ಬಿ ಖಾತಾದಿಂದ ಎ ಖಾತಾಗೆ ಬದಲಾವಣೆ: ಬೆಲೆ ಏರಿಕೆ ಪಟ್ಟಿ ಕೊಟ್ಟ ಜೆಡಿಎಸ್
ಬೆಂಗಳೂರು, ನವೆಂಬರ್ 08: ಹೊಸದಾಗಿ ಬಿ ಖಾತಾದಿಂದ ಎ ಖಾತಾ ಎನ್ನುವ ಜನರನ್ನು ಸುಲಿಗೆ ಮಾಡುವ ಬೋಗಸ್ ಕಾರ್ಯಕ್ರಮವೂ ಸೇರಿ ಅಬಕಾರಿ ಶುಲ್ಕ, ಮುದ್ರಾಂಕ ಮತ್ತು ಮಾರ್ಗಸೂಚಿ ಮೌಲ್ಯದ ಶುಲ್ಕ, ವಿದ್ಯುತ್ ದರ ಏರಿಕೆ, ಬಸ್ ಪ್ರಯಾಣ ದರ ಏರಿಕೆ, ಹಾಲು ಮತ್ತು ಮೊಸರು ದರ ಹೆಚ್ಚಳ, ಇದರ ಜೊತೆಗೆ, ಬೆಂಗಳೂರಿನಲ್ಲಿ ಕಸ ಸಂಗ್ರಹಣೆ ಶುಲ್ಕ ಮತ್ತು ಪಾರ್ಕಿಂಗ್ ಶುಲ್ಕ ಕೂಡ ಹೆಚ್ಚಿಸಲಾಗಿದೆ ಎಂದು ಜೆಡಿಎಸ್ ಪಟ್ಟಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ನಗರದ ಪ್ರೀಡಮ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಸಾವಿರಾರು ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿದ ನೆಪ ಇಟ್ಟುಕೊಂಡು ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಜೆಡಿಎಸ್ ಗಂಬೀರವಾಗಿ ಆರೋಪ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು, ರಾಜ್ಯದಲ್ಲಿ ಸುಳ್ಳು ಮತ್ತು ಅಭಿವೃದ್ಧಿ ಮಾರಕ ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಜನ ವಿರೋಧಿ ಕೃತ್ಯಗಳಲ್ಲಿ ನಿರಂತರವಾಗಿ ತೊಡಗಿದೆ. ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ ₹52,000 ಕೋಟಿಯಷ್ಟೇ ಅನುದಾನ ನೀಡುತ್ತಿದ್ದರೂ,₹4,09,549 ಕೋಟಿಯಷ್ಟು ಆಯವ್ಯಯದ ಹಣವೆಲ್ಲವೂ ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಜನರನ್ನು ನಂಬಿಸಿ ಮೋಸ ಮಾಡುತ್ತಿದೆ. ಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿಗೆ ತಿಲಾಂಜಲಿ ಇಟ್ಟು ದರ ಏರಿಕೆ, ಬೆಲೆ ಹೆಚ್ಚಳದ ಮೂಲಕ ಲಕ್ಷ್ಯಾಂತರ ಕೋಟಿ ರುಪಾಯಿಗಳನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿದರು.
ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ತಾನು ಜನರ ಪರವಾಗಿ ಕೆಲಸ ಮಾಡುತ್ತಿರುವುದಾಗಿ ಕಪಟ ನಾಟಕವಾಡುತ್ತಿದೆ ಕಾಂಗ್ರೆಸ್ ಸರ್ಕಾರ. ಜನರಿಂದ ಹಣ ಸುಲಿಗೆ ಮಾಡುವುದು, ಆ ಹಣವನ್ನು ಗುತ್ತಿಗೆದಾರರ ಪೋಷಿತ ಅನಗತ್ಯ, ಅನಪೇಕ್ಷಿತ ಯೋಜನೆಗಳನ್ನು ರೂಪಿಸಿ ಅವುಗಳ ಮೇಲೆ ಸುರಿದಂತೆ ಮಾಡಿ ಮತ್ತೆ ಅದೇ ಹಣವನ್ನು ತನ್ನ ಜೀಬಿಗೆ ಇಳಿಸಿಕೊಳ್ಳುವ ಮೋಸದ ಜಾಲವನ್ನು ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ. ಅಲ್ಲದೆ, ಈ ಸರ್ಕಾರದ ಮೇಲೆ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಎಂದೂ, ಯಾವ ಸರ್ಕಾರದ ಮೇಲೆಯೂ ಬಾರದಷ್ಟು ಭ್ರಷ್ಟಾಚಾರ ಆರೋಪಗಳು ಬಂದಿವೆ. ಆಂತರಿಕ ಕಚ್ಚಾಟ, ಅಧಿಕಾರ ಲಾಲಸೆಯಿಂದ ಹಣ ಕೊಳ್ಳೆ ಹೊಡೆಯುವುದರಲ್ಲಿ ಸಚಿವರುಗಳು ಪೈಪೋಟಿಗೆ ಇಳಿದಿದ್ದಾರೆ ಎಂದು ರಮೇಶ್ ಗೌಡ ದೂರಿದರು.
ದುಡ್ಡು ಕೊಳ್ಳೆ ಹೊಡೆಯಲು ಗ್ರೇಟರ್ ಬೆಂಗಳೂರು ನಗರವನ್ನು ಎಟಿಎಂ ಮಾಡಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರವು, ನಾಗರಿಕರ ಆಸ್ತಿಗಳ ಮೇಲೆ ಅಧಿಕವಾಗಿ ತೆರಿಗೆಯನ್ನು ವಿಧಿಸಿ ನಾಗರೀಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ ಮೂಲಕ 'ತೆರಿಗೆ ಭಯೋತ್ಪಾದನೆ' ಸೃಷ್ಟಿಸುವ ಮೂಲಕ 'ತೆರಿಗೆ ಭಯೋತ್ಪಾದಕ ಸರ್ಕಾರ' ಎಂದು ಕುಖ್ಯಾತಿ ಆಗಿದೆ. ದೇಶದ ಯಾವುದೇ ರಾಜ್ಯದಲ್ಲಿಯೂ ಇಲ್ಲದ ರೀತಿಯಲ್ಲಿ ಜನರನ್ನು ತೆರಿಗೆ ರೂಪದಲ್ಲಿ ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ ಸರ್ಕಾರ 'ತೆರಿಗೆ ಪಿಪಾಸು ಸರ್ಕಾರ'ವಾಗಿ ಜನರನ್ನು ತೆರಿಗೆ ಬೆಂಕಿಯಲ್ಲಿ ಬೇಯಿಸುತ್ತಿದೆ ಎಂದು ಮಾಜಿ ಶಾಸಕರಾದ ರಮೇಶ್ ಗೌಡ ಕಿಡಿಕಾರಿದರು.
ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ಸರಕಾರವು, ಜಿಎಸ್'ಟಿ ಸರಳೀಕರಣದ ಬಳಿಕ ರಾಜ್ಯದಲ್ಲಿ ಬೆಲೆಗಳ ಇಳಿಕೆ ಮಾಡಬೇಕಿತ್ತು. ಆದರೆ ಏಕಾಏಕಿ ನಂದಿನಿ ತುಪ್ಪದ ಬೆಲೆಯನ್ನು ಪ್ರತೀ ಕೆಜಿಗೆ ₹90 ಏರಿಸುವ ಮೂಲಕ ಗ್ರಾಹಕರ ದರೋಡೆಗೆ ಇಳಿದಿದೆ. ಜನ ವಿರೋಧಿ ಕಾಂಗ್ರೆಸ್ ಸರ್ಕಾರದಿಂದ ನಾಡಿನ ಬಡವರು, ಜನಸಾಮಾನ್ಯರ ಉದ್ಧಾರ ಅಸಾಧ್ಯವಾಗಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಎಂದು ರಮೇಶ್ ಗೌಡ ಆರೋಪ ಮಾಡಿದರು.
ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಪಕ್ಷದ ಮುಖಂಡರಾದ ತಿಮ್ಮೇಗೌಡ, ಶೈಲಜಾ ರಾವ್ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾರ್ಯಕರ್ತರು ರಾಜ್ಯ ಸರ್ಕಾರದ ಭೂತದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications