ಹೆಚ್ ಡಿ ದೇವೇಗೌಡರ ಆಪ್ತ ಹೆಚ್.ಟಿ ರಾಜೇಂದ್ರ ನಿಧನ; ರಾಜಕೀಯ ಗಣ್ಯರಿಂದ ಸಂತಾಪ
ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಕಳೆದ ಎರಡು ತಿಂಗಳನಿಂದ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆಪ್ತ ಹಾಗೂ ಜೆಡಿಎಸ್ ಮುಖಂಡರಾದ ಚಿಕ್ಕಮಗಳೂರಿನ ಹೆಚ್.ಟಿ ರಾಜೇಂದ್ರ (72) ಹೃದಯಾಘಾತದಿಂದ ನಿಧನರಾಗಿದ್ದಾರೆ.
NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ JDS ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ JDS ಮುಖಂಡ ರಾಜೇಂದ್ರ ಅವರು HD ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆಪ್ತ ರಾಜೇಂದ್ರ ಅವರ ದಿಢೀರ್ ಸಾವಿನ ಸುದ್ದಿ ಕೇಳಿ ಬೆಂಬಲರಿಗೆ ಆಘಾತಕ್ಕೆ ಒಳಗಾಗಿದ್ದಾರೆ. ಜೆಡಿಎಸ್ ಮುಖಂಡನ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಇನ್ನೂ ದೇವೇಗೌಡರ ಆಪ್ತರಾದ ರಾಜೇಂದ್ರ ಅವರು ಜೆಡಿಎಸ್ ಪಕ್ಷದಿಂದ MLA ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ರು. ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ರು. 72ವರ್ಷದ ಹೆಚ್ ಡಿ ರಾಜೇಂದ್ರ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ನೋವಿನಿಂದ ರಾಜೇಂದ್ರ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದೆದೆ. ರಾಜೇಂದ್ರ ಅವರ ಸಾವಿನ ಸುದ್ದಿ ಕೇಳಿ ಬೆಂಬಲಿಗರು ಆಘಾತಕ್ಕೆ ಒಳಗಾಗಿದ್ದಾರೆ. ರಾಜೇಂದ್ರ ಅವರ ಮೃತಪಟ್ಟಿದ್ದು, ಟ್ವೀಟ್ ಮೂಲಕ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಹೆಚ್ ಡಿ ದೇವೇಗೌಡರಿಂದ ಸಂತಾಪ
ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡರು, ರೈತಪರ ಹೋರಾಟಗಾರರು ಹಾಗೂ ಆತ್ಮೀಯರಾಗಿದ್ದ ಶ್ರೀ ಹೆಚ್.ಟಿ ರಾಜೇಂದ್ರ ಅವರ ನಿಧನ ಬಹಳ ನೋವುಂಟು ಮಾಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸಂತಾಪವನ್ನ ಸೂಚಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಂತಾಪ
ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರ ಆಪ್ತರು, ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭೆ ಕ್ಷೇತ್ರದ ಹಿರಿಯ ನೇತಾರರು ಆಗಿದ್ದ ಶ್ರೀ ಹೆಚ್.ಟಿ. ರಾಜೇಂದ್ರ ಅವರ ನಿಧನದ ವಾರ್ತೆ ಕೇಳಿ ತೀವ್ರ ಆಘಾತವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಅತ್ಯಂತ ನಿಷ್ಠಾವಂತ ಸೇನಾನಿಯಾಗಿ, ತಳಮಟ್ಟದಿಂದ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಅವಿರತವಾಗಿ ಶ್ರಮಿಸಿದ್ದ ಅವರು, ತಮ್ಮ ಇಡೀ ಬದುಕನ್ನು ಪಕ್ಷಕ್ಕೇ ಸಮರ್ಪಿಸಿಕೊಂಡಿದ್ದರು. ಶ್ರೀಯುತರ ಅಗಲಿಕೆ ಬಹುದೊಡ್ಡ ನಷ್ಟ ಹಾಗೂ ವೈಯಕ್ತಿಕವಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಶ್ರೀ ರಾಜೇಂದ್ರ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications