ನಿಗಮ ಮಂಡಳಿ ನೇಮಕಕ್ಕೆ ದೇವೇಗೌಡ ಹಸಿರು ನಿಶಾನೆ, ಶಿವರಾತ್ರಿಗೆ ಮುನ್ನಾ ನೇಮಕ
ಬೆಂಗಳೂರು, ಫೆಬ್ರವರಿ 23: ಮಿತ್ರ ಪಕ್ಷ ಕಾಂಗ್ರೆಸ್ ಈಗಾಗಲೇ ನಿಗಮ ಮಂಡಳಿಗೆ ನೇಮಕ ಮಾಡಿ ಎರಡು ತಿಂಗಳು ಆಗುತ್ತಾ ಬಂದಿದ್ದರು, ಜೆಡಿಎಸ್ ಈ ವರೆಗೂ ನಿಗಮ ಮಂಡಳಿ ನೇಮಕಕ್ಕೆ ಆಸಕ್ತಿ ತೋರಿರಲಿಲ್ಲ, ಆದರೆ ಈಗ ಆ ಬಗ್ಗೆ ಗಮನವಹಿಸಿದೆ.
ಶಿವರಾತ್ರಿಗೆ ಮುನ್ನಾ ಜೆಡಿಎಸ್ ಪಕ್ಷವು ನಿಗಮ ಮಂಡಳಿಗೆ ನೇಮಕ ಮಾಡಲು ಇಚ್ಛಿಸಿದ್ದು, ಈಗಾಗಲೇ ದೇವೇಗೌಡ ಅವರು ನಿಗಮ-ಮಂಡಳಿ ಅಂತಿಮ ಪಟ್ಟಿಗೆ ಅಂಕಿತ ಹಾಕಿದ್ದಾರೆ.

ಈಗಾಗಲೇ ಮೊದಲ ಹಂತದಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ 9 ಹಾಲಿ ಶಾಸಕರನ್ನು ನೇಮಕ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ. ಅಲ್ಲದೆ ಮೂರು ಮಂದಿ ವಿಧಾನಪರಿಷತ್ ಸದಸ್ಯರಿಗೂ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದ ಮೇಲೆ ಮಧು ಬಂಗಾರಪ್ಪ ಅವರು ಕಣ್ಣಿಟ್ಟಿದ್ದಾರೆ, ಕೋನರೆಡ್ಡಿ ಅವರು ಸಹ ಇದೇ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.
ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಡಾ.ಅನ್ನದಾನಿ ಡಾ.ಶ್ರೀನಿವಾಸಮೂರ್ತಿ, ನಾರಾಯಣಗೌಡ ಅವರ ಹೆಸರುಗಳು ಪ್ರಸ್ತಾಪವಾಗಿತ್ತಿದ್ದು, ಇನ್ನು ಯಾವುದೂ ಸಹ ಅಧಿಕೃತವಾಗಿ ಪ್ರಕಟಿಸಲಾಗಿಲ್ಲ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಹಂತದಲ್ಲಿ ಸೋತಿದ್ದ ಜೆಡಿಎಸ್ ಅಭ್ಯರ್ಥಿಗಳಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ನಿಗಮ ಮಂಡಳಿಯ ಮೊದಲ ಪಟ್ಟಿ ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ ಅಧಿಸೂಚನೆ ಮಾರ್ಚ್ ಮೊದಲು ಅಥವಾ ಎರಡನೇ ವಾರದಲ್ಲಿ ಘೋಷಣೆ ಆಗಲಿರುವ ಕಾರಣ ಅದಕ್ಕೂ ಮುನ್ನವೇ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸರ್ಕಾರಿ ಆದೇಶ ಹೊರಡಿಸಬೇಕಿರುವ ಕಾರಣ ನಾಳೆಯೇ ಪಟ್ಟಿ ಹೊರಡಿಸುವ ಸಾಧ್ಯತೆ ಇದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications