Rahul Gandhi: ಪ್ರಜ್ವಲ್ ರೇವಣ್ಣ ಬಗ್ಗೆ ಭಾಷಣ; ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ ಜೆಡಿಎಸ್
ಮೇ 2ರಂದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣ ಮಾಡಿದ್ದರ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ ಎಂದು ಎಎನ್ಐ ವರದಿ ಮಾಡಿದೆ.
ಎಚ್ಎಂ ರಮೇಶ್ ಗೌಡ ಎನ್ನುವವರು ರಾಹುಲ್ ಡಿಜಿಪಿ, ಬೆಂಗಳೂರು. ಎಸ್ಪಿ ಶಿವಮೊಗ್ಗ ಮತ್ತು ಎಸ್ಪಿ ರಾಯಚೂರು ಇವರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆ 202 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಕೇಳಿದ್ದಾರೆ.

ದೂರಿನಲ್ಲಿ ಏನಿದೆ?
ಹೆಚ್.ಎಂ.ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಅನೇಕ ಗಂಭೀರ, ಗುರುತರ ಆರೋಪಗಳನ್ನು ಮಾಡಲಾಗಿದೆ. ಕಾಂಗ್ರೆಸ್ ನಾಯಕ, ವೈನಾಡು ಲೋಕಸಭೆ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಇದೇ ಮೇ 2ರಂದು ಹೇಳಿಕೆ ನೀಡಿದ್ದರು.
ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದೆ.
Janata Dal (Secular) files a complaint against Congress leader Rahul Gandhi over his address during his election rallies in Shivamogga & Raichur on May 2, 2024. pic.twitter.com/cp8N8j1cRl
— ANI (@ANI) May 22, 2024
ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ. ನಾನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲಾ ಮಾಹಿತಿ ಇದೆ ಹಾಗೂ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಲ್ಲಿ ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.
ರಾಜ್ಯ ಸರ್ಕಾರವೂ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿದ್ದು, ಕೂಡಲೇ ಈ ತಂಡವು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿ ಕರೆಸಬೇಕು. ನಾನೂರು ಮಹಿಳೆಯರು ಎಂದು ತಪ್ಪು ಮಾಹಿತಿ, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜೆಡಿಎಸ್ ಆಗ್ರಹಪಡಿಸಿದೆ.
ಅಲ್ಲದೆ, ಪೆನ್ ಡ್ರೈವ್ ಹಂಚಿಕೆಯ ಬಗ್ಗೆಯೂ ಜೆಡಿಎಸ್ ಡಿಜಿ ಅವರ ಜತೆ ಮಾತುಕತೆ ನಡೆಸಿತು. ಎಸ್ ಐಟಿ ಏಕಪಕ್ಷೀಯವಾಗಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಆದರೆ ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಗ್ಗೆ ಮೌನ ವಹಿಸಿದೆ. ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಈವರೆಗೆ ಅವರನ್ನು ಎಸ್ ಐಟಿ ಬಂಧನ ಮಾಡಿಲ್ಲ ಎಂದು ನಿಯೋಗ ದೂರಿತು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications