ಜೆಡಿಎಸ್, ಮಧುಬಂಗಾರಪ್ಪ ಗೆಲುವಷ್ಟೇ ನನಗೆ ಮುಖ್ಯ: ಗೀತಾ
ಶಿವಮೊಗ್ಗ, ಮಾರ್ಚ್ 23: ಜೆಡಿಎಸ್ ಪಕ್ಷ ಹಾಗೂ ನನ್ನ ತಮ್ಮ ಮಧು ಬಂಗಾರಪ್ಪನ ಗೆಲವಷ್ಟೆ ನನಗೆ ಮುಖ್ಯ ಎಂದು ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಸೊರಬ ಶಾಸಕ ಮಧು ಬಂಗಾರಪ್ಪನವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ತಮ್ಮ ಕುಟುಂಬದ ಇನ್ನೋರ್ವ ಸಹೋದರ ಕುಮಾರ್ ಬಂಗಾರಪ್ಪ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ತಮ್ಮ ನಿಲುವೇನು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಜೆಡಿಎಸ್ ಪಕ್ಷ ಹಾಗೂ ಮಧು ಬಂಗಾರಪ್ಪ ಗೆಲುವಷ್ಟೆ ಮುಖ್ಯವಾಗಿದೆ. ಬೇರೆ ಪಕ್ಷದ ಕುರಿತು ನಾನು ಉತ್ತರಿಸಲ್ಲ' ಎಂದರು.
'ಶಿವಮೊಗ್ಗ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರಗಳನ್ನ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಈಗಾಗಲೇ ಕಳೆದ ಮೂರು ದಿನಗಳಿಂದ ಜೆಡಿಎಸ್ ಪರ ಪ್ರಚಾರ ಮಾಡುತ್ತಿದ್ದೇನೆ. ತೀರ್ಥಹಳ್ಳಿಯಿಂದ ಪ್ರಚಾರ ಪ್ರಾರಂಭಿಸಿದ್ದೇನೆ' ಎಂದರು.

'ಗೀತಾ ಶಿವರಾಜ್ ಕುಮಾರ್ ಕಾಣೆಯಾಗಿದ್ದರು, ಇಂದು ಶಿವಮೊಗ್ಗದಲ್ಲಿ ಪ್ರತ್ಯೆಕ್ಷರಾಗಿದ್ದಾರೆ ಯಾಕೆ? ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟುದಿನ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಅಷ್ಟೆ. ಆದರೆ ವ್ಯಯಕ್ತಿಕವಾಗಿ ಶಿವಮೊಗ್ಗ ಹಾಗೂ ಸೊರಬಕ್ಕೆ ಭೇಟಿ ನೀಡಿದ್ದೇನೆ. ನನ್ನ ತಾಯಿಯ ಸಾವು, ಮಗಳ ನಿಶ್ಚಿತಾರ್ಥ, ಮದುವೆಯಿಂದ ಬ್ಯುಸಿಯಾಗಿದ್ದೆ. ಇವುಗಳ ಮಧ್ಯೆಯೂ ಶಿವಮೊಗ್ಗ ಹಾಗೂ ಸೊರಬಕ್ಕೆ ಬಂದಿದ್ದೆ" ಎಂದು ಉತ್ತರಿಸಿದರು.
ಸುದ್ದಿಗೋಷ್ಟಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ನಿರಂಜನ್, ಮುಖಂಡರಾದ ಶ್ರೀಕಾಂತ್, ಶಾಂತ ಸುರೇಂದ್ರ, ಮೇಯರ್ ನಾಗರಾಜ್ ಕಂಕರಿ, ಮಾಜಿ ಮೇಯರ್ ಏಳುಮಲೈ, ಪಾಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications