ಕೋಮು-ಕುಂಡದಲ್ಲಿ 'ತೆನೆ ಹೊತ್ತ ಮಹಿಳೆ': HD ಕುಮಾರಸ್ವಾಮಿ ಮಹಾಭಾರತದ 'ಶಕುನಿ': ಕಾಂಗ್ರೆಸ್ ಹೀಗಂದಿದ್ದೇಕೆ?
ಬೆಂಗಳೂರು, ಅಕ್ಟೋಬರ್ 19: ಕಾಂಗ್ರೆಸ್ ವಿರುದ್ಧ ನಿರಂತರವಾಗಿ ವಾಗ್ದಾಳಿ, ಆರೋಪ ಮುಂದುವರಿಸಿದ್ದ ಜೆಡಿಎಸ್ ಎಚ್ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಮೈತ್ರಿಗೆ ಕೈ ಜೋಡಿಸಿದ್ದಾರೆ. ಕುಮಾರಸ್ವಾಮಿ ಅವರು ಮೈತ್ರಿ ಒಪ್ಪಲು ಕಾರಣವೇನು ಎನ್ನುತ್ತಲೇ ಕರ್ನಾಟಕ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮೈತ್ರಿ ಉದ್ದೇಶ, ಭ್ರಷ್ಟರು ಎಂದವರ ಜತೆಗೆ ಕೈಜೋಡಿಸುತ್ತಿರುವುದು, ಒಕ್ಕಲಿಗರಿಗೆ ಮಾಡಿದ ದ್ರೋಹ, ವೋಟ್ ಬ್ಯಾಂಕ್ ರಾಜಕಾರಣ ಸೇರಿದಂತೆ ಎಲ್ಲವನ್ನು ಪ್ರಸ್ತಾಪಿಸಿ ಎಚ್ಡಿ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಗುರುವಾರ ಟೀಕಿಸಿದೆ.

ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ಕುಮಾರಸ್ವಾಮಿಯವರ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ. ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ "ಕೋಮು-ಕುಂಡ"ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾಗಿ ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದ್ದ ವೇಳೆ ಬಿಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿಯೇ 'ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ" ಎಂದು ಹೇಳಿದ್ದರು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು ಎಂದು 2017ರ ಮೈತ್ರಿ ರಾಜಕಾರಣ ಜ್ಞಾಪಿಸಿ ತಿವಿದಿದೆ.
ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ?. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ ಎಂದು ವ್ಯಂಗ್ಯವಾಡಿದೆ.

ಬಿಜೆಪಿ ಚುಂಗು ಹಿಡಿದ ನಿಮಗೆ ಆತ್ಮ ಗೌರವ ಇದೆಯೇ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರ್ಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ 'ಅಂಗಿ ಚುಂಗು' ಹಿಡಿದು ನಿಂತಿದ್ದೀರಲ್ಲಾ. ನಿಮಗೇನಾದರೂ ಆತ್ಮಗೌರವ ಇದೆಯೇ?
ಕುಮಾರಸ್ವಾಮಿಯವರೇ,
— Karnataka Congress (@INCKarnataka) October 19, 2023
ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ?
ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!
ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು…
ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ ಎಂದು ಕಾಂಗ್ರೆಸ್ ಭವಿಷ್ಯ ನುಡಿದಿದೆ.

ಒಕ್ಕಲಿಗರು ಮತ ಹಾಕಿಲ್ಲ ಎಂದು ದ್ರೋಹ
ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ.
ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು?. ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ.
ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ?. ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ? ಎಂದು ಕಾಂಗ್ರೆಸ್ ಕುಟುಕಿದೆ.
ನೀವೇ ನಿಮ್ಮ ಪಾಲಿನ ಭಸ್ಮಾಸುರ
ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಎಚ್ಡಿ ಕುಮಾರಸ್ವಾಮಿಯವರೇ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೇಗೆ ಒದ್ದಾಡುತ್ತೀರಿ ಎಂದು ತಿಳಿಸಿದೆ.
ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿದ್ದೀರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ!.
ಕುಮಾರಸ್ವಾಮಿಗೆ ನಿಯತ್ತಿಲ್ಲ, ಇದು ಜಗಜ್ಜಾಹಿರು
ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು "ಕೈ ಹಿಡಿದ" ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!.
ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ. ಅಲ್ ದ ಬೆಸ್ಟ್ ಎಂದು ಕಾಂಗ್ರೆಸ್ ಮಾತಿನುದ್ದಕ್ಕೂ ಕಾಂಗ್ರೆಸ್ ದೂರಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications