ಪಕ್ಷದ ಶಾಸಕರು, ಮುಖಂಡರಿಗೆ ಜೆಡಿಎಸ್ ಕಟ್ಟನಿಟ್ಟಿನ ಆದೇಶ
ಬೆಂಗಳೂರು, ಮೇ 25: ಜೆಡಿಎಸ್ ಶಾಸಕರು ಮತ್ತು ಮುಖಂಡರಿಗೆ ಪಕ್ಷವು ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಿದ್ದು, ಇನ್ನು ಮುಂದೆ ಜೆಡಿಎಸ್ನ ಯಾರೂ ಮಾಧ್ಯಮದವರಿಗೆ ಯಾವುದೇ ಹೇಳಿಕೆ ನೀಡಬಾರದೆಂದು ಹೇಳಲಾಗಿದೆ.
ಜೆಡಿಎಸ್ನ ಕಾರ್ಯಾಧ್ಯಕ್ಷರಾದ ಎಂ.ಎಸ್.ನಾರಾಯಣರಾವ್ ಅವರು ಈ ಹೇಳಿಕೆ ಹೊರಡಿಸಿದ್ದು, ಯಾವ ಜೆಡಿಎಸ್ನ ಶಾಸಕರಾಗಲಿ, ಮುಖಂಡರಾಗಲಿ ಇನ್ನು ಮುಂದೆ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಬಾರದು, ಹೇಳಿಕೆ ನೀಡಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

ಇಂದು ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಅಧ್ಯಕ್ಷರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಟಿವಿ ಮಾಧ್ಯಮಗಳಿಗಷ್ಟೆ ಅಲ್ಲದೆ, ಪತ್ರಿಕೆಗಳಿಗೂ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶ ಹೊರಡಿಸಲಾಗಿದೆ.
ಲೋಕಸಭೆ ಚುನಾವಣೆ ಪ್ರಾರಂಭವಾದಾಗಿನಿಂದಲೂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮೇಲೆ ಗರಂ ಆಗಿದ್ದರು. ಮಂಡ್ಯದಲ್ಲಿ ನಿಖಿಲ್ ಗಿಂತಲೂ ಸುಮಲತಾ ಅವರಿಗೆ ಹೆಚ್ಚು ಅನುಕೂಲಕರವಾಗಿ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಯಿತು ಎಂಬುದು ಕುಮಾರಸ್ವಾಮಿ ಅವರ ಸಿಟ್ಟಾಗಿತ್ತು. ಆದ್ದರಿಂದ ಅವರು ಮಾಧ್ಯಮಗಳ ಮೇಲೆ ಸಿಟ್ಟು ಸಹಿತ ಹೊರಹಾಕಿದ್ದರು.
ಸ್ವತಃ ಕುಮಾರಸ್ವಾಮಿ ಅವರು ಸಹ ನಿನ್ನೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಲಿಲ್ಲ. ಕೊನೆಗೆ ಇಂದು ಜೆಡಿಎಸ್ ಪಕ್ಷದ ವತಿಯಿಂದಲೇ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications