ಸರ್ಕಾರಿ ಶಾಲೆಗಳನ್ನೇ ಹಂತ ಹಂತವಾಗಿ ಮುಚ್ಚುವ ಹುನ್ನಾರವೆ? ಸರ್ಕಾರವನ್ನ ಪ್ರಶ್ನಿಸಿದ ಜೆಡಿಎಸ್
ಶಾಲಾ ಸಮವಸ್ತ್ರ ವಿತರಣೆ ವಿಷಯದಲ್ಲಿ ಸರ್ಕಾರಿ ಶಾಲಾ ಮಕ್ಕಳೆಡೆಗೆ ದಿವ್ಯ ನಿರ್ಲಕ್ಷ ತೋರಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ರಾಜ್ಯ ಬಿಜೆಪಿ ಸರ್ಕಾರ ಮೂರು ಬಿಟ್ಟಿದ್ದು, ನ್ಯಾಯಾಲಯದ ದಾರಿ ತಪ್ಪಿಸಲು ಹೋಗಿ ಮತ್ತೆ ಸಿಕ್ಕಿಬಿದ್
ಬೆಂಗಳೂರು,ಫೆಬ್ರವರಿ15: ಇತ್ತೀಚೆಗಷ್ಟೆ ಶಾಲಾ ಸಮವಸ್ತ್ರ ವಿತರಣೆ ವಿಷಯದಲ್ಲಿ ಸರ್ಕಾರಿ ಶಾಲಾ ಮಕ್ಕಳೆಡೆಗೆ ದಿವ್ಯ ನಿರ್ಲಕ್ಷ ತೋರಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಕೋರ್ಟ್ ಆದೇಶವನ್ನು ಪಾಲಿಸದಷ್ಟು ಉದ್ದಟತನವೆ? ಅಥವಾ ಸರ್ಕಾರಿ ಶಾಲೆಗಳನ್ನೇ ಹಂತ ಹಂತವಾಗಿ ಮುಚ್ಚುವ ಹುನ್ನಾರವೆ? ಎಂದು ಜೆಡಿಎಸ್ ಪ್ರಶ್ನಿಸಿದರು.
ಈ ಕುರಿತು ಜೆಡಿಎಸ್ ರಾಜ್ಯ ಘಟಕ ಟ್ವೀಟ್ ಮಾಡಿದ್ದು, ನೊಂದವರ ನೋವ ನೋಯದವರೆತ್ತ ಬಲ್ಲರೋ? ಎಂಬ ಅಕ್ಕ ಮಹಾದೇವಿಯವರ ಸಾಲಿನಂತೆ, ಸಂಪೂರ್ಣ ಕುಸಿದು ಕೊಳೆತು ಹೋಗಿರುವ ಆಡಳಿತಕ್ಕೆ ಹಿಡಿದ ಕನ್ನಡಿ ಈ ಸುದ್ದಿ. ರಾಜ್ಯದ ಎಲ್ಲ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವ ಬಗ್ಗೆ ಸರ್ಕಾರ, ಅಧಿಕಾರಿಗಳ ಕಳಪೆ ಕಾರ್ಯವೈಖರಿಗೆ ಹೈಕೋರ್ಟ್ ಮತ್ತೆ ಛೀಮಾರಿ ಹಾಕಿದೆ ಎಂದು ಟ್ವೀಟ್ ಮಾಡಿದೆ.
ಇತ್ತೀಚೆಗಷ್ಟೆ ಶಾಲಾ ಸಮವಸ್ತ್ರ ವಿತರಣೆ ವಿಷಯದಲ್ಲಿ ಸರ್ಕಾರಿ ಶಾಲಾ ಮಕ್ಕಳೆಡೆಗೆ ದಿವ್ಯ ನಿರ್ಲಕ್ಷ ತೋರಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಸೂಕ್ತ ದಾಖಲೆ ಕೊಡಲು ಹೇಳಿತ್ತು. ರಾಜ್ಯ @BJP4Karnataka ಸರ್ಕಾರ ಮೂರು ಬಿಟ್ಟಿದ್ದು, ನ್ಯಾಯಾಲಯದ ದಾರಿ ತಪ್ಪಿಸಲು ಹೋಗಿ ಮತ್ತೆ ಸಿಕ್ಕಿಬಿದ್ದಿದೆ. 2/5
— Janata Dal Secular (@JanataDal_S) February 15, 2023
ಇತ್ತೀಚೆಗಷ್ಟೆ ಶಾಲಾ ಸಮವಸ್ತ್ರ ವಿತರಣೆ ವಿಷಯದಲ್ಲಿ ಸರ್ಕಾರಿ ಶಾಲಾ ಮಕ್ಕಳೆಡೆಗೆ ದಿವ್ಯ ನಿರ್ಲಕ್ಷ ತೋರಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಸೂಕ್ತ ದಾಖಲೆ ಕೊಡಲು ಹೇಳಿತ್ತು. ರಾಜ್ಯ ಬಿಜೆಪಿ ಸರ್ಕಾರ ಮೂರು ಬಿಟ್ಟಿದ್ದು, ನ್ಯಾಯಾಲಯದ ದಾರಿ ತಪ್ಪಿಸಲು ಹೋಗಿ ಮತ್ತೆ ಸಿಕ್ಕಿಬಿದ್ದಿದೆ.

ಶಾಲಾ ಮಕ್ಕಳಿಗೆ ನೀಡಬೇಕಿರುವ ಸಮವಸ್ತ್ರ, ಶೂ ಮತ್ತು ಕಾಲುಚೀಲ ವಿತರಿಸಿರುವುದನ್ನು ಪುಷ್ಠೀಕರಿಸುವ ಯಾವ ದಾಖಲೆಯು ಇಲಾಖೆಯ ಅಧಿಕಾರಿಗಳು ನ್ಯಾಯಲಯಕ್ಕೆ ಸಲ್ಲಿಸಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರೆ, ಇಂತಹ ಕನಿಷ್ಠ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ನಿಮಗೆ ಮನಸ್ಸಾದರೂ ಹೇಗೆ ಬಂತು? ಎಂದು ಪ್ರಶ್ನಿಸಿದ್ದಾರೆ.
ಕೋರ್ಟ್ ಆದೇಶವನ್ನು ಪಾಲಿಸದಷ್ಟು ಉದ್ದಟತನವೆ? ಅಥವಾ ಸರ್ಕಾರಿ ಶಾಲೆಗಳನ್ನೇ ಹಂತ ಹಂತವಾಗಿ ಮುಚ್ಚುವ ಹುನ್ನಾರವೆ? ಬಡ, ಕಿರು ಮಧ್ಯಮ ವರ್ಗದ ಮಕ್ಕಳ ಹಕ್ಕಿನ ಕುರಿತು ಈ ಮಟ್ಟದ ಉದಾಸೀನ ಖಂಡನೀಯ. ತೃಣ ಮಾತ್ರದಷ್ಟಾದರೂ ಮಾನವೀಯತೆ ಇದ್ದರೆ, ಕೂಡಲೇ ಆಗಿರುವ ಪ್ರಮಾದ ಸರಿಪಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಹೇಳಿದೆ.

ನ್ಯಾಯಾಲಯದ ಆದೇಶ ಪಾಲಿಸದಿರುವ ಜತೆಗೆ ದಾಖಲೆ ಸಲ್ಲಿಕೆಯಲ್ಲೂ ಸುಳ್ಳು ಹೇಳುವ ಭಂಡತನಕ್ಕೆ ಬಿಜೆಪಿ ಸರ್ಕಾರ ಬಿದ್ದಿದೆ ಎಂಬುದು ನಾಚಿಕೆಗೇಡು. ಇಷ್ಟೊಂದು ಕೀವುಗಟ್ಟಿರುವ ಆಡಳಿತ ಕರ್ನಾಟಕದ ಇತಿಹಾಸದಲ್ಲೇ ಮೊದಲು. ಅಧಿಕಾರದ ಕೊನೆಯ ದಿನಗಳನ್ನು ಎಣಿಸುತ್ತಿರುವ ನಿಮಗೆ ಕನ್ನಡಿಗರು ಮರೆಯಲಾರದ ಪಾಠ ಕಲಿಸುವುದು ಖಂಡಿತ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications