ಡಿಕೆಶಿ ಭೇಟಿಯಾದ ಜೆಡಿಎಸ್ ನಾಯಕ ಆಯನೂರು ಮಂಜುನಾಥ!
ಬೆಂಗಳೂರು, ಆಗಸ್ಟ್ 20; ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಧಾನ ಪರಿಷತ್ನ ಮಾಜಿ ಸದಸ್ಯ, ಜೆಡಿಎಸ್ ನಾಯಕ ಆಯನೂರು ಮಂಜುನಾಥ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಆಯನೂರು ಮಂಜುನಾಥ ಸೋಲು ಕಂಡಿದ್ದರು.
ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಆಯನೂರು ಮಂಜುನಾಥ ಭೇಟಿ ಮಾಡಿದರು. ಆಯನೂರು ಮಂಜುನಾಥ ಕಾಂಗ್ರೆಸ್ ಸೇರಲಿದ್ದಾರೆ? ಎಂಬ ಸುದ್ದಿಗಳ ನಡುವೆ ಈ ಭೇಟಿ ನಡೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಮೂಲಕ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ್ದರು. ಆದರೆ ಈಗ ಅವರು ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನಾಯಕರೊಬ್ಬರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ಶಿವಮೊಗ್ಗದ ರಾಜಕೀಯ ಲೆಕ್ಕಾಚಾರವನ್ನು ಬದಲಾವಣೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.
ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ; ಆಯನೂರು ಮಂಜುನಾಥ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಮಂಗಳೂರು, ಉಡುಪಿ, ತುಮಕೂರು, ಕೊಡಗು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದಿಂದ ಅವರು ಪರಿಷತ್ಗೆ ಆಯ್ಕೆಯಾಗಿದ್ದರು.
ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಉಪ ಚುನಾವಣೆಯಲ್ಲಿ ಆಯನೂರು ಮಂಜುನಾಥ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ?. 2024ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿವೆ. ಆದರೆ ಈ ಕುರಿತು ಯಾವುದೇ ನಾಯಕರು ಅಧಿಕೃತ ಹೇಳಿಕೆ ಕೊಟ್ಟಿಲ್ಲ.
ಕೆ. ಎಸ್. ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಬಳಿಕ ಆಯನೂರು ಮಂಜುನಾಥ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಗ್ಗೆ ಬಹಿರಂಗವಾಗಿಯೂ ಹಲವು ಹೇಳಿಕೆಗಳನ್ನು ನೀಡಿದ್ದರು. ಆದರೆ ಬಿಜೆಪಿ ಈಶ್ವರಪ್ಪ ಆಪ್ತರಾದ ಚನ್ನಬಸಪ್ಪ (ಚೆನ್ನಿ) ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿತು.
ಆಯನೂರು ಮಂಜುನಾಥ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಬಳಿಕ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದರು. ಪಕ್ಷ ಶಿವಮೊಗ್ಗ ನಗರದ ಅಭ್ಯರ್ಥಿಯಾಗಿಯೂ ಅವರನ್ನು ಘೋಷಣೆ ಮಾಡಿತ್ತು.
ಆಯನೂರು ಮಂಜುನಾಥ ಜೆಡಿಎಸ್ ಸೇರುತ್ತಿದ್ದಂತೆಯೇ ಶಿವಮೊಗ್ಗ ನಗರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಕೆ. ಬಿ. ಪ್ರಸನ್ನ ಕುಮಾರ್ ಸಹ ಜೆಡಿಎಸ್ ಸೇರಿದ್ದರು. ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಚುನಾವಣೆಯಲ್ಲಿ ಆಯನೂರು ಮಂಜುನಾಥ ಸೋಲು ಕಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಆಯನೂರು ಮಂಜುನಾಥ 8,863 ಮತಗಳನ್ನು ಮಾತ್ರ ಪಡೆದು ಹೀನಾಯ ಸೋಲು ಕಂಡಿದ್ದರು. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ 96,490 ಮತಗಳನ್ನು ಪಡೆದು ಗೆಲುವು ಕಂಡರು. ಕಾಂಗ್ರೆಸ್ನ ಹೆಚ್. ಸಿ. ಯೋಗೇಶ್ 68,816 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.
ಡಿ. ಕೆ. ಶಿವಕುಮಾರ್ ಭೇಟಿಯಾದ ಆಯನೂರು ಮಂಜುನಾಥ ಕಾಂಗ್ರೆಸ್ ಸೇರಿ 2024ರ ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆಯೇ? ಅಥವ ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿಯಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications