ಜೆಡಿಎಸ್: ಮೇಲ್ಮನೆಗೆ ಶರವಣ, ರಾಜ್ಯಸಭೆಗೆ ಕುಪೇಂದ್ರ ?
ಬೆಂಗಳೂರು, ಮೇ 31: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೋಲಿನ ಪರಾಮರ್ಶೆಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿವೆ. ಜೆಡಿಎಸ್ ಸಹ ಪಕ್ಷಕ್ಕೆ ಉಂಟಾದ ತೀವ್ರ ಹಿನ್ನಡೆ ಕುರಿತು ಶುಕ್ರವಾರ ಸಭೆ ಸೇರಿ ಸುದೀರ್ಘ ಚರ್ಚೆ ನಡೆಸಿದೆ.
ನಗರದ ಖಾಸಗಿ ಹೋಟೆಲಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮುಖಂಡರು ಸಾಮೂಹಿಕ ಚಿಂತನೆ ನಡೆಸಿದರು.
ಚುನಾವಣೆಯಲ್ಲಿ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಶಾಸಕರು ಮುಕ್ತ ಚರ್ಚೆ ನಡೆಸಿದರು. ಅಭ್ಯರ್ಥಿಗಳನ್ನು ಕಣಕ್ಕಿಳಿಸುವಾಗ ವರಿಷ್ಠರಿ ಕೈಗೊಂಡ ಕೆಲವು ನಿರ್ಧಾರಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ. ಶಾಸಕರ ಅಸಮಾಧಾನಕ್ಕೆ ಸಮಾಧಾನದಿಂದಲೇ ಉತ್ತರಿಸಿದ ದೇವೇಗೌಡರು ನಮ್ಮಿಂದ ಕೆಲವು ತಪ್ಪುಗಳು ಆಗಿರುವುದು ನಿಜ. ಈ ಸೋಲು ನಮಗೆ ಮೊದಲಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಸಮಾಧಾನ ಪಡಿಸಿದರು ಎಂದು ಪಕ್ಷದ ಮೂಲಗಳು ಹೇಳಿವೆ.

ಜೆಡಿಎಸ್ ಪಕ್ಷದ ಪುನರ್ ಸಂಘಟನೆಗೆ ಗೌಡರ ಕುಟುಂಬದವರನ್ನೇ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈ ಕುರಿತು 15 ದಿನಗಳೊಳಗಾಗಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ವರಿಷ್ಠರು ಶಾಸಕರಿಗೆ ಭರವಡೆ ನೀಡಿದ್ದಾರೆ ಎನ್ನಲಾಗಿದೆ.
ಮೇಲ್ಮನೆಗೆ ಟಿಎ ಶರವಣ ಸ್ಪರ್ಧೆ
ಈ ಮಧ್ಯೆ ವಿಧಾನಪರಿಷತ್ತಿಗೆ ಹಾಲಿ ಸದಸ್ಯ ಕೆವಿ ನಾರಾಯಣ ಸ್ವಾಮಿ, ನಿರ್ಮಾಪಕ ಮನೋಹರ್ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್ ಮಾಲೀಕ ಶರವಣ ಅವರ ಪೈಕಿ ಇಬ್ಬರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.
ರಾಜ್ಯಸಭೆಗೆ ಕುಪೇಂದ್ರ ರೆಡ್ಡಿ: (ಮೈತ್ರಿಗೆ ಮೊದಲೇ ಜೆಡಿಎಸ್ ಮುನಿಸು)
ವಿಧಾನಸಭೆಯಲ್ಲಿ 40 ಸದಸ್ಯರ ಬೆಂಬಲವನ್ನು ಹೊಂದಿರುವ ಜೆಡಿಎಸ್, ಸ್ವತಂತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಇನ್ನೂ 6 ಸದಸ್ಯರ ಬೆಂಬಲ ಬೇಕಾಗುತ್ತದೆ. ಹಾಗಾಗಿ ಕಾಮಗ್ರೆಸ್ ನಾಯಕರ ಜತೆ ಉತ್ತಮ ಒಡನಾಟ ಹೊಂದಿರುವ ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications