ಮೇ 21ಕ್ಕೆ ಜೆಡಿಎಸ್ ಶಾಸಕಾಂಗ ಸಭೆ: ರೆಸಾರ್ಟ್ ಕಡೆ ಪ್ರಯಾಣ?
ಬೆಂಗಳೂರು, ಮೇ 17: ಲೋಕಸಭೆ ಚುನಾವಣೆ ಫಲಿತಾಂಶ ಬರುವ ಎರಡು ದಿನ ಮೊದಲು, ಮೇ 21 ರಂದು ಜೆಡಿಎಸ್ ಸಹ ಶಾಸಕಾಂಗ ಸಭೆ ನಡೆಸಲಿದೆ. ಅದೇ ದಿನ ಬಿಜೆಪಿಯೂ ಶಾಸಕಾಂಗ ಸಭೆ ನಡೆಯುತ್ತಿದೆ.
ಚುನಾವಣೆ ಫಲಿತಾಂಶಕ್ಕೆ ಎರಡು ದಿನ ಮುಂಚೆ ತಮ್ಮೆಲ್ಲಾ ಶಾಸಕರನ್ನು ಒಟ್ಟುಗೂಡಿಸುತ್ತಿರುವುದು ಸಹಜವಾಗಿ ಕುತೂಹಲ ಕೆರಳಿಸಿದೆ. ಸಭೆಯ ಬಳಿಕ ಎರಡೂ ಪಕ್ಷಗಳ ಶಾಸಕರು ರೆಸಾರ್ಟ್ನತ್ತ ತೆರಳುತ್ತಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದಲ್ಲಿ ಸರ್ಕಾರ ಉರುಳಿಸುವ ಸರ್ವ ಪ್ರಯತ್ನವನ್ನೂ ಮಾಡಲಿದೆ, ಹಾಗಾಗಿಯೇ ಅದು ಫಲಿತಾಂಶದ ಎರಡು ದಿನ ಮುಂಚಿತವಾಗಿ ಸಭೆ ಸೇರಿ ಮುಂದಿನ ಕಾರ್ಯಸೂಚಿಗಳನ್ನು ಚರ್ಚೆ ಮಾಡಲಿದೆ. ಅದೇ ದಿನ ಯಡಿಯೂರಪ್ಪ ಅವರು ಶಾಸಕರುಗಳಿಗೆ ಕೆಲವು ಸೂಚನೆಗಳನ್ನೂ ನೀಡಲಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಸಹ ಅದೇ ದಿನ ತಮ್ಮ ಶಾಸಕರನ್ನೆಲ್ಲಾ ಒಟ್ಟು ಸೇರಿಸುತ್ತಿದ್ದು, ಚುನಾವಣಾ ಫಲಿತಾಂಶ ಊಹಿಸಿದಂತೆ ಬಾರದೇ ಇದ್ದಲ್ಲಿ ತಮ್ಮ ಶಾಸಕರನ್ನು ಭದ್ರವಾಗಿಟ್ಟುಕೊಳ್ಳಲೆಂದು ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.
ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು, ಅಂದು ಶಾಕರಿಗೆ ಹಲವು ಎಚ್ಚರಿಕೆಗಳನ್ನು ಇಬ್ಬರೂ ನಾಯಕರು ನೀಡಲಿದ್ದಾರೆ. ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳುವ ಜರೂರತ್ತು ಜೆಡಿಎಸ್ಗೆ ಹೆಚ್ಚಿದ್ದು ಅದಕ್ಕಾಗಿಯೇ ಈ ಶಾಸಕಾಂಗ ಸಭೆ ಕರೆಯಲಾಗಿದೆ ಎನ್ನಲಾಗುತ್ತಿದೆ.
ಫಲಿತಾಂಶ ಬಂದ ನಂತರ ರಾಜ್ಯ ರಾಜಕಾರಣದಲ್ಲಿ ಭಾರಿ ಪಲ್ಲಟ ನಡೆಯಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಬರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸೇರಿ ಹಲವು ಕಾಂಗ್ರೆಸ್, ಜೆಡಿಎಸ್ ಶಾಸಕರು ಫಲಿತಾಂಶದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಈಶ್ವರಪ್ಪ, ಶ್ರೀರಾಮುಲು ಇತ್ತೀಚೆಗಷ್ಟೆ ಹೇಳಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications