5 ಜಿಲ್ಲೆಗಳಲ್ಲಿ ಒಬಿಸಿ ಸಮಾವೇಶ ನಡೆಸಲಿದೆ ಜೆಡಿಎಸ್
ಬೆಂಗಳೂರು, ಫೆಬ್ರವರಿ 11 : ಜೆಡಿಎಸ್ ಬಿಎಸ್ಪಿ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಮೈತ್ರಿಯ ಬಳಿಕ ಹಿಂದುಳಿದ ಜಾತಿಗಳ 5 ಸಮಾವೇಶಗಳನ್ನು ರಾಜ್ಯಾದ್ಯಂತ ಜೆಡಿಎಸ್ ಹಮ್ಮಿಕೊಳ್ಳಲಿದೆ.
ಫೆಬ್ರವರಿ 23 ರಿಂದ 28ರ ತನಕ ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಶಿವಮೊಗ್ಗ, ಮೈಸೂರು, ಬೆಂಗಳೂರು, ಬೀದರ್ ಮತ್ತು ಬೆಳಗಾವಿಯಲ್ಲಿ ಸಮಾವೇಶಗಳನ್ನು ನಡೆಸಲಾಗುತ್ತದೆ.
ಆನೆ-ತೆನೆಹೊತ್ತ ಮಹಿಳೆ ದೋಸ್ತಿ: ಎಲ್ಲೆಲ್ಲಿ ಬಿಎಸ್ಪಿ ಸ್ಪರ್ಧೆ?
ಪಿ.ಜಿ.ಆರ್.ಸಿಂಧ್ಯಾ, ಎಚ್.ವಿಶ್ವನಾಥ್, ಮಧು ಬಂಗಾರಪ್ಪ, ಬಂಡೆಪ್ಪ ಕಾಶೇಂಪುರ ಅವರ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಮಾವೇಶಗಳು ನಡೆಯಲಿವೆ. ಮೈತ್ರಿ ಬಳಿಕ ಒಬಿಸಿ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ.
ಫೆ.17 ಪಟ್ಟಿ ಬಿಡುಗಡೆ : ಜೆಡಿಎಸ್ ಫೆ.17ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ ಪಾಲ್ಗೊಳ್ಳಲಿದ್ದಾರೆ.
ಚುನಾವಣಾ ಪೂರ್ವ ಮೈತ್ರಿ: ಬಿಎಸ್ಪಿ-ಜೆಡಿಎಸ್ ಸೀಟು ಹಂಚಿಕೆ ಅಂತಿಮ
ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಜೆಡಿಎಸ್ನ 130 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬಿಎಸ್ಪಿ ನಾಯಕಿ ಮಾಯಾವತಿ ಅವರು ಸಮಾವೇಶದಲ್ಲಿ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.
ದಲಿತ ಮತಗಳ ಮೇಲೆ ಕಣ್ಣು : ಜೆಡಿಎಸ್ ಅಧಿಕಾರಕ್ಕೆ ಬಂದರೆ ಎರಡು ಉಪ ಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಲಾಗುತ್ತದೆ ಎಂದು ಪಕ್ಷ ಘೋಷಣೆ ಮಾಡಿದೆ. ಒಬ್ಬರು ದಲಿತ ಮತ್ತು ಒಬ್ಬರು ಅಲ್ಪ ಸಂಖ್ಯಾತರನ್ನುಉಪ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಪಕ್ಷ ಹೇಳಿದೆ.