ಜಿಟಿ ದೇವೇಗೌಡರ ಕೋಪ ತಣಿಸಲು ದಾಳ ಉರುಳಿಸಿದ ಜೆಡಿಎಸ್
ಬೆಂಗಳೂರು, ಮಾರ್ಚ್ 03: ಕರ್ನಾಟಕ ಜೆಡಿಎಸ್ ನಾಯಕರು, ಚಾಮುಂಡೇಶ್ವರಿ ಕ್ಷೇತ್ರದ ಪಕ್ಷದ ಶಾಸಕ ಜಿ. ಟಿ. ದೇವೇಗೌಡ ನಡುವಿನ ಮುನಿಸು ಗುಟ್ಟಾಗಿ ಉಳಿದಿಲ್ಲ. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ಜಿ. ಟಿ. ದೇವೇಗೌಡ ದೂರವಾಗಿದ್ದಾರೆ. ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದರೂ ಸಹ ಭಾನುವಾರ ಬೆಂಗಳೂರಿನಲ್ಲಿ ನಡೆದ ಪ್ರಮುಖ ಸಭೆಗೆ ಅವರು ಗೈರಾಗಿದ್ದರು.
ಜಿ. ಟಿ. ದೇವೇಗೌಡ ಮುನಿಸು ಶಮನ ಮಾಡಲು ಜೆಡಿಎಸ್ ದಾಳ ಉರುಳಿಸಿದೆ. ಹುಣಸೂರು ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಪುತ್ರ ಜಿ. ಡಿ. ಹರೀಶ್ ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.

ಸೋಮವಾರ ಈ ಕುರಿತು ಜೆಡಿಎಸ್ ನಾಯಕರು ವಿಧಾನಸಭೆ ಸ್ಪೀಕರ್ಗೆ ಪತ್ರವನ್ನು ಬರೆದಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಹೆಚ್. ಡಿ. ಕುಮಾರ ಸ್ವಾಮಿ ಮತ್ತು ಜಿ. ಟಿ. ದೇವೇಗೌಡ ನಡುವಿನ ಮುನಿಸು ಕಡಿಮೆ ಮಾಡುವ ಪ್ರಯತ್ನ ಮಾಡಿದ್ದಾರೆ.
ಜಿ. ಟಿ. ದೇವೇಗೌಡ ಗೈರು: 2023ರ ವಿಧಾನಸಭೆ ಚುನಾವಣೆ ಬಳಿಕ ಜಿ. ಟಿ. ದೇವೇಗೌಡ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕವಂತೂ ಅವರು ಪಕ್ಷದ ಕಾರ್ಯಕ್ರಮ, ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಮೈಸೂರಿನಲ್ಲಿ ಕಳೆದ ವಾರ ಹೆಚ್. ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದರೂ ಜಿ. ಟಿ. ದೇವೇಗೌಡ ಗೈರಾಗಿದ್ದರು.
ಭಾನುವಾರ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡರ ನೇತೃತ್ವದಲ್ಲಿ ಪಕ್ಷದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ, ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ, ವಿಧಾನಮಂಡಲ ಅಧಿವೇಶನ ಸೇರಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು.
ಆದರೆ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದ ಜಿ. ಟಿ. ದೇವೇಗೌಡ ಈ ಸಭೆಗೆ ಗೈರಾಗಿದ್ದರು. ಪಕ್ಷದ ನಾಯಕರ ಜೊತೆ ಜಿ. ಟಿ. ದೇವೇಗೌಡರ ಕೋಪ ಹೊಸತಲ್ಲ. ಹಿಂದೆಯೂ ಅವರು ಬಂಡಾಯ ಎದ್ದು ಪಕ್ಷಾಂತರ ಮಾಡುವ ಮುನ್ಸೂಚನೆ ಕೊಟ್ಟಿದ್ದರು. ಬಳಿಕ ತಣ್ಣಗಾಗಿದ್ದರು.
ಮೈಸೂರು ಜಿಲ್ಲಾ ರಾಜಕಾರಣದಲ್ಲಿ ಪ್ರಭಾವ ಹಾಗೂ ಹಿಡಿತ ಹೊಂದಿದ್ದಾರೆ. ಜಿ. ಟಿ. ದೇವೇಗೌಡ. ಆದರೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಜೊತೆ ಅವರು ಮುನಿಸಿಕೊಂಡಿದ್ದಾರೆ. ಆದ್ದರಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದಾರೆ.
2018ರ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿಯಲ್ಲಿ ಸೋಲಿಸಿದ ನಾಯಕ ಜಿ. ಟಿ. ದೇವೇಗೌಡ. ಆದರೆ ಪಕ್ಷದಲ್ಲಿ ಅವರಿಗೆ ಸರಿಯಾದ ಸ್ಥಾನ ಮಾನ ನೀಡಿಲ್ಲ ಎಂಬುದು ಅವರ ಮುನಿಸಿಗೆ ಕಾರಣ ಎಂದು ಅಂದಾಜಿಸಲಾಗಿದೆ.
ಕಳೆದ ವಾರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೈಸೂರಿನಲ್ಲಿ ನಡೆಸಿದ ಸಭೆಗೆ ಜಿ. ಟಿ. ದೇವೇಗೌಡ ಗೈರಾಗಿದ್ದರು. ಈ ಕುರಿತು ಮಾತನಾಡಿದ್ದ ನಿಖಿಲ್, "ಅವರು ಕ್ಷೇತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆದ್ದರಿಂದ ಸಭೆಗೆ ಬಂದಿಲ್ಲ. ಪಕ್ಷದ ಹಿರಿಯ ನಾಯಕರು ಅವರು, ತನಗೆ ಅವರ ಬಗ್ಗೆ ಅಪಾರವಾದ ಗೌರವವಿದೆ" ಎಂದು ಹೇಳಿದ್ದರು.
"ಜಿ. ಟಿ. ದೇವೇಗೌಡರಿಗೆ ಯಾವುದೇ ಮುನಿಸು ಇಲ್ಲ. ಅವರ ಮಗ ಮತ್ತು ಆತ್ಮೀಯ ಸ್ನೇಹಿತ ಹರೀಶ್ ಗೌಡ ತನ್ನ ಪಕ್ಕದಲ್ಲೇ ಕೂತಿದ್ದಾರಲ್ಲ. 2025ರ ಹೊಸ ವರ್ಷ ಆರಂಭದಲ್ಲಿ ನಾನು ಎಲ್ಲರಿಗಿಂತ ಮೊದಲು ಫೋನ್ ಮಾಡಿದ್ದು ಜಿ. ಟಿ. ದೇವೇಗೌಡರಿಗೆ" ಎಂದು ತಿಳಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications