ಸುಮಲತಾ ಅಂಬರೀಶ್ಗೆ ಮೈಸೂರು ಕ್ಷೇತ್ರದ ಟಿಕೆಟ್ ಆಫರ್!
Recommended Video
ಬೆಂಗಳೂರು, ಮಾರ್ಚ್ 08 : ಮಾಜಿ ಸಚಿವ ದಿ.ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಅವರಿಗೆ ಯಾವ ಪಕ್ಷದಿಂದ ಟಿಕೆಟ್ ಸಿಗಲಿದೆ? ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಅಸಮಾಧಾನ ಬಗೆಹರಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್ ನೀಡಲು ಚಿಂತನೆ ನಡೆದಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಜೆಡಿಎಸ್ ಮಂಡ್ಯ ಕ್ಷೇತ್ರವನ್ನು ಸುಮಲತಾ ಅಂಬರೀಶ್ಗೆ ಬಿಟ್ಟುಕೊಡಲು ಒಪ್ಪಿಗೆ ನೀಡಿಲ್ಲ. ಆದ್ದರಿಂದ, ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕೊನೆಯವರೆಗೂ ಕಾಯುತ್ತೇನೆ:ಸುಮಲತಾ ಅಂಬರೀಶ್
ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುವುದನ್ನು ತಪ್ಪಿಸಲು ಕಾಂಗ್ರೆಸ್-ಜೆಡಿಎಸ್ ತಂತ್ರ ರೂಪಿಸಿವೆ. ಆದ್ದರಿಂದ, ಮೈಸೂರು-ಕೊಡಗು ಕ್ಷೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಇದಕ್ಕೆ ಎಚ್.ಡಿ.ದೇವೇಗೌಡ ಅವರು ಒಪ್ಪಿಗೆ ನೀಡಿದ್ದಾರೆ ಎಂಬುದು ಶುಕ್ರವಾರ ಸಂಜೆಯ ಸುದ್ದಿ.
ಬಿಜೆಪಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ:ನಟಿ ಸುಮಲತಾ
'ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾದದರೆ ಮಂಡ್ಯದಿಂ ಮಾತ್ರ' ಎಂದು ಸುಮಲತಾ ಅಂಬರೀಶ್ ಅವರು ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಅವರು ಒಪ್ಪಿಗೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕು.
ಮಂಡ್ಯದಲ್ಲಿ ಸುಮಲತಾ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಮುಖಂಡರು..?
ಸಿ.ಎಚ್.ವಿಜಯ ಶಂಕರ್ ಅವರು ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಂಕಾಕ್ಷಿಯಾಗಿದ್ದರು. ಸುಮಲತಾ ಅವರಿಗೆ ಕ್ಷೇತ್ರದ ಟಿಕೆಟ್ ನೀಡಿದರೆ ವಿಜಯ ಶಂಕರ್ ಅವರ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.