೆ ಸಂಪರ್ಕದಲ್ಲಿದ್ದಾರೆ. ಈ ಕುರಿತು ಮಾಧುಸ್ವಾಮಿ ಅವರ ಜೊತೆಗೆ ಕಾಂಗ್ರೆಸ್‌ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಎಸ್‌ಪಿ ಮುದ್ದಹನುಮೇಗೌಡರನ್ನು ಕಣಕ್ಕಿಳಿಸಿದೆ. ಇತ್ತ ತುಮಕೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್‌ ನಾಯಕರು ಬಿಜೆಪಿಯ ಅಸಮಾಧಾನಿತರಿಗೆ ಗಾಳ ಹಾಕುತ್ತಿದೆ.

ಇತ್ತ ಮಾಜಿ ಸಚಿವ ವಿ ಸೋಮಣ್ಣ ಲಿಂಗಾಯತ ಸಮುದಾಯಕ್ಕೆ ಸೇರಿದ್ದರೂ ತುಮಕೂರಿನಲ್ಲಿರುವ ಬಹುಸಂಖ್ಯಾತ ನೊಳಂಬ ಲಿಂಗಾಯತರಲ್ಲದ ಕಾರಣ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿರುವ ಕಾಂಗ್ರೆಸ್‌ ನಾಯಕರು ಮಾಧುಸ್ವಾಮಿ ಅವರನ್ನ ಪಕ್ಷಕ್ಕೆ ಕರೆತರುವುದರಿಂದ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗೆ ಸಹಾಯಕವಾಗಲಿದೆ ಎನ್ನುವ ಚರ್ಚೆ ನಡೆದಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಸೋಲು ಅನುಭವಿಸಿದ್ರು, ಇನ್ನೂ ಸೋಲು ಕಂಡ ಮಾಧುಸ್ವಾಮಿ ಲೋಕಸಭಾ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದರು. ಆದರೆ, ಬಿಜೆಪಿ ನಾಯಕರು ವಿ ಸೋಮಣ್ಣ ಅವರಿಗೆ ಮಣೆ ಹಾಕಿರುವುದು ಮಾಧುಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದ್ದು, ಹಲವು ಬಾರಿ ಸ್ವಪಕ್ಷದ ನಾಯಕರ ವಿರುದ್ಧ ಮಾಧುಸ್ವಾಮಿ ಬಹಿರಂಗವಾಗಿ ವಾಗ್ದಾಖಿ ನಡೆಸಿದ್ದಾರೆ.

ಸೋಮಣ್ಣ ಪರ ಪ್ರಚಾರವೂ ಮಾಡುವುದಿಲ್ಲ ಎಂದು ಟಿಕೆಟ್‌ ಕೈ ತಪ್ಪಿದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧವಾಗಿಯೂ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ಮಾಧುಸ್ವಾಮಿ ಅವರು ಕಾಂಗ್ರೆಸ್‌ ಸೇರುವುದರಿಂದ ತುಮಕೂರು ಜಿಲ್ಲೆಯ ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ತುಮಕೂರು ಗ್ರಾಮಾಂತರ, ತುಮಕೂರು ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂಬುದು ಕಾಂಗ್ರೆಸ್‌ ನಾಯಕರ ಲೆಕ್ಕಾಚಾರ.

ಇತ್ತ ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾಜಿ ಸಚಿವ ಮಾಧುಸ್ವಾಮಿ ಅವರು ತಮ್ಮ ಆಪ್ತ ವಲಯ ಹಾಗೂ ಅಭಿಮಾನಿಗಳ ಜೊತೆಗೆ ಸಭೆ ನಡೆಸಿ ಮುಂದಿನ ತಿರ್ಮಾನದ ಕುರಿತು ಚರ್ಚೆ ನಡೆಸಿಲಿದ್ದಾರೆ. ಅಲ್ಲದೇ ಈ ವಾರದೊಳಗೆ ಅಂತಿಮ ತೀರ್ಮಾನವನ್ನ ಮಾಧುಸ್ವಾಮಿ ಅವರು ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+