ಚಿಲ್ಲರೆ ರಾಜಕಾರಣವು ಈ ಚುನಾವಣೆಯಲ್ಲಿ ಯಾವ ಫಲವನ್ನೂ ನೀಡುವುದಿಲ್ಲ: ಜೆಡಿಎಸ್‌ ಕಿಡಿ

ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ಕಟ್ಟಿಟ್ಟಬುತ್ತಿ. ಸತ್ಯ, ಸಹಬಾಳ್ವೆ ಮತ್ತು ವಿಶ್ವ ಮಾನವ ತತ್ವವಷ್ಟೇ ಗೆಲ್ಲಲಿದೆ ಎಂದು ಜೆಡಿಎಸ್‌ ಹೇಳಿದೆ.

ಬೆಂಗಳೂರು,ಮಾರ್ಚ್‌13: ಟಿಪ್ಪು ಸುಲ್ತಾನನನ್ನು ಕೊಂದವರು ಎನ್ನಲಾಗುವ ಕಾಲ್ಪನಿಕ ಪಾತ್ರಗಳಾದ ಉರಿಗೌಡ, ನಂಜೇಗೌಡ ಎಂಬ ಹೆಸರುಗಳನ್ನು ಪ್ರಧಾನಿ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಏಕೆ? ಎಂದು ಜೆಡಿಎಸ್‌ ರಾಜ್ಯ ಘಟಕ ಪ್ರಶ್ನಿಸಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ. ಕಪೋಲ ಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ,ಕೋಮು ದ್ವೇಷ ಹರಡಿ, ಜನರ ತಲೆಯಲ್ಲಿ ವಿಷ ಬೀಜ ಬಿತ್ತಿ ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷ ಬಿಜೆಪಿ. ಮೇಲಾಗಿ ಮಹಾದ್ವಾರಕ್ಕೆ ಇದ್ದ ಒಕ್ಕಲಿಗರ ಪರಮಪೂಜ್ಯ ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಹೆಸರನ್ನು ಮುಚ್ಚಿ, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ್ದ ಉದ್ದೇಶವೇನು? ಎಂದು ಪ್ರಶ್ನಿಸಿದೆ.

JDS Party Tweets Outraged On BJP Leaders

ಇಂತಹ ಚಿಲ್ಲರೆ, ದ್ವೇಷ ತುಂಬಿದ ನಡೆಯಿಂದ ಒಕ್ಕಲಿಗರ ಮನ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದರೆ ಅದು‌ ಶತಮೂರ್ಖತನ. ಹೆಸರು ಬದಲಿಸಿದ ನಂತರ ಸಾರ್ವಜನಿಕರು, ಸ್ಥಳೀಯರು, ಹಾಗೂ ಪ್ರಗತಿಪರ ಸಂಘನೆಗಳಿಂದ ವಿರೋಧ ವ್ಯಕ್ತವಾಗಿದ್ದೆ ತಡ, ಜಿಲ್ಲಾಡಳಿತವು ಈ ಹೆಸರನ್ನು ತೆರವುಗೊಳಿಸಿದೆ. ಇಂತಹ ನಿರ್ಲಜ್ಜಗೇಡಿ ನಡೆಯು ಇಡೀ ರಾಜ್ಯ ಬಿಜೆಪಿ ಸರ್ಕಾರದ ನೀಚ ರಾಜಕಾರಣಕ್ಕೆ ಹಿಡಿದ ಕನ್ನಡಿ. ಸುಳ್ಳುಗಳಿಗೆ ಆಯಸ್ಸು ಬಹಳ ಕಮ್ಮಿ ಎಂದು ಜೆಡಿಎಸ್‌ ಕಿಡಿಕಾರಿದೆ.

ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ ಸಿ ಟಿ ರವಿ ಯವರೆ, ಉರಿಗೌಡ, ನಂಜೇಗೌಡನ ಹೆಸರಲ್ಲಿ ಶಾಶ್ವತ ದ್ವಾರ ನಿರ್ಮಿಸುತ್ತೀರಾ? ನಾಚಿಕೆಯಾಗಬೇಕು ನಿಮಗೆ. ಕೊಳಕು ಮಟ್ಟದ ರಾಜಕಾರಣವನ್ನೇ ಉಸಿರಾಗಿಸಿಕೊಂಡಿರುವ ನಿಮಗೆ ಪ್ರಧಾನಿಯವರ ಗುಲಾಮಗಿರಿ ಮಾಡುವ ಅನಿವಾರ್ಯತೆ ಇದೆ. ಒಕ್ಕಲಿಗರು ಸ್ವಾಭಿಮಾನಕ್ಕೆ ಹೆಸರಾದವರು.

JDS Party Tweets Outraged On BJP Leaders

ಇಡೀ ಒಕ್ಕಲಿಗ ಸಮುದಾಯವನ್ನ ಅಪಹಾಸ್ಯಕ್ಕೆ ಗುರಿ ಮಾಡುವ ಮೂಲಕ ಏನನ್ನು ಸಾಧಿಸಲು ರಾಜ್ಯ ಬಿಜೆಪಿ ಪಕ್ಷ ಹೊರಟಿದೆ ಎಂಬುದು ಸ್ಪಷ್ಟ. ಅವರ ಈ ಧ್ರುವೀಕರಣದ ರಾಜಕೀಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬಳಸಿದರೆ ಅದಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ ಎಂಬ ಕಲ್ಪನೆ ಅವರಿಗಿದೆ. ಅದರ ಭಾಗವಾಗಿಯೇ ಈ ಪ್ರಯೋಗ ಎಂದು ವಾಗ್ದಾಳಿ ನಡೆಸಿದೆ.

ಈ ಕುತಂತ್ರಿ ರಾಜಕಾರಣ ನಡೆಸಲು ಪ್ರಧಾನಿ ನರೇಂದ್ರ ಮೋದಿ ಯವರೆ ರಾಜ್ಯ ಬಿಜೆಪಿಗೆ ನಿರ್ದೇಶನ ನೀಡಿದರೆ? ಆರ್ ಎಸ್ ಎಸ್ ಪ್ರಣೀತ ಸಿದ್ಧಾಂತದ ಆಧಾರದಲ್ಲಿ ದ್ವೇಷವನ್ನು ಹರಡಲು ಒಕ್ಕಲಿಗ ಸಮುದಾಯವನ್ನು ಕೊಲೆಗಡುಕರು ಎಂದು ಚಿತ್ರಿಸಿ ಅವಮಾನ ಮಾಡಲಾಗಿದೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ.

ತಾಳ್ಮೆ, ಸ್ವಾಭಿಮಾನ, ಸ್ವಂತಿಕೆ, ಸೇವೆ, ಸೌಹಾರ್ದತೆ ಮತ್ತು ಸಮನ್ವಯ ತತ್ವಗಳನ್ನು ಅಳವಡಿಸಿಕೊಂಡು ಬೆಳೆದಿದ್ದು ಈ ನಾಡಿನ ಒಕ್ಕಲಿಗ ಸಮುದಾಯದ ಹೆಗ್ಗಳಿಕೆ. ದ್ವೇಷ ಮತ್ತು ಹಸಿಸುಳ್ಳುಗಳನ್ನು ಅವರೆಂದು ಪೋಷಿಸಿ, ಬೆಳೆಸಿದವರಲ್ಲ. ಒಂದೀಡಿ ಸಮುದಾಯವನ್ನು ಇಷ್ಟು ನಿಕೃಷ್ಟವಾದ ರಾಜಕಾರಣಕ್ಕೆ ಇಳಿಸಿ, ಬಳಸಬಹುದು ಎಂಬ ಚಿಂತನೆಯೇ ಹೊಲಸು.

ಇಂತಹ ಚಿಲ್ಲರೆ ರಾಜಕಾರಣವು ಈ ಸಲದ ಚುನಾವಣೆಯಲ್ಲಿ ಯಾವ ಫಲವನ್ನೂ ನೀಡುವುದಿಲ್ಲ. ನಾಡಿನ ಒಕ್ಕಲಿಗ ಸಮುದಾಯ ಬಹಳ ಪ್ರಬುದ್ಧವಾಗಿ ಈ ಮಹಾ ಸುಳ್ಳಿನ ರಾಜಕಾರಣವನ್ನು ಎದುರಿಸಲಿದೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ಕಟ್ಟಿಟ್ಟಬುತ್ತಿ. ಸತ್ಯ, ಸಹಬಾಳ್ವೆ ಮತ್ತು ವಿಶ್ವ ಮಾನವ ತತ್ವವಷ್ಟೇ ಗೆಲ್ಲಲಿದೆ ಎಂದು ಜೆಡಿಎಸ್‌ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+