ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ವಜಾ!
ಬೆಂಗಳೂರು ಅಕ್ಟೋಬರ್ 19: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ವಜಾಗೊಳಿಸಲಾಗಿದೆ. ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಹೀಗಾಗಿ ಸಭೆಯ ಬಳಿಕ ಇಬ್ರಾಹಿಂ ಅವರನ್ನು ವಜಾಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಕೋರ್ ಕಮಿಟಿ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ ಈ ತೀರ್ಮಾನ ಕೈಗೊಳ್ಳಲಾಗಿದೆ. 'ನಮ್ಮದು ಒಂದೇ ಪಕ್ಷ ನಾವು ಬಿಜೆಪಿ ಪರ ನಿಲ್ಲುವುದಿಲ್ಲ' ಎಂದು ಹೇಳುವ ಮೂಲಕ ಪಕ್ಷದ ವಿರುದ್ಧ ಬಂಡಾಯವೆದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೆ ಪಕ್ಷ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜೊತೆಗೆ ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯದಲ್ಲಿ ಮುಂಬರುವ ಚುನಾವಣೆಗೆ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಈ ನಡುವೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಸಿದ್ಧವಾಗಿವೆ. ಇದಕ್ಕೆ ಜೆಡಿಎಸ್ ಸ್ವಪಕ್ಷದವರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದನ್ನು ಸಿ.ಎಂ ಇಬ್ರಾಹಿಂ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಜೆಡಿಎಸ್ ಪಕ್ಷದ ವರಿಷ್ಠರು ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾತನಾಡುವಾಗ ಪಕ್ಷದವರೇ ಆದ ಸಿ.ಎಂ ಇಬ್ರಾಹಿಂ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಪಕ್ಷದಲ್ಲಿ ಗೊಂದಲ ವ್ಯಕ್ತವಾಗಿತ್ತು. ಹೀಗಾಗಿ ಬಂಡಾಯವೆದ್ದ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಸ್ಥಾನಕ್ಕೆ ಪಕ್ಷ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿ ಘೋಷಣೆ ಹೊರಡಿಸಿದೆ.
ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಅವರು, 'ಇಬ್ರಾಹಿಂ ಅವರನ್ನು ಪಕ್ಷದಿಂದ ತೆಗೆದಿಲ್ಲ. ಪಕ್ಷದ ಸಂವಿಧಾನದ ಪ್ರಕಾರ ಹೊಸ ಅಧ್ಯಕ್ಷ ರ ನೇಮಕ ಮಾಡಿದ್ದೀವಿ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಿಲ್ಲ. ಕುಮಾರಸ್ವಾಮಿ ಜೊತೆಗೆ ಕೆಲವು ಪದಾಧಿಕಾರಿಗಳ ನೇಮಕ ಮಾಡುತ್ತೇವೆ. ಮುಖಂಡರ ಜೊತೆ ಚರ್ಚೆ ಮಾಡಿ ಇನ್ನು ಮೂರು ದಿನಗಳ ಒಳಗೆ ಮಾಹಿತಿ ನೀಡುತ್ತೇವೆ' ಎಂದರು.
ಸಿ.ಎಂ. ಇಬ್ರಾಹಿಂ ವಾಗ್ದಾಳಿ
ಜೆಡಿಎಸ್ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳ ವಿಸರ್ಜನೆ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ ಸಿ.ಎಂ ಇಬ್ರಾಹಿಂ ವಾಗ್ದಾಳಿ ಮಾಡಿದರು. ಹಂಗಾಮಿ ಅಧ್ಯಕ್ಷರು ಅಂತ ಯಾವ ಆಧಾರದಲ್ಲಿ ಮಾಡಿದ್ದೀರಿ? ದೇವರು ಮತ್ತು ಜನ ನನ್ನ ಕೈಹಿಡಿಯುತ್ತಾರೆ. ಎಲ್ಲವನ್ನೂ ಹೊರಗೆ ತಂದರೆ ಒಳ್ಲೆಯದಲ್ಲ, ವಿಸರ್ಜನೆ ತಪ್ಪು, ಆದೇಶ ವಾಪಸ್ ಪಡೆದು ಸಭೆ ಕರೆಯಿರಿ. ನಾನು ಹೋಗದೇ ಇದ್ದರೆ ಚನ್ನಪಟ್ಟಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಗೆಲ್ಲುತ್ತಿದ್ದರಾ? ಯಾವ ಒಕ್ಕಲಿಗ ನಾಯಕರನ್ನು ಬೆಳೆಸಿದ್ದೀರಿ ನೀವು? ಇಷ್ಟು ದೊಡ್ಡ ವಯಸ್ಸಿನಲ್ಲಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ ಎಂದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications