ಯಾವ ಶಾಸಕರು ರಾಜೀನಾಮೆ ಕೊಡಲ್ಲ, ಸರ್ಕಾರ ಸುಭದ್ರ : ದೇವೇಗೌಡ
Recommended Video

ಬೆಂಗಳೂರು, ಡಿಸೆಂಬರ್ 24 : 'ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾವ ಶಾಸಕರು ಸಹ ರಾಜೀನಾಮೆ ನೀಡುವುದಿಲ್ಲ. ಆದ್ದರಿಂದ, ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಸುಭದ್ರವಾಗಿ ಕಾರ್ಯ ನಿರ್ವಹಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಸಚಿವ ಸಂಪುಟ ವಿಸ್ತರಣೆಯನ್ನು ಕಾಂಗ್ರೆಸ್ ವರಿಷ್ಠರು ನೋಡಿಕೊಳ್ಳುತ್ತಾರೆ. ಜೆಡಿಎಸ್ ಚಿಕ್ಕ ಪಕ್ಷ. ಸಂಪುಟ ವಿಸ್ತರಣೆ ಮಾಡುತ್ತೇವೆ. ಆದರೆ, ಸದ್ಯಕ್ಕೆ ಇಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

'ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ' ಎಂದು ದೇವೇಗೌಡರು ತಿಳಿಸಿದರು.
'ಜೆಡಿಎಸ್ ಪಕ್ಷವನ್ನು ಕಟ್ಟಲು ಅನೇಕ ರೀತಿಯಲ್ಲಿ ತಯಾರಿ ನಡೆಸುತ್ತಿದ್ದೇವೆ. ಪ್ರತಿ ದಿನ ನಮ್ಮ ಜೊತೆ ಕುಮಾರಸ್ವಾಮಿ ಅವರು ಇರುತ್ತಾರೆ. ಅವರ ಅನುಮತಿ ಪಡೆದು ಸಭೆಗಳನ್ನು ನಡೆಸುತ್ತಿದ್ದೇವೆ. ಚುನಾವಣೆ ಆರಂಭವಾಗುವ ಮುನ್ನ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ' ಎಂದರು.
ನಾವು ಮುಸ್ಲಿಂ ವಿರೋಧಿ ಅಲ್ಲ : 'ಈ ರಾಷ್ಟ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ತಂದಿದ್ದು ಜನತಾದಳ. ರಾಜಕೀಯ ಮೀಸಲಾತಿ, ಹೆಣ್ಣು ಮಕ್ಕಳಿಗೆ ಮೀಸಲಾತಿ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿಕೊಂಡು ಹೋಗುತ್ತಿದ್ದೇವೆ. ನಾವು ಮುಸ್ಲಿಂ ವಿರೋಧಿಗಳಲ್ಲ' ಎಂದು ಹೇಳಿದರು.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್











Click it and Unblock the Notifications