JDS Pancharatna Yatra: ಮೈಸೂರಿನಲ್ಲಿ ಬೃಹತ್ ಜೆಡಿಎಸ್ 'ಪಂಚರತ್ನ ರಥಯಾತ್ರೆ ಸಮಾರೋಪ ಸಮಾರಂಭ': ಲಕ್ಷಾಂತರ ಜನ ಭಾಗಿ
ಮೈಸೂರು, ಮಾರ್ಚ್ 26: ಕರ್ನಾಟಕದ ಸ್ಥಳಿಯ ಪಕ್ಷವಾಗಿರುವ ಜೆಡಿಎಸ್ ನಾಲ್ಕು ತಿಂಗಳ ಕಾಲ ರಾಜ್ಯಾದ್ಯಂತ 'ಪಂಚರತ್ನ ರಥಯಾತ್ರೆ' ಮೂಲಕ ನಡೆಸಿದ ಸಮಾರಂಭಕ್ಕೆ ಇಂದು ತೆರೆ ಬಿದ್ದಿದೆ.
ಸಾಂಸ್ಕೃತಿಕ ನಗರಿ ಮೈಸೂರಿನ ಉತ್ತನಹಳ್ಳಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಜೆಡಿಎಸ್ 'ಪಂಚರತ್ನ ರಥಯಾತ್ರೆ' ಹಮ್ಮಿಕೊಳ್ಳಲಾಗಿದೆ. ಈ ವೇಳೆ ಬಹುದಿನಗಳ ನಂತರ ಅಂದರೆ ಸುಮಾರು ಆರು ತಿಂಗಳ ಬಳಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಲಕ್ಷಾಂತರ ಜನರು ಆಗಮಿಸಿದ್ದರು.

ಈ ವೇಳೆ ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸಾಥ್ ನೀಡಿದರು. ಜೆಡಿಎಸ್ ಪಕ್ಷದ ಪ್ರಮುಖರು ಜಮಾಯಿಸಿದ್ದ ಜನರೆನ್ನೆಲ್ಲ ನೋಡಿ ಭಾವುಕರಾದರು.
ವೇದಿಕೆ ಮುಂಭಾಗ ನಿಗದದಿತ ಸ್ಥಳಕ್ಕೆ ದೇವೇಗೌಡರನ್ನು ಕರೆತರುತ್ತಿದ್ದಂತೆ ಅವರತ್ತ ನೆರೆದಿದ್ದ ಜನರೆಲ್ಲ ಕೈಮಾಡಿ ಘೋಷಣೆ ಕೂಗಿದರು. ಎಲ್ಲರಿಗೂ ದೇವೇಗೌಡರು ಕೈ ಮುಗಿದು ನಮಸ್ಕರಿಸಿದರು. ಪಕ್ಷ ಮತ್ತು ಕುಮಾರಸ್ವಾಮಿಯವರ ಕಾರ್ಯ, ರಥಯಾತ್ರೆ ಕುರಿತು ಅವರು ಮಾತನಾಡಿದರು.

88 ವಿಧಾನಸಭಾ ಕ್ಷೇತ್ರಗಳಲ್ಲಿ 'ರಥಯಾತ್ರೆ'
2022ರ ನವಂಬರ್ 18ರಂದು ಕೋಲಾರದ ಮುಳಬಾಗಿಲು ಕ್ಷೇತ್ರದ ಕುರುಡುಮಲೆಯಲ್ಲಿ ಜೆಡಿಎಸ್ 'ಪಂಚರತ್ನ ರಥಯಾತ್ರೆ'
ಆರಂಭವಾಗಿತ್ತು. ಒಟ್ಟು ನಾಲ್ಕು ತಿಂಗಳಲ್ಲಿ 99 ದಿನಗಳನ್ನು ಪೂರೈಸಿದ ರಥಯಾತ್ರೆ ಯಶಸ್ವಿಯಾಗಿದೆ ಎಂದು ಮುಖಂಡರು ಹರ್ಷ ವ್ಯಕ್ತಪಡಿದರು.
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಎಲ್ಲ ನಾಯಕರು ರಥಯಾತ್ರೆ ಮೂಲಕ ರಾಜ್ಯದಲ್ಲಿ 224 ಕ್ಷೇತ್ರಗಳ ಪೈಕಿ 88 ವಿಧಾನಸಭಾ ಕ್ಷೇತ್ರಗಳಲ್ಲಿ ಅವಿರತ ಸಂಚಾರ ನಡೆಸಿದರು ಮತಯಾಚಿಸಿದರು. ಒಟ್ಟು 5000ಸಾವಿರಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ಕೊಡಲಾಗಿದೆ.
ರಥಯಾತ್ರೆ ವೇಳೆ ತಾವು ರಾಜ್ಯಕ್ಕಾಗಿ ಹಾಕಿಕೊಂಡು ಯೋಜನೆಗಳನ್ನು ಜನರಿಗೆ ತಲುಪಿಸುವ ಜೊತೆಗೆ ಜನರ ಸಮಸ್ಯೆ ಆಲಿಸಿ, ಚುನಾವಣೆ ಪ್ರಣಾಳಿಕೆಯಲ್ಲಿ ಸೇರಿಸುವುದಾಗಿ ಜೆಡಿಎಸ್ ತಿಳಿಸಿದೆ. ರಥಯಾತ್ರೆ ಒಟ್ಟು 10,000 ಕೀಲೋ ಮೀಟರ್ ಕ್ರಮಿಸಿದೆ ಎಂದು ಜೆಡಿಎಸ್ ತಿಳಿಸಿದೆ.
55 ಲಕ್ಷಕ್ಕೂ ಹೆಚ್ಚು ಜನರ ನೇರ ಭಾಗಿ
ಜೆಡಿಎಸ್ ಸಾಮಾಜಿಕ ಜಾಲತಾಣದ ಮೂಲಕ 3 ಕೋಟಿಗೂ ಅಧಿಕ ಜನರನ್ನು ತಲುಪಿದೆ. ಇದೊಂದು ಐತಿಹಾಸಿಕ ರಥಯಾತ್ರೆ, ಮಾಜಿ ಮುಖ್ಯಮಂತ್ರಿ ಒಬ್ಬರು ದೇಶದಲ್ಲಿಯೇ ನಡೆಸಿದ ಮೊದಲ ಯಾತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಎಚ್ಡಿ ಕುಮಾರಸ್ವಾಮಿ ಅವರು ದಿನದ 18 ಗಂಟೆಗಳ ಕಾಲ ನಿರಂತರ ಪ್ರವಾಸ ಮಾಡಿದ್ದಾರೆ. ಪಂಚರತ್ನ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗಿದೆ. ಪಂಚರತ್ನ ರಥಯಾತ್ರೆಯಲ್ಲಿ ಅರ್ಧಕೋಟಿಗೂ ಹೆಚ್ಚು ಜನರು ನೇರವಾಗಿ ಪಾಲ್ಗೊಂಡಿದ್ದರು ಎಂದು ಜೆಡಿಎಸ್ ತಿಳಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications