ಸದನದಲ್ಲಿ ಎಚ್ಡಿಕೆ ಡೆಡ್ಲಿ ಸ್ಪೀಚ್: ಡಿಸಿಗೆ ರಕ್ಷಣೆ ಕೊಡಲಾಗದ ನೀವೂ ಒಬ್ಬ ಸಿಎಂ!
ಬೆಂಗಳೂರು, ಜುಲೈ 12: ವಿದೇಶ ಪ್ರವಾಸದ ನಂತರ ಸೋಮವಾರದಿಂದ ಸದನದಲ್ಲಿ ಹಾಜರಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮಂಗಳವಾರ (ಜುಲೈ 12) ಅಕ್ಷರಸ: ಹರಿಹಾಯ್ದಿದ್ದಾರೆ.
ಸದನದಲ್ಲಿ ಮಾತನಾಡುತ್ತಿದ್ದ ಎಚ್ಡಿಕೆ, ಒಬ್ಬ ಜಿಲ್ಲಾಧಿಕಾರಿಗೆ ರಕ್ಷಣೆ ಕೊಡಲಾಗದ ನೀವೂ ಒಬ್ಬ ಮುಖ್ಯಮಂತ್ರಿನಾ? ಬೆಳಗಾವಿಯಲ್ಲಿ ಏನು ನಡೆಯಿತು ಎನ್ನುವುದು ನಿಮಗೆ ಗೊತ್ತಿಲ್ಲವೇ, ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕಿಡಿಕಾರಿದ್ದಾರೆ. (ಗಣಪತಿ ಆತ್ಮಹತ್ಯೆ, ಮೌನ ಮುರಿದ ಜಾರ್ಜ್)
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಎಳೆಎಳೆಯಾಗಿ ಶಾಂತವಾಗಿ ಬಿಚ್ಚಿಟ್ಟ ಕುಮಾರಸ್ವಾಮಿ, ಗಣಪತಿ ಆತ್ಮಹತ್ಯೆಗೆ ಮುನ್ನ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವನ್ನು ಆಧರಿಸಿ ಪ್ರಕರಣ ದಾಖಲಿಸಲು ನಿಮಗೇನು ತೊಂದರೆ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.
ಅಂದು ಕೆಲಸದಿಂದ ನಿವೃತ್ತಿ ನೀಡಿ ಎಂದು VRS ಬಯಸಿದ್ದ ಕೆಂಪಯ್ಯ ಅವರನ್ನು ಗೃಹ ಖಾತೆಯ ಸಲಹೆಗಾರರನ್ನಾಗಿ ನೇಮಿಸಿದ್ದೀರಾ? ಇವರಿಂದ ಯಾವ ರೀತಿಯ ಕೆಲಸವನ್ನು ನಿಮ್ಮಿಂದ ತೆಗೆದುಕೊಳ್ಳಲು ಸಾಧ್ಯ?

ಸರಕಾರದ ಲೋಪದೋಷವನ್ನು ತನ್ನದೇ ರೀತಿಯಲ್ಲಿ ಮಂಡಿಸುತ್ತಿದ್ದ ಕುಮಾರಸ್ವಾಮಿ, ಮುಖ್ಯಮಂತ್ರಿಗಳೇ.. ನಿಮ್ಮ ಸರಕಾರದಿಂದಾಗುತ್ತಿರುವ ತಪ್ಪನ್ನು ತಿದ್ದಿಕೊಳ್ಳಿ. ಇನ್ನು ಎರಡು ವರ್ಷದ ಅಧಿಕಾರದಲ್ಲಾದರೂ ಉತ್ತಮ ಸರಕಾರ ನೀಡಿ ಎಂದು ಸಿದ್ದರಾಮಯ್ಯಗೆ, ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಗಣಪತಿಯವರ ತಂದೆಯಿಂದ ಮತ್ತು ಅವರ ತಮ್ಮನಿಂದ ಆತುರಾತುರವಾಗಿ ಸುಳ್ಳು ಹೇಳಿಕೆ ಪಡೆದುಕೊಂಡು ಅದನ್ನೇ ಜನರ ಮುಂದಿಡುತ್ತಿದ್ದೀರಾ, ಅದನ್ನೇ ಪ್ರಭಲ ಸಾಕ್ಷಿಯೆಂದು ರುಜುವಾತು ಮಾಡಲು ಹೊರಟಿದ್ದೀರಾ, ಇದು ಒಳ್ಳೆದಕ್ಕಲ್ಲಾ.
ಗಣಪತಿಯವರ ಪತ್ನಿಗೆ ಸಾಂತ್ವನ ಹೇಳಲು ನಾನು ಹೋಗಿದ್ದಾಗ, ನನ್ನ ಮತ್ತು ಪತಿಯ ನಡುವೆ ಮನಸ್ತಾಪವಿತ್ತು ಎಂದು ಅಪಪ್ರಚಾರ ಮಾಡಲಾಗುತ್ತಿದೆ, ಈ ರೀತಿಯ ಅಪಪ್ರಚಾರ ಮಾಡಿ ನನ್ನನ್ನೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಬೇಡಿ ಎಂದು ಅವರು ನನ್ನಲ್ಲಿ ಮನವಿ ಮಾಡಿದ್ದಾರೆಂದು ಎಚ್ಡಿಕೆ ಬೇಸರ ವ್ಯಕ್ತ ಪಡಿಸಿದ್ದಾರೆ. (ಜಾರ್ಜ್ ವಿರುದ್ದ ಎಫ್ಐಆರ್: ಓದುಗರ ಅಭಿಪ್ರಾಯ)
ಗಣಪತಿ ಆತ್ಮಹತ್ಯೆಗೆ ಮುನ್ನ ಅವರು ಹೆಸರಿಸಿದ ಜಾರ್ಜ್ ಸೇರಿ ಮೂವರ ರಾಜೀನಾಮೆ ಪಡೆಯಿರಿ. ಜಾರ್ಜ್ ಅವರು ನಿರ್ದೋಷಿಯಾದರೆ ಅವರನ್ನೇ ಡಿಸಿಎಂ ಮಾಡಿ, ಅವರ ರಾಜೀನಾಮೆಯಿಂದ ನಾವೇನು ಸಂಭ್ರಮಿಸುವುದಿಲ್ಲ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಸರಿದಾರಿಗೆ ತರುವ ಮೂಲಕ ನಿಮ್ಮ ಸರಕಾರ ಅಧಿಕಾರದಲ್ಲಿದೆ ಎನ್ನುವುದನ್ನು ಜನರಿಗೆ ರುಜುವಾತು ಪಡಿಸಿ ಎಂದು ಕುಮಾರಸ್ವಾಮಿ, ಸಿಎಂ ವಿರುದ್ದ ವ್ಯಂಗ್ಯವಾಡಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications