ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? ಮಾಧುಸ್ವಾಮಿಗೆ ಜೆಡಿಎಸ್ ಪ್ರಶ್ನೆ
ಬೆಂಗಳೂರು,ಜನವರಿ23: ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ ಮಾಧುಸ್ವಾಮಿ ಅವರೇ ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? ಅಥವಾ ಈ ರೀತಿ ಮಾತಿನ ಬೇಧಿಯಿಂದ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರವೆ? ಎಂದು ಜೆಡಿಎಸ್ ರಾಜಾfಯ ಘಟಕ ಸಚಿವ ಮಾಧುಸ್ವಾಮಿ ಅವರನ್ನ ಪ್ರಶ್ನಿಸಿದೆ.
ಗೌಡರ ಕುಟುಂಬದಲ್ಲಿ ಎಲ್ಲರೂ ದೋಚಲು ಶುರು ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಚಿವ ಮಾಧುಸ್ವಾಮಿ ಅವರಿಗೆ ಟ್ವೀಟ್ ಮೂಲಕ ಜೆಡಿಎಸ್ ತಿರುಗೇಟು ನೀಡಿದೆ. ಆಡಳಿತ ನಡೆಸುವ ಬದಲು ಸರ್ಕಾರವು ಏನೋ ಒಂದು ನಿಭಾವಣೆ ಮಾಡುತ್ತಾ, ಕಾಲತಳ್ಳುತ್ತಿದ್ದೆ ಎಂದು ಹೇಳಿದ ಭೂಪ ನೀವೇ ಅಲ್ಲವೆ? 40% ಕಮಿಷನ್ ಸರ್ಕಾರವೆಂದೆ ಕುಖ್ಯಾತವಾಗಿರುವ ನಿಮ್ಮ ಸರ್ಕಾರ ದೋಚುತ್ತಿರುವ ಸಾರ್ವಜನಿಕರ ಹಣದ ಬಗ್ಗೆ ಲೆಕ್ಕ ಇದೆಯೆ? ಯಾವ ಮುಖ ಇಟ್ಟುಕೊಂಡು ದೇವೇಗೌಡರ ಕುಟುಂಬದ ಬಗ್ಗೆ ಜನತೆಯ ಮುಂದೆ ಹಸಿಸುಳ್ಳು ಹೇಳುತ್ತಿದ್ದೀರಿ? ಎಂದು ಜೆಡಿಎಸ್ ಕಿಡಿಕಾರಿದೆ'.

ಮಾಧುಸ್ವಾಮಿ ಅವರೆ, ದೇವೇಗೌಡರು ಕೆಳಮಟ್ಟದಿಂದ ಬೆಳೆದು ದೇಶದ ಪ್ರಧಾನಿ ಸ್ಥಾನ ಅಲಂಕರಿಸಿದವರು. ರಾಜ್ಯದ ಜನತೆಯ ಸ್ವಾಭಿಮಾನ ಮತ್ತು ನೆಮ್ಮದಿ ಕಾಪಾಡಲು ಈ ಇಳಿವಯಸ್ಸಲ್ಲೂ ಅವರು ಕೆಲಸ ಮಾಡುತ್ತಿದ್ದಾರೆ. ಸವೆಸಿದ ಹಾದಿಯ ಬಗ್ಗೆ ದೇವೇಗೌಡರ ಕುಟುಂಬಕ್ಕೆ ಹೆಮ್ಮಯಿದೆ. ಹಲಾಲುಟೋಪಿ ಕೆಲಸ ಮಾಡುತ್ತಾ, ಮೇಲೆ ಬಂದವರಲ್ಲ ಅವರು ಎಂದು ಮಾಧುಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದೆ.

ಸೋಲು-ಗೆಲುವುಗಳಿಂದ ಯಾರೂ ಹೊರತಾಗಿಲ್ಲ. ಆದರೆ, ಅಧಿಕಾರವಿಲ್ಲದಿದ್ದರೂ ಕನ್ನಡಿಗರ ಏಳ್ಗೆಗೆ ಪ್ರಾಮಾಣಿಕವಾಗಿ ದುಡಿಯುವ ದೇವೇಗೌಡರ ಬಗ್ಗೆ ನಾಲಿಗೆ ಹರಿಬಿಟ್ಟರೆ, ಜನತೆ ನಿಮಗೆ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ. ನಿಮ್ಮ ದುರಹಂಕಾರದ ಕತೆ ರಾಜ್ಯದ ಜನತೆಗೆ ಗೊತ್ತೇ ಇದೆ ಎಂದು ಟ್ವೀಟ್ ಮೂಲ ಜೆಡಿಎಸ್ ಕುಟುಕಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications