5 ಜಿಲ್ಲೆಗಳಲ್ಲಿ ಒಬಿಸಿ ಸಮಾವೇಶ ನಡೆಸಲಿದೆ ಜೆಡಿಎಸ್‌

ಬೆಂಗಳೂರು, ಫೆಬ್ರವರಿ 11 : ಜೆಡಿಎಸ್‌ ಬಿಎಸ್‌ಪಿ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಮೈತ್ರಿಯ ಬಳಿಕ ಹಿಂದುಳಿದ ಜಾತಿಗಳ 5 ಸಮಾವೇಶಗಳನ್ನು ರಾಜ್ಯಾದ್ಯಂತ ಜೆಡಿಎಸ್ ಹಮ್ಮಿಕೊಳ್ಳಲಿದೆ.

ಫೆಬ್ರವರಿ 23 ರಿಂದ 28ರ ತನಕ ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಶಿವಮೊಗ್ಗ, ಮೈಸೂರು, ಬೆಂಗಳೂರು, ಬೀದರ್ ಮತ್ತು ಬೆಳಗಾವಿಯಲ್ಲಿ ಸಮಾವೇಶಗಳನ್ನು ನಡೆಸಲಾಗುತ್ತದೆ.

ಪಿ.ಜಿ.ಆರ್.ಸಿಂಧ್ಯಾ, ಎಚ್.ವಿಶ್ವನಾಥ್, ಮಧು ಬಂಗಾರಪ್ಪ, ಬಂಡೆಪ್ಪ ಕಾಶೇಂಪುರ ಅವರ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಮಾವೇಶಗಳು ನಡೆಯಲಿವೆ. ಮೈತ್ರಿ ಬಳಿಕ ಒಬಿಸಿ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ.

JDS plans 5 OBC rally in Karnataka

ಫೆ.17 ಪಟ್ಟಿ ಬಿಡುಗಡೆ : ಜೆಡಿಎಸ್ ಫೆ.17ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಬಿಎಸ್‌ಪಿ ನಾಯಕಿ ಮಾಯಾವತಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಜೆಡಿಎಸ್‌ನ 130 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬಿಎಸ್‌ಪಿ ನಾಯಕಿ ಮಾಯಾವತಿ ಅವರು ಸಮಾವೇಶದಲ್ಲಿ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.

ದಲಿತ ಮತಗಳ ಮೇಲೆ ಕಣ್ಣು : ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎರಡು ಉಪ ಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಲಾಗುತ್ತದೆ ಎಂದು ಪಕ್ಷ ಘೋಷಣೆ ಮಾಡಿದೆ. ಒಬ್ಬರು ದಲಿತ ಮತ್ತು ಒಬ್ಬರು ಅಲ್ಪ ಸಂಖ್ಯಾತರನ್ನುಉಪ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಪಕ್ಷ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+