ಸುಳ್ಳುರಾಮಯ್ಯ ಎಂದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ!
ಕರ್ನಾಟಕ ಸರ್ಕಾರದ ಎರಡು ಪ್ರಮುಖ ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತೆ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಕೆಲವು ಕಡೆ ಮೂರು ತಿಂಗಳಿನಿಂದ ಇನ್ನೂ ಕೆಲವು ಕಡೆ ಐದು ತಿಂಗಳಿನಿಂದ ಜಮೆ ಆಗಿಲ್ಲ ಎನ್ನುವ ಆರೋಪ ಇದೆ. ಈ ವಿಚಾರವಾಗಿ ವಿರೋಧ ಪಕ್ಷಗಳು ಕಾಂಗ್ರೆಸ್ನ ಮೇಲೆ ಮುಗಿಬಿದ್ದಿವೆ. ಇದೀಗ ಜೆಡಿಎಸ್ ಪಕ್ಷದ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ದಿವಾಳಿ ತನಕ್ಕೆ ಇದೇ ಸಾಕ್ಷಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ನಿಖಿಲ್ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ ಆರ್ಥಿಕತೆಯ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ನ ನಡುವೆ ವಾಕ್ಸಮರ ನಡೆಯುತ್ತಿದೆ. ಈ ರೀತಿ ಇರುವಾಗಲೇ ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕೊಟ್ಟಿದ್ದು. ಕುಸಿಯುತ್ತಿದ್ದ ರಾಜ್ಯದ ಆರ್ಥಿಕತೆಯು ಇದೀಗ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಾಂಗ್ ಕೊಟ್ಟಿದ್ದು. ಇದಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಬೂಟಾಟಿಕೆಗೆ ಮತ್ತೊಂದು ಹೆಸರೇ ಕರ್ನಾಟಕ ಕಾಂಗ್ರೆಸ್. ನಿಮ್ಮ ಬಣ್ಣದ ಮಾತು, ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಇದಕ್ಕಿಂತ ನೈಜ ಸಾಕ್ಷಿಬೇಕಾ. ರಾಜ್ಯದ ಆರ್ಥಿಕತೆ ಸದೃಢವಾಗಿದೆ ಎನ್ನುವ ಮಾನ್ಯ ಸಿಎಂ ಸಿದ್ದರಾಮಯ್ಯ ಅವರೇ, ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡುವ ಬಗ್ಗೆ ಚಿಂತೆ ಯಾಕೆ ಹಾಗೂ ಒಂಬತ್ತು ವಿಶ್ವದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಯಾಕೆ ಅಂತ ಪ್ರಶ್ನೆ ಮಾಡಿದ್ದಾರೆ.
ಒಂಬತ್ತು ವಿಶ್ವವಿದ್ಯಾನಿಲಯಕ್ಕೆ ಐದು ವರ್ಷಕ್ಕೆ 350 ಕೋಟಿ ಕೊಡಲು ಸಾಧ್ಯವಿಲ್ಲವೇ. ಎಸ್ಸಿ/ಎಸ್ಟಿ ವಿದ್ಯಾರ್ಥಿವೇತನವನ್ನು ಏಕೆ ನಿಲ್ಲಿಸಲಾಗಿದೆ. ಗ್ಯಾರಂಟಿ ಯೋಜನೆಗಳಾದ ಯುವನಿಧಿ ಮತ್ತು ಗೃಹಲಕ್ಷ್ಮಿ ಹಣ ಯಾಕೆ ವಿಳಂಬವಾಗಿದೆ. ಈ ಕುರಿತು ರಾಜ್ಯದ ಜನತೆಗೆ ಉತ್ತರಿಸಿ ಎಂದು ಅವರು ಸವಾಲು ಹಾಕಿದ್ದಾರೆ.
ಇನ್ನು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಹ ಟೀಕೆ ಮಾಡಿದೆ. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಕರ್ನಾಟಕ ಮಾದರಿಯ ಎನ್ನುವ ಕಾಂಗ್ರೆಸ್ ಘೋಷಣೆಯನ್ನು "ದಿವಾಳಿ ಮಾಡೆಲ್ ಆಫ್ ಕರ್ನಾಟಕ" ಎಂದು ಟ್ವೀಟ್ ಮಾಡಿದೆ.
* ವಿಶ್ವವಿದ್ಯಾಲಯಗಳು ಕ್ಲೋಸ್
* ಸಾರಿಗೆ ನಿಗಮಗಳು ಬರ್ಬಾದ್
* ರಸ್ತೇಲಿ ಬಾಯ್ತೆರೆದ ಪಾತ್ಹೋಲ್ಸ್
* ರಾಜಧಾನಿ ಬೆಂಗಳೂರು ಧೂಳ್ ಸಿಟಿ
* ಆರೋಗ್ಯ ನೌಕರರಿಗೆ ಸಂಬಳವೇ ಇಲ್ಲ
* ಹಾಲು, ಆಲ್ಕೋಹಾಲ್, ವಾಟರ್, ಕರೆಂಟ್ ಹೈಕ್
* ನಮ್ಮ ಮೆಟ್ರೋ ಬಿಟ್ಟ ಜನ ಬೋಗಿಗಳು ಖಾಲಿ
* ಸಂಪೂರ್ಣ ಹದಗೆಟ್ಟ ಕಾನೂನು ಸುವ್ಯವಸ್ಥೆ
* ರೇಪ್, ಮರ್ಡರ್, ರಾಬರಿ, ರೌಡಿಸಂ ಕಾಮನ್ ಕಾಂಗ್ರೆಸ್ ಬಂದಿದೆ ದಿವಾಳಿ ಮಾಡಿದೆ ಎಂದು ಟ್ವೀಟ್ ಮಾಡಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications