ಮಾರ್ಚ್19ಕ್ಕೆ ಅಮಾನತ್ತಾದ ಜೆಡಿಎಸ್ ಶಾಸಕರ ವಿಚಾರಣೆ
ಬೆಂಗಳೂರು, ಮಾರ್ಚ್ 17: ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಉಚ್ಛಾಟಿತರಾದ ಏಳು ಜನ ಜೆಡಿಎಸ್ ಶಾಸಕರನ್ನು ಸೋಮವಾರ ವಿಧಾನಸಭಾಧ್ಯಕ್ಷರ ಸಮಕ್ಷಮದಲ್ಲಿ ವಿಚಾರಣೆ ನಡೆಸಲಾಗುವುದು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ವಿಪ್ ಜಾರಿ ಮಾಡಿದ್ದರೂ ಸಹ ಜೆಡಿಎಸ್ನ ಶಾಸಕರಾದ ಎನ್. ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ, ಜಮೀರ್ ಅಹಮದ್ ಖಾನ್, ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯಕ್ ಅವರುಗಳು ಅಡ್ಡಮತದಾನ ಮಾಡಿದ್ದ ಕಾರಣ ಅವರ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಜೆಡಿಎಸ್ ದೂರು ಸಲ್ಲಿಸಿತ್ತು.
ರಾಜ್ಯಸಭಾ ಚುನಾವಣೆ ಮತದಾನ ದಿನ ಹತ್ತಿರವಾಗುತ್ತಿದ್ದು ಕೂಡಲೇ ಉಚ್ಛಾಟಿತ ಶಾಸಕರ ಪ್ರಕರಣವನ್ನು ವಿಚಾರಣೆ ನಡೆಸಿ ಅವರ ಸದಸ್ಯತ್ವ ರದ್ದು ಮಾಡಬೇಕು ಎಂದು ಜೆಡಿಎಸ್ ಒತ್ತಡ ಹೇರಿದೆ, ಹೀಗಾಗಿ ಅಮಾನತ್ತಾದ ಶಾಸಕರಿಗೆ ವಿಧಾನಸಭಾಧ್ಯಕ್ಷರ ಅರೆನ್ಯಾಯಿಕ ಪ್ರಾಧಿಕಾರದ ಮುಂದೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ ಎಂದು ವಿಧಾನ ಸಭಾ ಕಾರ್ಯದರ್ಶಿ ಎಸ್.ಮೂರ್ತಿ ತಿಳಿಸಿದ್ದಾರೆ.

ಅಮಾನತ್ತಾದ ಶಾಸಕರ ವಿಚಾರಣೆ ಇನ್ನೂ ಪೂರ್ಣವಾಗಿರದ ಕಾರಣ ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಏಳೂ ಜನ ಶಾಸಕರಿಗೆ ಮತದಾನಕ್ಕೆ ಅವಕಾಶ ನೀಡಬಾರದು ಎಂದೂ ಜೆಡಿಎಸ್ ಮನವಿ ಮಾಡಿದೆ. ವಿಧಾನಸೌಧದಲ್ಲಿ ಸೋಮವಾರ ಬೆಳಿಗ್ಗೆ ವಿಚಾರಣೆ ನಡೆಯಲಿದ್ದು, ಶಾಸಕರಿಗೆ ಮತದಾನಕ್ಕೆ ಅವಕಾಶ ಸಿಗುತ್ತದೆಯೋ ಇಲ್ಲವೋ ಕಾದು ನೋಡಬೇಕಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications