BPL Card: ಬಿಪಿಎಲ್ ಎಂದರೆ ದಟ್ಟ ದರದ್ರರು: ವಿವಾದಾತ್ಮ ಪದ ಬಳಸಿದ ಜೆಡಿಎಸ್ ಶಾಸಕ
ಕೋಲಾರ, ನವೆಂಬರ್ 19: ಏಕಾಏಕಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವ ಕುರಿತು ರಾಜ್ಯ ರಾಜಕೀಯದಲ್ಲಿ ಈ ಕುರಿತು ಪರ ವಿರೋಧ ಚರ್ಚೆಯಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದೆ. ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ರೆ, ಇತ್ತ ಬಿಪಿಎಲ್ ಎಂದರೆ ದಟ್ಟ ದರದ್ರರು ಎಂದು ವಿವಾದಾತ್ಮ ಹೇಳಿಕೆಯನ್ನ ಗೋವಿಂದರಾಜು ಅವರು ಮಾತ್ನಾಡಿದ್ದಾರೆ.
ಈ ಕುರಿತು ಕೋಲಾರದಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅವರು ಮಾತನಾಡಿ, ಬಿಲೋ ಪಾವರ್ಟಿ ಲೈನ್ ಎಂದರೆ ದಟ್ಟ ದರಿದ್ರರು, ಪಾವರ್ಟಿ ಲೈನ್ ಗಿಂತ ಕೆಳಗಿರುವವರು ಅಂತಾ ವಿವಾದಿತ ಪದ ಬಳಕೆ ಮಾಡಿದ್ದಾರೆ. ದಟ್ಟ ದರಿದ್ರರು ಎಂದರೆ ಕಷ್ಟದಲ್ಲಿರುವವರು, ನಾವು ಒಂದು ಕಾಲದಲ್ಲಿ ದರಿದ್ರರೆ ಎನ್ನುವ ಮೂಲಕ ತಮ್ಮ ಮಾತನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ 4 ಕೋಟಿ 80 ಲಕ್ಷ ಜನ ಬಿಲೋ ಪಾವರ್ಟಿ ಲೈನ್ ಅವರು ಇದ್ದಾರೆ ಅಂದರೆ ಅರ್ಥವೆ ಇಲ್ಲ, ಅಂದರೆ ಸರ್ಕಾರದ ಯೋಜನೆ ದುರುಪಯೋಗವಾಗುತ್ತಿದೆ ಎಂದರ್ಥ. ಈ ಹಿಂದೆ ಉಮೇಶ್ ಕತ್ತಿಯವರೆ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ರು, ಆಗ ಇದು ರಾಜಕೀಯ ವಿಚಾರವಾಗಿತ್ತು, ಇವತ್ತು ಕೂಲಿ ಮಾಡುವವನು ಸಹ ಒಂದಷ್ಟು ಹಣ ಸಂಪಾದನೆ ಮಾಡುತ್ತಿದ್ದಾರೆ, ಅವರು ಸಹ ಸಮೃದ್ದಿಯಾದ ಜೀವನ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅವರು ತಿಳಿಸಿದ್ದಾರೆ.
ಕೋಲಾರದಲ್ಲಿ ಭಾನುವಾರ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದ್ದು ಬೇರೆ ಅರ್ಥದಲ್ಲಿ. ರಾಜ್ಯದ ಜನರಿಗೆ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ, ಬಿಪಿಎಲ್ ನಿಂದ ಎಪಿಎಲ್ ಮಾಡಬೇಕಾದ್ರೆ ಸರಿಯಾದ ನೀತಿ ನಿಯಮಗಳನ್ನ ಪಾಲಿಸುವಂತೆ ಹೇಳಿದ್ದಾರೆ ಹಾಗಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ನಿಲುವೆ ಬೇರೆ ನಾನು ರಾಜಕೀಯ ಮಾತನಾಡಲ್ಲ ಎಂದು ಹೇಳಿದರು.
ಇನ್ನೂ ರಾಜ್ಯದ ಚನ್ನಪಟ್ಟಣ ಉಪ ಚುನಾವಣೆ ಕುರಿತು ಮಾತನಾಡಿದ ಗೋವಿಂದರಾಜು ಅವರು, ಒಟ್ಟಿಗೆ ಕೆಲಸ ಮಾಡಿದ್ದೇವೆ, ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ, ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಂದಿನ ನಾಯಕ ರೇವಣ್ಣ ಕುಟುಂಬಕ್ಕೆ ಹಿನ್ನೆಡೆ ಇರೋದ್ರಿಂದ, ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರು ಆಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.
-
LPG Good News: ಬೆಂಗಳೂರು ಹೋಟೆಲ್ಗಳಿಗೆ 17,5000 ಸಿಲಿಂಡರ್ ವಿತರಣೆ: ಕೆಎಚ್ ಮುನಿಯಪ್ಪ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral











Click it and Unblock the Notifications