ಸ್ಟಿಂಗ್ ಆಪರೇಶನ್: ಜಿಟಿ ದೇವೇಗೌಡ ಹೇಳುವುದೇನು?
ಬೆಂಗಳೂರು, ಜೂನ್ 03: ರಾಜ್ಯಸಭೆ ವೋಟಿಗಾಗಿ ನೋಟು ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಆರೋಪ ಎದುರಿಸುತ್ತಿರುವ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಒನ್ ಇಂಡಿಯಾದೊಂದಿಗೆ ಮಾತನಾಡಿದ್ದಾರೆ.
ನಾನು ಹಣದ ಬಗ್ಗೆ ಯಾವ ಬಗೆಯ ಆಮಿಷ ಇಟ್ಟಿಲ್ಲ. ರಾಷ್ಟ್ರೀಯ ವಾಹಿನಿಯೊಂದರ ವರದಿಗಾರರು ತಾವು ಎಂದು ಪರಿಚಯ ಮಾಡಿಕೊಂಡ ವ್ಯಕ್ತಿಗಳು ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಮಾತನಾಡಿದ್ದರು ಎಂದು ಹೇಳಿದ್ದಾರೆ.[ಸ್ಟಿಂಗ್ ಆಪರೇಷನ್: ಮೂರು ಕಾಸಿಗೆ ಹರಾಜಾದ ರಾಜ್ಯ ಶಾಸಕರ ಮರ್ಯಾದೆ!]

ವರದಿಗಾರರು ನನ್ನನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಅಭ್ಯರ್ಥಿ ಆಯ್ಕೆ ಬಗ್ಗೆ ಸಭೆ ನಡೆಯಬೇಕಿದೆ ಎಂದು ತಿಳಿಸಿದ್ದೆ. ಇದಾದ ಮೇಲೆ ನಾನು ನನ್ನ ಕೆಲಸದ ನಿಮಿತ್ತ ತೆರಳಿದೆ. ಪುನಃ ಅದೇ ವ್ಯಕ್ತಿಗಳು ಕರೆ ಮಾಡಿ ಅಭ್ಯರ್ಥಿ ಬಗ್ಗೆ ವಿಚಾರ ಮಾಡಲು ಆರಂಭಿಸಿದರು. ನಾನು ಹಿಂದೆ ಹೇಳಿದ ಮಾತನ್ನೇ ಹೇಳಿದೆ.[ವೋಟಿಗಾಗಿ ನೋಟು: ಯಾರು, ಏನು ಹೇಳಿದರು?]
ಬೆಂಗಳೂರಿನ ಹೋಟೇಲ್ ಅಶೋಕದಲ್ಲಿ ಮಾಜಿ ಪ್ರಧಾನಿ, ವರಿಷ್ಠ ದೇವೇಗೌಡ ಅವರೊಂದಿಗೆ ಸಭೆಗೆಂದು ತೆರಳಿದ್ದೆ. ಆಗ ಮತ್ತೆ ಕರೆ ಮಾಡಿದ್ದರು. ಇದನ್ನೆ ಸ್ಟಿಂಗ್ ಆಪರೇಶನ್ ಎಂದು ತೋರಿಸಲಾಗುತ್ತಿದೆ ಎಂದು ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಇದಾದ ಮೇಲೆ ವ್ಯಕ್ತಿಗಳು ನನ್ನ ಅಳಿಯ ರಾಮ್ ಅವರನ್ನು ಗುರಿಯಾಗಿರಿಸಿಕೊಳ್ಳುತ್ತಾರೆ. ಅಲ್ಲಿ ಅವರು ನಾವು ಕಾಂಗ್ರೆಸ್ ಅಭ್ಯರ್ಥಿ ಕೆಸಿ ರಾಮಮೂರ್ತಿ ಪರವಾಗಿ ಮಾತನಾಡಲು ಬಂದಿದ್ದೇವೆ ಎಂದು ಹೇಳಿದ್ದಾರೆ.[ರಾಜ್ಯಸಭೆಗೆ ಸದಸ್ಯರ ಆಯ್ಕೆ ಹೇಗೆ? ಮತ ಲೆಕ್ಕಾಚಾರ ಹೇಗಿರುತ್ತೆ?]
ರಾಮ್ ಜತೆ ಮಾತನಾಡುತ್ತಾ ನಾವು ಹಣ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಈ ವೇಳೆ ರಾಮ್ ನನಗೆ ಕರೆ ಮಾಡಿ ಮಾತನಾಡಿದ್ದಾರೆ. ನಾನು ಅವರನ್ನು ಅಲ್ಲಿಂದ ಕಳಿಸುವಂತೆ ತಿಳಿಸಿದ್ದೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೂ ಮಾತುಕತೆ ಮಾಡಿದ್ದೆ. ಇದನ್ನೇ ಆಧಾರವಾಗಿ ಇಟ್ಟುಕೊಂಡು ಸ್ಟಿಂಗ್ ಆಪರೇಶನ್ ಎಂದು ತೋರಿಸಲಾಗುತ್ತಿದೆ ಎಂದು ದೇವೇಗೌಡ ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications