ಯಾವ ಶಾಸಕರು ರಾಜೀನಾಮೆ ಕೊಡಲ್ಲ, ಸರ್ಕಾರ ಸುಭದ್ರ : ದೇವೇಗೌಡ
Recommended Video

ಬೆಂಗಳೂರು, ಡಿಸೆಂಬರ್ 24 : 'ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾವ ಶಾಸಕರು ಸಹ ರಾಜೀನಾಮೆ ನೀಡುವುದಿಲ್ಲ. ಆದ್ದರಿಂದ, ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಸುಭದ್ರವಾಗಿ ಕಾರ್ಯ ನಿರ್ವಹಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಸಚಿವ ಸಂಪುಟ ವಿಸ್ತರಣೆಯನ್ನು ಕಾಂಗ್ರೆಸ್ ವರಿಷ್ಠರು ನೋಡಿಕೊಳ್ಳುತ್ತಾರೆ. ಜೆಡಿಎಸ್ ಚಿಕ್ಕ ಪಕ್ಷ. ಸಂಪುಟ ವಿಸ್ತರಣೆ ಮಾಡುತ್ತೇವೆ. ಆದರೆ, ಸದ್ಯಕ್ಕೆ ಇಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

'ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ' ಎಂದು ದೇವೇಗೌಡರು ತಿಳಿಸಿದರು.
'ಜೆಡಿಎಸ್ ಪಕ್ಷವನ್ನು ಕಟ್ಟಲು ಅನೇಕ ರೀತಿಯಲ್ಲಿ ತಯಾರಿ ನಡೆಸುತ್ತಿದ್ದೇವೆ. ಪ್ರತಿ ದಿನ ನಮ್ಮ ಜೊತೆ ಕುಮಾರಸ್ವಾಮಿ ಅವರು ಇರುತ್ತಾರೆ. ಅವರ ಅನುಮತಿ ಪಡೆದು ಸಭೆಗಳನ್ನು ನಡೆಸುತ್ತಿದ್ದೇವೆ. ಚುನಾವಣೆ ಆರಂಭವಾಗುವ ಮುನ್ನ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ' ಎಂದರು.
ನಾವು ಮುಸ್ಲಿಂ ವಿರೋಧಿ ಅಲ್ಲ : 'ಈ ರಾಷ್ಟ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ತಂದಿದ್ದು ಜನತಾದಳ. ರಾಜಕೀಯ ಮೀಸಲಾತಿ, ಹೆಣ್ಣು ಮಕ್ಕಳಿಗೆ ಮೀಸಲಾತಿ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿಕೊಂಡು ಹೋಗುತ್ತಿದ್ದೇವೆ. ನಾವು ಮುಸ್ಲಿಂ ವಿರೋಧಿಗಳಲ್ಲ' ಎಂದು ಹೇಳಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications