ಇಲ್ಲಿ ಗುಂಡಿ ಮುಚ್ಚಲು ದುಡ್ಡಿಲ್ಲ, ವಯನಾಡಿಗೆ 100 ಮನೆ ಗಿಫ್ಟ್ ಏಕೆ? ಜೆಡಿಎಸ್
ರಾಜ್ಯದಲ್ಲೇ ಹಲವು ಸಮಸ್ಯೆಗಳಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವು ಪಕ್ಕದ ಕೇರಳದ ಅಭಿವೃದ್ಧಿ ಮಾಡಲು ಮುಂದಾಗಿದೆ ಎನ್ನುವ ದೊಡ್ಡ ಆರೋಪ ಕೇಳಿಬಂದಿದೆ. ಇತ್ತೀಚೆಗೆ ಪ್ರಿಯಾಂಕಾ ಗಾಂಧಿ ಗೆಲುವು ಸಾಧಿಸಿದ ವಯನಾಡಿಗೆ ರಾಜ್ಯ ಸರ್ಕಾರವು 100 ಮನೆ ಕಟ್ಟಿಕೊಡಲು ಮುಂದಾಗಿದೆ ಎಂದು ಜೆಡಿಎಸ್ ಆರೋಪ ಮಾಡಿದೆ. ಇದು ಕರುನಾಡಿಗೆ ಮಾರಿ, ಪರ ರಾಜ್ಯಕ್ಕೆ ಉಪಕಾರಿ, ಹೈಕಮಾಂಡ್ ಗುಲಾಮಗಿರಿ ಎಂದು ವ್ಯಂಗ್ಯ ಮಾಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಸಾವಿರಾರು ರಸ್ತೆಗಳು ಗುಂಡಿಬಿದ್ದು ಹಾಳಾಗಿವೆ. ರಸ್ತೆಗಳು ಅಭಿವೃದ್ಧಿ ಕಾಣದೆ ಜನರ ನರಕಯಾತೆ ಅನುಭವಿಸುತ್ತಿದ್ದಾರೆ. ಆದರೆ, ಹೈಕಮಾಂಡ್ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು, ಕೇರಳ ಸಂಸದರನ್ನು ಮೆಚ್ಚಿಸಲು ಕರ್ನಾಟಕದ ಬೊಕ್ಕಸ ಬರಿದು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದೆ.

ಪ್ರಿಯಾಂಕಾ ಗಾಂಧಿ ಸಂಸದರಾಗಿರುವ ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ಹಾಗೂ ಭೂಮಿ ಖರೀದಿಯ ವೆಚ್ಚವನ್ನೂ ಬರಿಸುವುದಾಗಿ ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಯನಾಡಿಗೆ ಬಂದಿರುವುದೇ ಕನ್ನಡಿಗರಿಗೆ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ ಎಂದು ಆಕ್ರೋಶ ಹೊರಹಾಕಿದೆ.
ಕೇರಳದಲ್ಲಿ ಆನೆ ದಾಳಿಗೆ ಬಲಿಯಾದರೂ ಕರ್ನಾಟಕದ ದುಡ್ಡನ್ನೇ ಕೊಡಬೇಕು. ಈಗ ವಯನಾಡಿಗೆ 100 ಮನೆ ಕೊಟ್ಟಿಕೊಡುತ್ತಿದ್ದಾರೆ. ರಾಜ್ಯದಲ್ಲಿ ಎಷ್ಟೋ ಕುಟುಂಬಗಳು ಸೂರಿಲ್ಲದೇ ನಿರ್ಗತಿಕರಾಗಿದ್ದಾರೆ. ಆದರೆ, ಇಟಲಿ ಮಾತೆ ಮತ್ತು ಅವರ ಮಕ್ಕಳನ್ನು ಮೆಚ್ಚಿಸಲು ಸಿದ್ದರಾಮಯ್ಯ ಅವರು ನಮ್ಮ ನಾಡಿನ ತೆರಿಗೆ ಹಣ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

ರಾಜ್ಯದಲ್ಲಿ 350ಕ್ಕೂ ಹೆಚ್ಚು ಶಿಶುಮರಣಗಳು, 40 ತಾಯಂದಿರ ಸಾವುಗಳು, ವಕ್ಫ್ ಜಿಹಾದ್ನಿಂದ ಭೂಮಿಯನ್ನು ಕಳೆದುಕೊಳ್ಳುವ ರೈತರು, ವೇತನವಿಲ್ಲದ ಆಂಬ್ಯುಲೆನ್ಸ್ ಚಾಲಕರು ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಬೆಂಗಳೂರಿನ ಮೂಲ ಸೌಕರ್ಯಗಳು ಕುಸಿದು ರಾಜ್ಯವು ಹೀನಾಯ ಸ್ಥಿತಿಯಲ್ಲಿದೆ. ಆದರೂ, ತೆರಿಗೆದಾರರ ಹಣವನ್ನು ಕೇರಳದಲ್ಲಿ ಭೂಮಿ ಖರೀದಿಸಲು ಮತ್ತು ಮನೆಗಳನ್ನು ನಿರ್ಮಿಸಲು ಬೇರೆಡೆಗೆ ತಿರುಗಿಸಲಾಗುತ್ತಿದೆ. ಇದೊಂದು ರಾಜ್ಯ ಸರ್ಕಾರದ ದೊಡ್ಡ ಹಗರಣ ಎಂದು ಬಿಜೆಪಿ ಕೂಡ ಆರೋಪ ಮಾಡಿದೆ.
ಇದು ಕಿರೀಟ ರಾಜಕುಮಾರ ರಾಹುಲ್ ಗಾಂಧಿ ಅವರನ್ನು ಸಮಾಧಾನಪಡಿಸುವ ಒಂದು ಅಬ್ಬರದ ಪ್ರಯತ್ನ. ಕರ್ನಾಟಕಕ್ಕೆ ತನ್ನ ಜನರಿಗೆ ಆದ್ಯತೆ ನೀಡುವ ನಾಯಕರ ಅಗತ್ಯವಿದೆಯೇ ಹೊರತು ಬೇರೆಯವರಿಗೆ ತಲೆಬಾಗುವ ಏಜೆಂಟ್ಗಳಿಗಲ್ಲ. ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಟೀಕಿಸಿದೆ.
ಇನ್ನು ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬರೆದಿದ್ದಾರೆ ಎನ್ನಲಾದ ಪತ್ರವನ್ನು ಬಿಜೆಪಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದು, ಇದರಲ್ಲಿ ವಯನಾಡಿನಲ್ಲಿ 100 ಮನೆಗಳನ್ನು ಕಟ್ಟಿಕೊಡಲು ಹಾಗೂ ಅದರ ಭೂಮಿ ಖರೀದಿಯ ವೆಚ್ಚವನ್ನೂ ಬರಿಸುವುದಾಗಿ ಸಿಎಂ ಉಲ್ಲೇಖಿಸಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿವೆ. ಈ ಮೂಲಕ ಹೈಕಮಾಂಡ್ ಅನ್ನು ಮೆಚ್ಚಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ದೂರಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications