ನಿಗಮ ಮಂಡಳಿ ನೇಮಕಕ್ಕೆ ದೇವೇಗೌಡ ಹಸಿರು ನಿಶಾನೆ, ಶಿವರಾತ್ರಿಗೆ ಮುನ್ನಾ ನೇಮಕ
ಬೆಂಗಳೂರು, ಫೆಬ್ರವರಿ 23: ಮಿತ್ರ ಪಕ್ಷ ಕಾಂಗ್ರೆಸ್ ಈಗಾಗಲೇ ನಿಗಮ ಮಂಡಳಿಗೆ ನೇಮಕ ಮಾಡಿ ಎರಡು ತಿಂಗಳು ಆಗುತ್ತಾ ಬಂದಿದ್ದರು, ಜೆಡಿಎಸ್ ಈ ವರೆಗೂ ನಿಗಮ ಮಂಡಳಿ ನೇಮಕಕ್ಕೆ ಆಸಕ್ತಿ ತೋರಿರಲಿಲ್ಲ, ಆದರೆ ಈಗ ಆ ಬಗ್ಗೆ ಗಮನವಹಿಸಿದೆ.
ಶಿವರಾತ್ರಿಗೆ ಮುನ್ನಾ ಜೆಡಿಎಸ್ ಪಕ್ಷವು ನಿಗಮ ಮಂಡಳಿಗೆ ನೇಮಕ ಮಾಡಲು ಇಚ್ಛಿಸಿದ್ದು, ಈಗಾಗಲೇ ದೇವೇಗೌಡ ಅವರು ನಿಗಮ-ಮಂಡಳಿ ಅಂತಿಮ ಪಟ್ಟಿಗೆ ಅಂಕಿತ ಹಾಕಿದ್ದಾರೆ.

ಈಗಾಗಲೇ ಮೊದಲ ಹಂತದಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ 9 ಹಾಲಿ ಶಾಸಕರನ್ನು ನೇಮಕ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ. ಅಲ್ಲದೆ ಮೂರು ಮಂದಿ ವಿಧಾನಪರಿಷತ್ ಸದಸ್ಯರಿಗೂ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದ ಮೇಲೆ ಮಧು ಬಂಗಾರಪ್ಪ ಅವರು ಕಣ್ಣಿಟ್ಟಿದ್ದಾರೆ, ಕೋನರೆಡ್ಡಿ ಅವರು ಸಹ ಇದೇ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.
ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಡಾ.ಅನ್ನದಾನಿ ಡಾ.ಶ್ರೀನಿವಾಸಮೂರ್ತಿ, ನಾರಾಯಣಗೌಡ ಅವರ ಹೆಸರುಗಳು ಪ್ರಸ್ತಾಪವಾಗಿತ್ತಿದ್ದು, ಇನ್ನು ಯಾವುದೂ ಸಹ ಅಧಿಕೃತವಾಗಿ ಪ್ರಕಟಿಸಲಾಗಿಲ್ಲ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಹಂತದಲ್ಲಿ ಸೋತಿದ್ದ ಜೆಡಿಎಸ್ ಅಭ್ಯರ್ಥಿಗಳಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ನಿಗಮ ಮಂಡಳಿಯ ಮೊದಲ ಪಟ್ಟಿ ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ ಅಧಿಸೂಚನೆ ಮಾರ್ಚ್ ಮೊದಲು ಅಥವಾ ಎರಡನೇ ವಾರದಲ್ಲಿ ಘೋಷಣೆ ಆಗಲಿರುವ ಕಾರಣ ಅದಕ್ಕೂ ಮುನ್ನವೇ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸರ್ಕಾರಿ ಆದೇಶ ಹೊರಡಿಸಬೇಕಿರುವ ಕಾರಣ ನಾಳೆಯೇ ಪಟ್ಟಿ ಹೊರಡಿಸುವ ಸಾಧ್ಯತೆ ಇದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications