JDS: ದರ್ಶನ್ ಧ್ರುವ ನಾರಾಯಣ್ಗೆ ಸಿಕ್ತು ಭಾರಿ ಬಲ: 7 ಕ್ಷೇತ್ರದ ಅಭ್ಯರ್ಥಿಗಳಿಗೆ ಜೆಡಿಎಸ್ ಬಾಹ್ಯ ಬೆಂಬಲ
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಕ್ಕೆ ಒಂದು ದಿನ ಮೊದಲು ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಘೋಷಿಸಿದೆ. ಒಟ್ಟು 59 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ, ಅಚ್ಚರಿ ಎನ್ನುವಂತೆ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸದೆ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ನೀಡಲು ನಿರ್ಧರಿಸಿದೆ. ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ಗೆ ಬೆಂಬಲ ನೀಡಲು ನಿರ್ಧರಿಸಿದೆ.
ಇನ್ನು ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ ನೀಡಲು ಜೆಡಿಎಸ್ ನಿರ್ಧರಿಸಿದೆ. ಇಲ್ಲಿ ಬಿಜೆಪಿ ಪಕ್ಷದಿಂದ ಬಸವರಾಜ ಮತ್ತಿಮೋಡ, ಕಾಂಗ್ರೆಸ್ನಿಂದ ರೇವೂ ನಾಯಕ ಬೆಳಮಗಿ, ಎಎಪಿಯಿಂದ ಡಾ. ರಾಘವೇಂದ್ರ ಚಿಂಚನಸೂರ ಸ್ಪರ್ಧೆ ಮಾಡುತ್ತಿದ್ದಾರೆ. 2018ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ರೇವೂನಾಯಕ ಬೆಳಮಗಿ ಈ ಬಾರಿ ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದ್ದಾರೆ, ಹೀಗಾಗಿ ಸಿಪಿಐಎಂ ಪಾಂಡುರಂಗ ಮಾವಿನಕರ್ ಅವರಿಗೆ ಬಾಹ್ಯ ಬೆಂಬಲ ನೀಡಲು ನಿರ್ಧರಿಸಿದೆ.

ಬಾಗೇಪಲ್ಲಿ ಕ್ಷೇತ್ರದಲ್ಲಿ ಕೂಡ ಸಿಪಿಐ(ಎಂ)ಗೆ ಜೆಡಿಎಸ್ ಬೆಂಬಲ ನೀಡಲಿದೆ. ಸಿಪಿಐಎಂನಿಂದ ಡಾ. ಅನಿಲ್ ಕುಮಾರ್ ಸ್ಪರ್ಧೆ ಮಾಡಿದ್ದು, ಜೆಡಿಎಸ್ ಬೆಂಬಲ ಪಡೆಯಲಿದ್ದಾರೆ. ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ ಸಿಪಿಐಎಂ ಅಭ್ಯರ್ಥಿ ಎಂ.ನಂಜೇಗೌಡ ಅವರಿಗೂ ಜೆಡಿಎಸ್ ಬಾಹ್ಯ ಬೆಂಬಲ ನೀಡಲಿದೆ. ಸಿ.ವಿ.ರಾಮನ್ನಗರ, ಮಹದೇವಪುರ ಮತ್ತು ವಿಜಯನಗರ ಕ್ಷೇತ್ರದಲ್ಲಿ ಆರ್ಪಿಐ ಅಭ್ಯರ್ಥಿಗಳಿಗೆ ಬೆಂಬ ನೀಡಲು ಜೆಡಿಎಸ್ ನಿರ್ಧಾರ ಮಾಡಿದೆ.
ಆಯನೂರು ಮಂಜುನಾಥ್ಗೆ ಟಿಕೆಟ್ ಕೊಟ್ಟ ಜೆಡಿಎಸ್
ಜೆಡಿಎಸ್ ಮೂರನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮೊದಲನೇ ಪಟ್ಟಿಯಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿತ್ತು, ಎರಡನೇ ಪಟ್ಟಿಯಲ್ಲಿ 49 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿತ್ತು, ಈಗ ಕಾಗವಾಡ, ಮಂಡ್ಯ, ವರುಣಾ, ಹುಕ್ಕೇರಿ, ಶಿವಮೊಗ್ಗ ನಗರ ಸೇರಿದಂತೆ 59 ಕ್ಷೇತ್ರಗಳಿಗೆ ಹೆಸರು ಘೋಷಣೆ ಮಾಡಿದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ ಬಳಿಕ ಜೆಡಿಎಸ್ ಸೇರ್ಪಡೆಗೊಂಡಿರುವ ಆಯನೂರು ಮಂಜುನಾಥ್ಗೆ ಟಿಕೆಟ್ ಸಿಕ್ಕಿದೆ. ಬುಧವಾರ ಬೆಳಿಗ್ಗೆ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ್ದ ಅವರು ಬಿಜೆಪಿಗೆ ಗುಡ್ಬೈ ಹೇಳುವುದಾಗಿ ತಿಳಿಸಿದ್ದರು. ಮಧ್ಯಾಹ್ನ ಚಿತ್ರದುರ್ಗದಲ್ಲಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ಗೆ ಸೇರ್ಪಡೆಯಾಗಿ ಬಿ ಫಾರಂ ಪಡೆದುಕೊಂಡಿದ್ದರು. ಈ ಮೂಲಕ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications