ಸುಳ್ಳುರಾಮಯ್ಯ ಎಂದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ!
ಕರ್ನಾಟಕ ಸರ್ಕಾರದ ಎರಡು ಪ್ರಮುಖ ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತೆ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಕೆಲವು ಕಡೆ ಮೂರು ತಿಂಗಳಿನಿಂದ ಇನ್ನೂ ಕೆಲವು ಕಡೆ ಐದು ತಿಂಗಳಿನಿಂದ ಜಮೆ ಆಗಿಲ್ಲ ಎನ್ನುವ ಆರೋಪ ಇದೆ. ಈ ವಿಚಾರವಾಗಿ ವಿರೋಧ ಪಕ್ಷಗಳು ಕಾಂಗ್ರೆಸ್ನ ಮೇಲೆ ಮುಗಿಬಿದ್ದಿವೆ. ಇದೀಗ ಜೆಡಿಎಸ್ ಪಕ್ಷದ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ದಿವಾಳಿ ತನಕ್ಕೆ ಇದೇ ಸಾಕ್ಷಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ನಿಖಿಲ್ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ ಆರ್ಥಿಕತೆಯ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ನ ನಡುವೆ ವಾಕ್ಸಮರ ನಡೆಯುತ್ತಿದೆ. ಈ ರೀತಿ ಇರುವಾಗಲೇ ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕೊಟ್ಟಿದ್ದು. ಕುಸಿಯುತ್ತಿದ್ದ ರಾಜ್ಯದ ಆರ್ಥಿಕತೆಯು ಇದೀಗ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಾಂಗ್ ಕೊಟ್ಟಿದ್ದು. ಇದಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಬೂಟಾಟಿಕೆಗೆ ಮತ್ತೊಂದು ಹೆಸರೇ ಕರ್ನಾಟಕ ಕಾಂಗ್ರೆಸ್. ನಿಮ್ಮ ಬಣ್ಣದ ಮಾತು, ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಇದಕ್ಕಿಂತ ನೈಜ ಸಾಕ್ಷಿಬೇಕಾ. ರಾಜ್ಯದ ಆರ್ಥಿಕತೆ ಸದೃಢವಾಗಿದೆ ಎನ್ನುವ ಮಾನ್ಯ ಸಿಎಂ ಸಿದ್ದರಾಮಯ್ಯ ಅವರೇ, ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡುವ ಬಗ್ಗೆ ಚಿಂತೆ ಯಾಕೆ ಹಾಗೂ ಒಂಬತ್ತು ವಿಶ್ವದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಯಾಕೆ ಅಂತ ಪ್ರಶ್ನೆ ಮಾಡಿದ್ದಾರೆ.
ಒಂಬತ್ತು ವಿಶ್ವವಿದ್ಯಾನಿಲಯಕ್ಕೆ ಐದು ವರ್ಷಕ್ಕೆ 350 ಕೋಟಿ ಕೊಡಲು ಸಾಧ್ಯವಿಲ್ಲವೇ. ಎಸ್ಸಿ/ಎಸ್ಟಿ ವಿದ್ಯಾರ್ಥಿವೇತನವನ್ನು ಏಕೆ ನಿಲ್ಲಿಸಲಾಗಿದೆ. ಗ್ಯಾರಂಟಿ ಯೋಜನೆಗಳಾದ ಯುವನಿಧಿ ಮತ್ತು ಗೃಹಲಕ್ಷ್ಮಿ ಹಣ ಯಾಕೆ ವಿಳಂಬವಾಗಿದೆ. ಈ ಕುರಿತು ರಾಜ್ಯದ ಜನತೆಗೆ ಉತ್ತರಿಸಿ ಎಂದು ಅವರು ಸವಾಲು ಹಾಕಿದ್ದಾರೆ.
ಇನ್ನು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಹ ಟೀಕೆ ಮಾಡಿದೆ. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಕರ್ನಾಟಕ ಮಾದರಿಯ ಎನ್ನುವ ಕಾಂಗ್ರೆಸ್ ಘೋಷಣೆಯನ್ನು "ದಿವಾಳಿ ಮಾಡೆಲ್ ಆಫ್ ಕರ್ನಾಟಕ" ಎಂದು ಟ್ವೀಟ್ ಮಾಡಿದೆ.
* ವಿಶ್ವವಿದ್ಯಾಲಯಗಳು ಕ್ಲೋಸ್
* ಸಾರಿಗೆ ನಿಗಮಗಳು ಬರ್ಬಾದ್
* ರಸ್ತೇಲಿ ಬಾಯ್ತೆರೆದ ಪಾತ್ಹೋಲ್ಸ್
* ರಾಜಧಾನಿ ಬೆಂಗಳೂರು ಧೂಳ್ ಸಿಟಿ
* ಆರೋಗ್ಯ ನೌಕರರಿಗೆ ಸಂಬಳವೇ ಇಲ್ಲ
* ಹಾಲು, ಆಲ್ಕೋಹಾಲ್, ವಾಟರ್, ಕರೆಂಟ್ ಹೈಕ್
* ನಮ್ಮ ಮೆಟ್ರೋ ಬಿಟ್ಟ ಜನ ಬೋಗಿಗಳು ಖಾಲಿ
* ಸಂಪೂರ್ಣ ಹದಗೆಟ್ಟ ಕಾನೂನು ಸುವ್ಯವಸ್ಥೆ
* ರೇಪ್, ಮರ್ಡರ್, ರಾಬರಿ, ರೌಡಿಸಂ ಕಾಮನ್ ಕಾಂಗ್ರೆಸ್ ಬಂದಿದೆ ದಿವಾಳಿ ಮಾಡಿದೆ ಎಂದು ಟ್ವೀಟ್ ಮಾಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications