ರಾಹುಲ್ ಗಾಂಧಿ 'ಬಿ' ಟೀಂ ಹೇಳಿಕೆಗೆ ಜೆಡಿಎಸ್ ತೀವ್ರ ಖಂಡನೆ
ಹುಬ್ಬಳ್ಳಿ, ಮಾರ್ಚ್ 23: ಹಾಸನದಲ್ಲಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜಾತ್ಯಾತೀತ ಜನತಾದಳವನ್ನು ಬಿ.ಜೆ.ಪಿಯ 'ಬಿ' ಟೀಂ ಎಂದು ಹೇಳಿದ್ದರು. ಇದಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
"ಈ ರೀತಿಯ ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ರಾಜಕೀಯ ಅಪ್ರಬುದ್ಧತೆಯನ್ನು ಎತ್ತಿ ತೋರಿಸಿದ್ದಾರೆ. ಕರ್ನಾಟಕದಲ್ಲಿ ಪ್ರಬಲವಾಗಿ ಬೆಳೆದಿರುವ ಜೆ.ಡಿ.ಎಸ್. ಪಕ್ಷದ ಏಳಿಗೆಯನ್ನು ಸಹಿಸದೇ ಸ್ಥಳೀಯ ಕಾಂಗ್ರೆಸ್ ನಾಯಕರು ಹೇಳಿದ ಗಿಳಿಪಾಠವನ್ನಾಗಿ ಒಪ್ಪಿಸಿ ತಮಗೆ ರಾಜಕೀಯ ನೈಪುಣ್ಯತೆ ಇಲ್ಲ, ಕರ್ನಾಟಕದ ರಾಜಕೀಯದ ಮಾಹಿತಿ ಗೊತ್ತಿಲ್ಲ ಎಂದುದನ್ನು ಅವರು ಸ್ಪಷ್ಟಪಡಿಸಿದ್ದಾರೆ," ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ದೇಶದ ಪ್ರಧಾನ ಮಂತ್ರಿಯಂತಹ ಉನ್ನತ ಹುದ್ದೆಯನ್ನು ಜೆ.ಡಿ.ಎಸ್ ಪಕ್ಷ ಹೊಂದಿತ್ತೆಂಬುದನ್ನು ಅವರು ಮರೆತಂತೆ ಕಾಣುತ್ತದೆ. ರಾಜ್ಯದ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ಗೆ ಬರಬೇಕೆಂಬ ದುರುದ್ದೇಶದಿಂದ ಜೆ.ಡಿ.ಎಸ್ ಬಿ.ಜೆ.ಪಿಯ 'ಬಿ' ಟೀಂ ಎಂದು ಅರ್ಥವಿಲ್ಲದ ಹೇಳಿಕೆ ನೀಡಿದ್ದಾರೆ," ಎಂದು ಕಿಡಿಕಾರಿದ್ದಾರೆ.

"ಇದೇ ಕಾಂಗ್ರೆಸ್ ಪಕ್ಷವು ಜೆ.ಡಿ.ಎಸ್ನೊಂದಿಗೆ ಸಮ್ಮಿಶ್ರ ಸರಕಾರ ನಡೆಸಿತ್ತು ಎಂಬುದನ್ನು ರಾಹುಲ್ ಗಾಂಧಿಯವರು ಕೇಳಿ ತಿಳಿದುಕೊಳ್ಳುವುದು ಸೂಕ್ತ. ಬಿ.ಬಿ.ಎಂ.ಪಿಯಲ್ಲಿ ಜೆ.ಡಿ.ಎಸ್ ಬೆಂಬಲದೊಂದಿಗೆ ಆಡಳಿತ ನಡೆಸುತ್ತಿರುವ ಇವರು, ನಂಜನಗೂಡಿನ ಚುನಾವಣೆಯಲ್ಲಿ ಜೆ.ಡಿ.ಎಸ್ ಬೆಂಬಲಕ್ಕೆ ಅಂಗಲಾಚಿದ್ದನ್ನು ಮರೆತಂತೆ ಕಾಣುತ್ತದೆ. ಕಾಂಗ್ರೆಸ್ ಪಕ್ಷದ ನಾಯಕರು ಹಲವಾರು ಸಲ ಜೆ.ಡಿ.ಎಸ್ ಬೆಂಬಲಕ್ಕಾಗಿ ಎಡತಾಕಿದ್ದನ್ನು ಮರೆತಿರುವ ಕಾಂಗ್ರೆಸ್ ಅಧ್ಯಕ್ಷರು ರಾಷ್ಟ್ರದ ಹಾಗೂ ರಾಜ್ಯದ ರಾಜಕೀಯದ ಆಳ-ಅಗಲಗಳ ಬಗ್ಗೆ ತಿಳಿದುಕೊಂಡು ಮಾತನಾಡುವದು ಅವರ ಪಕ್ಷಕ್ಕೆ ಹಾಗೂ ಅವರಿಗೆ ಶೋಭೆ ತರಬಲ್ಲದು," ಎಂದು ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
"ಕರ್ನಾಟಕದ ಮತದಾರರು ಪ್ರಬುದ್ಧರಿದ್ದು, ಇವರ ರಾಜಕೀಯ ವರಸೆಯ ಹೇಳಿಕೆಗಳ ಬಗ್ಗೆ ತಿಳಿದುಕೊಳ್ಳದವರೇನಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ರಾಜಕೀಯ ರಂಗದ ಹಲವಾರು ಮಜಲುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳದೇ ತಪ್ಪು ಹೇಳಿಕೆಗಳನ್ನು ನೀಡಿ ನಗೆಪಾಟಲಿಗೀಡಾಗುವುದನ್ನು ಇನ್ನಾದರೂ ಕೈಬಿಡಲಿ. ಅವರ ಹೇಳಿಕೆಯನ್ನು ಅತ್ಯಂತ ಕಠಿಣವಾಗಿ ನಾನು ವಿರೋಧಿಸುತ್ತೇನೆ," ಎಂದು ಅವರು ಹೇಳಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications