BPL Card: ಬಿಪಿಎಲ್ ಎಂದರೆ ದಟ್ಟ ದರದ್ರರು: ವಿವಾದಾತ್ಮ ಪದ ಬಳಸಿದ ಜೆಡಿಎಸ್ ಶಾಸಕ
ಕೋಲಾರ, ನವೆಂಬರ್ 19: ಏಕಾಏಕಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವ ಕುರಿತು ರಾಜ್ಯ ರಾಜಕೀಯದಲ್ಲಿ ಈ ಕುರಿತು ಪರ ವಿರೋಧ ಚರ್ಚೆಯಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದೆ. ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ರೆ, ಇತ್ತ ಬಿಪಿಎಲ್ ಎಂದರೆ ದಟ್ಟ ದರದ್ರರು ಎಂದು ವಿವಾದಾತ್ಮ ಹೇಳಿಕೆಯನ್ನ ಗೋವಿಂದರಾಜು ಅವರು ಮಾತ್ನಾಡಿದ್ದಾರೆ.
ಈ ಕುರಿತು ಕೋಲಾರದಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅವರು ಮಾತನಾಡಿ, ಬಿಲೋ ಪಾವರ್ಟಿ ಲೈನ್ ಎಂದರೆ ದಟ್ಟ ದರಿದ್ರರು, ಪಾವರ್ಟಿ ಲೈನ್ ಗಿಂತ ಕೆಳಗಿರುವವರು ಅಂತಾ ವಿವಾದಿತ ಪದ ಬಳಕೆ ಮಾಡಿದ್ದಾರೆ. ದಟ್ಟ ದರಿದ್ರರು ಎಂದರೆ ಕಷ್ಟದಲ್ಲಿರುವವರು, ನಾವು ಒಂದು ಕಾಲದಲ್ಲಿ ದರಿದ್ರರೆ ಎನ್ನುವ ಮೂಲಕ ತಮ್ಮ ಮಾತನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ 4 ಕೋಟಿ 80 ಲಕ್ಷ ಜನ ಬಿಲೋ ಪಾವರ್ಟಿ ಲೈನ್ ಅವರು ಇದ್ದಾರೆ ಅಂದರೆ ಅರ್ಥವೆ ಇಲ್ಲ, ಅಂದರೆ ಸರ್ಕಾರದ ಯೋಜನೆ ದುರುಪಯೋಗವಾಗುತ್ತಿದೆ ಎಂದರ್ಥ. ಈ ಹಿಂದೆ ಉಮೇಶ್ ಕತ್ತಿಯವರೆ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ರು, ಆಗ ಇದು ರಾಜಕೀಯ ವಿಚಾರವಾಗಿತ್ತು, ಇವತ್ತು ಕೂಲಿ ಮಾಡುವವನು ಸಹ ಒಂದಷ್ಟು ಹಣ ಸಂಪಾದನೆ ಮಾಡುತ್ತಿದ್ದಾರೆ, ಅವರು ಸಹ ಸಮೃದ್ದಿಯಾದ ಜೀವನ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅವರು ತಿಳಿಸಿದ್ದಾರೆ.
ಕೋಲಾರದಲ್ಲಿ ಭಾನುವಾರ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದ್ದು ಬೇರೆ ಅರ್ಥದಲ್ಲಿ. ರಾಜ್ಯದ ಜನರಿಗೆ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ, ಬಿಪಿಎಲ್ ನಿಂದ ಎಪಿಎಲ್ ಮಾಡಬೇಕಾದ್ರೆ ಸರಿಯಾದ ನೀತಿ ನಿಯಮಗಳನ್ನ ಪಾಲಿಸುವಂತೆ ಹೇಳಿದ್ದಾರೆ ಹಾಗಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ನಿಲುವೆ ಬೇರೆ ನಾನು ರಾಜಕೀಯ ಮಾತನಾಡಲ್ಲ ಎಂದು ಹೇಳಿದರು.
ಇನ್ನೂ ರಾಜ್ಯದ ಚನ್ನಪಟ್ಟಣ ಉಪ ಚುನಾವಣೆ ಕುರಿತು ಮಾತನಾಡಿದ ಗೋವಿಂದರಾಜು ಅವರು, ಒಟ್ಟಿಗೆ ಕೆಲಸ ಮಾಡಿದ್ದೇವೆ, ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ, ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಂದಿನ ನಾಯಕ ರೇವಣ್ಣ ಕುಟುಂಬಕ್ಕೆ ಹಿನ್ನೆಡೆ ಇರೋದ್ರಿಂದ, ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರು ಆಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications