ಜೆಡಿಎಸ್ ರಥಯಾತ್ರೆ ಡಿ.15 ರಿಂದ ಪುನಾರಂಭ: ಸಮಾವೇಶ, ಎಚ್ಡಿಕೆ ಜನ್ಮದಿನ ಕಾರ್ಯಕ್ರಮದ ವಿವಿರ ಇಲ್ಲಿದೆ
ಬೆಂಗಳೂರು, ಡಿಸೆಂಬರ್ 14: ಮಳೆಯ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ 'ಪಂಚರತ್ನ ರಥಯಾತ್ರೆ' ನಾಳೆ ಗುರುವಾರದಿಂದ ರಾಮನಗರ ಜಿಲ್ಲೆಯ ಮಾಗಡಿಯಿಂದ ಪುನಾರಂಭಗೊಳ್ಳಲಿದೆ. ನಂತರ ಬೃಹತ್ ಸಮಾವೇಶ, ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನ, ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಗಳು ನಡೆಯಲಿವೆ.
ಪಂಚರತ್ನ ರಥಯಾತ್ರೆ ಪುನರಾರಂಭ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದ್ದ 'ಪಂಚರತ್ನ ರಥಯಾತ್ರೆ' ಮಳೆ ಬಿಡುವು ಕೊಟ್ಟ ಹಿನ್ನೆಲೆ ರಾಮನಗರ ಜಿಲ್ಲೆಯಿಂದ ಮತ್ತೆ ಆರಂಭವಾಗಲಿದೆ. ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ ಎಂದರು.
ಮಾಗಡಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯ ಮತ್ತು ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಂಜೆ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಮಾಗಡಿ ಪಟ್ಟಣದ ಜೆಡಿಎಸ್ ಭವನದಲ್ಲಿ ಬೃಹತ್ ಸಭೆ ನಡೆಯಲಿದೆ. ಅದಾದ ಮೇಲೆ ಶ್ರೀ ಕಲ್ಯಾ ಗೇಟ್ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿ ನಂತರ ಮೆರವಣಿಗೆ ನಡೆಯಲಿದೆ. ಅಂತಿಮವಾಗಿ ಮಾಗಡಿಯ ಕೋಟೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮಾಗಡಿ ಕ್ಷೇತ್ರದ ರಥಯಾತ್ರೆಯಲ್ಲಿ ಶಾಸಕ ಮಂಜುನಾಥ್ ಅವರು ಮಾಜಿ ಮುಖ್ಯಮಂತ್ರಿ ಅವರ ಜತೆ ಇರಲಿದ್ದಾರೆ.
ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಜರುಗಲಿದೆ ಎಂದು ಕುಮಾರಸ್ವಾಮಿ ವಿವರಿಸಿದರು.
ಎಚ್ಡಿಕೆ ಜನ್ಮದಿನ: ಜ.3ಕ್ಕೆ ಕಲ್ಯಾಣ ಕರ್ನಾಟಕ ಪ್ರವೇಶ
ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ಜನವರಿ 3ರಂದು ಬೀದರ್ ವಿಧಾನಸಭೆ ಕ್ಷೇತ್ರದ ಮೂಲಕ ಕಲ್ಯಾಣ ಕರ್ನಾಟಕವನ್ನು ರಥಯಾತ್ರೆ ಪ್ರವೇಶ ಮಾಡಲಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಜನರನ್ನು ಚುನಾವಣೆ ದೃಷ್ಟಿಯಿಂದ ಜೆಡಿಎಸ್ ನಾಯಕರು ಓಲೈಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ 16ರಂದು ರಾಮನಗರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ ಸದಸ್ಯರು, ಇನ್ನಿತರ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ರಥಯಾತ್ರೆ ನಡೆಸಿದ ನಂತರ ಡಿಸೆಂಬರ್ 11ರವರೆಗು ಮುಂದೂಡಲಾಗಿತ್ತು. ನಂತರ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿತ್ತು. ಹೀಗಾಗಿ ಡಿಸೆಂಬರ್ 14ರವರೆಗು ಯಾತ್ರೆಯನ್ನು ಮತ್ತೊಮ್ಮೆ ಮುಂದೂಡಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications