ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ: ಬಿಬಿಎಂಪಿ ಚುನಾವಣೆಗೆ ತಯಾರಿ ಸಭೆಯಲ್ಲಿ ಹೆಚ್‌ಡಿಕೆ ಎಚ್ಚರಿಕೆ

ಬೆಂಗಳೂರು, ಜೂನ್‌ 1: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಜೆಡಿಎಸ್‌ ಇದೀಗ ಮುಂಬರುವ ಬಿಬಿಎಂಪಿ ಚುನಾವಣೆಗೆ ಯತ್ತ ದೃಷ್ಟಿ ನೆಟ್ಟಿದೆ. ಜೆಡಿಎಸ್‌ ನಾಯಕರು ಬಿಬಿಎಂಪಿ ಚುನಾವಣೆನ ತಯಾರಿ ಬಗ್ಗೆ ಗಮನ ಹರಿಸಿದ್ದಾರೆ. ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು.

ಬಿಡದಿಯ ತೋಟದ ಮನೆಯಲ್ಲಿ ಕರೆದಿದ್ದ ಇಂದಿನ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷದ ಮುಖಂಡರಿಗೆ ಕೆಲ ಬಹುಮುಖ್ಯವಾದ ಸೂಚನೆಗಳನ್ನು ನೀಡಿದ್ದಾರೆ.

JDS BBMP Election Preparation Meeting At Kumaraswamy Bidadi Farm House

ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿಗಳು, ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ ಎಂದು ಪಕ್ಷದ ಮುಖಂಡರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದರು.

ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ. ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡ್‌ಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ ಎಂದು ತಾಕೀತು ಮಾಡಿದರು.

ಮಾತು ಮುಂದುವರಿಸಿದ ಕುಮಾರಸ್ವಾಮಿ, ಪ್ರತಿ ವಾರ್ಡಿನ, ಪ್ರತಿ ಮತಗಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿ, ಜನರು ಹೆಚ್ಚೆಚ್ಚು ಪಕ್ಷಕ್ಕೆ ಸೇರಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಿ. ಜನರಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗುವ ರೀತಿಯಲ್ಲಿ ಕೆಲಸ ಮಾಡಿ ಎಂದು ಜೆಡಿಎಸ್‌ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು.

JDS BBMP Election Preparation Meeting At Kumaraswamy Bidadi Farm House

ಯಾವುದೇ ಕ್ಷಣದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆ ಯಾವಾಗ ಬೇಕಾದರೂ ಬರಲಿ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವ ಅಧೈರ್ಯ ಬೇಡ. ಅನೇಕ ಸೋಲುಗಳನ್ನು ದಾಟಿಕೊಂಡು ಜೆಡಿಎಸ್ ಪಕ್ಷ ಫೀನಿಕ್ಸ್‌ ಪಕ್ಷಿಯಂತೆ ಮೇಲೆದ್ದು ಬಂದಿದೆ ಎಂದು ಮುಖಂಡರಿಗೆ ಸ್ಥೈರ್ಯ ತುಂಬಿದರು.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ ಅವರು, ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯುವಂತೆ ಹೇಳಿದರಲ್ಲದೇ, ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್‌ ಮುಖಂಡರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+