Prajwal Revanna Case: ಕಾಂಗ್ರೆಸ್ ವಿರುದ್ಧ ದೂರು ಕೊಟ್ಟ ಜೆಡಿಎಸ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಆರೋಪ ಸದ್ಯ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ವ್ಯಾಪಕ ಸದ್ದು ಮಾಡುತ್ತಿದೆ. ರಾಜಕೀಯವಾಗಿ ಈ ಪ್ರಕರಣವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ವಾಕ್ಸಮರ ಶುರುವಾಗಿದೆ. ಇದೆಲ್ಲದರ ನಡುವೆ ಜೆಡಿಎಸ್ ಈಗ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ಕೊಟ್ಟಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದು ಜೆಡಿಎಸ್ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆಯಲ್ಲಿ ಹೆಚ್ಡಿ ದೇವೇಗೌಡ ಮತ್ತು ಹೆಚ್ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅವಮಾನ ಆಗುವ ರೀತಿ ನಡೆದುಕೊಂಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

ಎಕ್ಸ್ ಪೋಸ್ಟ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಜೆಡಿಎಸ್ ಅಧಿಕೃತ ಖಾತೆಯಲ್ಲಿ, ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್ಡಿ ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ, ಕೀಳು ಅಭಿರುಚಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಲಾಗಿದೆ." ಎಂದು ಹೇಳಿದೆ.
ಪ್ರಕರಣ ತನಿಖೆಗೆ ಎಸ್ಐಟಿ ರಚನೆ
ಇನ್ನು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಸದ್ಯ ಜರ್ಮನಿಯಲ್ಲಿದ್ದಾರೆ ಎನ್ನುವ ಸುದ್ದಿ ಇದ್ದು, ಪ್ರಕರಣದ ತನಿಖೆ ವೇಳೆ ಅವರನ್ನು ಬಂಧಿಸುವ ಸಾಧ್ಯತೆ ಕೂಡ ಇದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ ತಂದೆ ಹೆಚ್ ಡಿ ರೇವಣ್ಣ, ಇದು ಹಳೆಯ ಕೇಸ್, ರಾಜಕೀಯ ಕಾರಣದಿಂದ ದೂರು ನೀಡಲಾಗಿದೆ. ಇಲ್ಲೇ ಇದ್ದು ಕಾನೂನು ಮೂಲಕ ಉತ್ತರ ಕೊಡುತ್ತೇವೆ, ವಿಚಾರಣೆಗೆ ಕರೆದಾಗ ಪ್ರಜ್ವಲ್ ರೇವಣ್ಣ ಬರುತ್ತಾರೆ ಎಂದು ಹೇಳಿದ್ದಾರೆ.
ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @hd_kumaraswamy ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ, ಕೀಳು ಅಭಿರುಚಿಯ @INCKarnataka ಪಕ್ಷದ ಕಾರ್ಯಕರ್ತರ ವಿರುದ್ಧ ಬೆಂಗಳೂರು ನಗರ… pic.twitter.com/RD8ha8ouTV
— Janata Dal Secular (@JanataDal_S) April 29, 2024
ಪ್ರಜ್ವಲ್ ರೇವಣ್ಣ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications