ಬಿಜೆಪಿಗೆ ಅಮಾವಾಸ್ಯೆ ಕರಿ ಛಾಯೆ, ಕಾಂಗ್ರೆಸ್ಗೆ ದೀಪಾವಳಿ
ಬೆಂಗಳೂರು, ನವೆಂಬರ್ 6: ರಾಜ್ಯದ ಐದು ಕ್ಷೇತ್ರಗಳ ಉಪ ಚುನಾವಣೆ ಕೊನೆಗೊಂಡಿದ್ದು ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದಲ್ಲಿ ದೀಪಾವಳಿ ಹೊಸ ಭರವಸೆಯನ್ನು ಹುಟ್ಟಿಸಿದ್ದು, ವಿರೋಧ ಪಕ್ಷ ಬಿಜೆಪಿಯಲ್ಲಿ ಭಾರಿ ನಿರಾಸೆ ಹಾಗೂ ಸೋಲಿನ ದಟ್ಟ ಕರಿ ಛಾಯೆ ಆವರಿಸುವಂತೆ ಮಾಡಿದೆ.
ಐದು ಕ್ಷೇತ್ರಗಳ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಮೈತ್ರಿ ಕೂಟದ ನಾಯಕರು ಗೆಲುವಿಗೆ ನಾನಾ ವಿಶ್ಲೇಷಣೆಗಳನ್ನು ಮಾಡಿದ್ದರೆ ಆತ್ಮಾವಲೋಕನದ ಮಾತುಗಳನ್ನಾಡುತ್ತಿದ್ದಾರೆ. ಮಾತ್ರವಲ್ಲ ಮೈತ್ರಿಕೂಟ ಸರ್ಕಾರ ಅಧಿಕಾರ ದುರುಪಯೋಗ ಹಾಗೂ ಹಣದ ಆಮಿಷಗಳನ್ನು ಒಡ್ಡುವ ಮೂಲಕ ಗೆಲುವು ಸಾಧಿಸಿದೆ ಎಂದು ಕೆಸರೆರೆಚುವ ಪ್ರಯತ್ನ ಮಾಡಿದ್ದಾರೆ.
ಈ ಎಲ್ಲಾ ಸೋಲು ಗೆಲುವಿನ ವಿಶ್ಲೇಷಣೆ ಸಂತೋಷ, ವಿಷಾದದ ನೋವುಗಳನ್ನಾಡಿರುವ ನಾಯಕರು ಯಾವ ಕಾರಣಕ್ಕೆ ಸೋಲಾಯಿತು, ಯಾವ ಕಾರಣಕ್ಕೆ ಗೆಲುವು ತಮ್ಮದಾಯಿತು ಎನ್ನುವುದನ್ನು ನಾನಾ ರೀತಿ ವ್ಯಾಖ್ಯಾನಿಸಿದ್ದಾರೆ. ನಾಯಕರ ಹೇಳಿಕೆಗಳು ಈ ರೀತಿ ಇವೆ.

ಭಾರಿ ಅಂತರದಿಂದ ಜಯಶಾಲಿಯಾಗಿ ಹೊರಹೊಮ್ಮಿದೆ
ಲೋಕಸಭಾ ಉಪ ಚುನಾವಣೆಯಲ್ಲಿ ಭಾರಿ ಅಂತರದಿಂದ ಜಯಶಾಲಿಗಳಾಗಿ ಹೊರಹೊಮ್ಮಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳಾದ ಎಲ್.ಆರ್.. ಶಿವರಾಮೇಗೌಡ ಮತ್ತು ವಿಎಸ್ ಉಗ್ರಪ್ಪ ಹಾಗೂ ವಿಧಾನಸಭಾ ಉಪಚುನಾವಣೆಯಲ್ಲಿ ವಿಯದುಂಧುಬಿ ಮೊಳಗಿಸಿರುವ ಅನಿತಾ ಕುಮಾರಸ್ವಾಮಿ ಮತ್ತು ಆನಂದ ಜಮಖಂಡಿ ಅವರಿಗೆ ಅಭಿನಂದನೆಗಳು ಎಂದು ಸಚಿವ ಆರ್. ದೇಶಪಾಂಡೆ ಹೇಳಿದ್ದಾರೆ.

ಶ್ರೀರಾಮುಲುಗೆ ಧನ್ಯವಾದ ಎಂದ ಡಿಕೆ ಶಿವಕುಮಾರ್
ಚುನಾವಣೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಬಳ್ಳಾರಿಯಲ್ಲಿ ಯಾವುದೇ ಸಂಘರ್ಷ ಇಲ್ಲದೆ ಶಾಂತಿಯುತ ಚುನಾವಣೆ ನಡೆಯಲು ಸಹಕರಿಸಿದ ಶ್ರೀರಾಮುಲು ಅಣ್ಣ ಅವರಿಗೆ ಅಭಿನಂದನೆ ಹೇಳುವುದಾಗಿ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ ಎಂದು ಹೇಳಿದರು.
|
ಬಿಜೆಪಿಗೆ ಸೋಲಿನ ಸರಮಾಲೆ ಆರಂಭ
ಭಾರತೀಯ ಜನತಾ ಪಕ್ಷಕ್ಕೆ ಸೋಲಿನ ಸರಮಾಲೆ ಆರಂಭವಾಗಿದೆ. ಇದು 2019ರ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯಲಿದೆ ರಾಜ್ಯದ ಮತದಾರರು ನಿರ್ಧರಿಸಿ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ಪ್ರೀತಿ ಸಾಬೀತಾಗಿದೆ
ಕಾಂಗ್ರೆಸ್ ಮೇಲೆ ಜನರು ಇಟ್ಟಿರುವ ನಂಬಿಕೆ ಹಾಗೂ ವಿಶ್ವಾಸ ಸಾಬೀತಾಗಿದೆ, ಹಾಗಾಗಿ ಬಳ್ಳಾರಿಯಲ್ಲಿ ಉಗ್ರಪ್ಪ ಗೆಲ್ಲಲು ಸಾಧ್ಯವಾಗಿದೆ.ಹಾಗೆಯೇ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications