ರಾಜ್ಯಕ್ಕೆ ಪ್ರತ್ಯೇಕ ಜೆಡಿಎಸ್-ಕಾಂಗ್ರೆಸ್ ಜಂಟಿ ಪ್ರಣಾಳಿಕೆ

ಬೆಂಗಳೂರು, ಮಾರ್ಚ್‌ 27: ಲೋಕಸಭೆ ಚುನಾವಣೆ 2019ಕ್ಕೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ತಂತಮ್ಮ ಪ್ರಣಾಳಿಕೆಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅಂತೆಯೇ ರಾಜ್ಯಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಪ್ರತ್ಯೇಕವಾಗಿ ಜಂಟಿ ಪ್ರಣಾಳಿಕೆಯನ್ನು ತಯಾರು ಮಾಡುತ್ತಿದೆ. ಅದೂ ಸಹ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

ಕಾಂಗ್ರೆಸ್ ಪಕ್ಷವು ಈಗಾಗಲೇ ಬಡವರ ಖಾತೆಗೆ ವರ್ಷಕ್ಕೆ 72,000 ರೂಪಾಯಿ ಹಣ ಹಾಕುವ ಘೋಷಣೆ ಮಾಡಿಯಾಗಿದೆ. ಈ ಭರವಸೆಯ ಕಾರ್ಯಸಾಧುತ್ವದ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗಳು ಆರಂಭವಾಗಿದೆ. ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ರಾಜ್ಯಕ್ಕೆ ಯಾವ ಭರವಸೆಗಳನ್ನು ನೀಡುತ್ತದೆ ಎಂಬ ಬಗ್ಗೆ ಕುತೂಹಲ ಕೆರಳಿಸಿದೆ.

JDS-Congress releasing sepprate manifesto for Karnataka

ಮಹದಾಯಿ ವಿವಾದ ಬಗೆಹರಿಸುವಿಕೆ, ಕಾವೇರಿ ವಿವಾದ ಬಗೆಹರಿಸುವಿಕೆಯ ಬಗ್ಗೆ ಪ್ರಣಾಳಿಕೆಯಲ್ಲಿ ಉಲ್ಲೇಖ ಇರಲಿದೆ ಎಂದು ಅಂದಾಜಿಸಲಾಗಿದೆ. ಮೈಸೂರು ಸೇರಿದಂತೆ ಇನ್ನೂ ಕೆಲವು ನಗರಗಳಿಗೆ ಮೆಟ್ರೊ ಯೋಜನೆಯ ವಿಸ್ತರಣೆ ಬಗ್ಗೆಯೂ ಪ್ರಸ್ತಾಪ ಇರಬಹುದೆಂದು ಅಂದಾಜಿಸಲಾಗಿದೆ.

ಉತ್ತರ ಕರ್ನಾಟಕಕ್ಕೆ ವಿಶೇಷ ಯೋಜನೆಗಳ ಘೋಷಣೆ, ಉದ್ಯೋಗ ಹೆಚ್ಚಳದ ಬಗ್ಗೆ ಭರವಸೆಗಳು ಜಂಟಿ ಪ್ರಣಾಳಿಕೆಯಲ್ಲಿ ಇರಲಿವೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+