ಕಷ್ಟವಾದರೆ ಬೆಂಬಲ ಹಿಂಪಡೆದು ಹೋಗಲಿ: ಕಾಂಗ್ರೆಸ್ ವಿರುದ್ಧ ವಿಶ್ವನಾಥ್ ಕಿಡಿ
Recommended Video
ಬೆಂಗಳೂರು, ಜೂನ್ 22: ದೇವೇಗೌಡ ಅವರು ಹೇಗೆ ಬೇಕಾದರೂ ಬದಲಾಗುತ್ತಾರೆ ಎಂಬ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಆರೋಪಕ್ಕೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ.
ಲೋಕಸಭೆ ಚುನಾವಣೆಯ ಸೋಲಿಗೆ ಜೆಡಿಎಸ್ ಜತೆ ಮಾಡಿಕೊಂಡ ಮೈತ್ರಿಯೇ ಕಾರಣ ಎಂದು ಕಾಂಗ್ರೆಸ್ ನಾಯಕರು ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅವರೇ ಹೆಚ್ಚಿನ ಪಾಲು ಅಧಿಕಾರ ಹೊಂದಿದ್ದಾರೆ. ಹೆಚ್ಚು ಸಚಿವರಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷರೂ ಅವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಷ್ಟೆಲ್ಲಾ ಇದ್ದರೂ ಜೆಡಿಎಸ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಕಷ್ಟವಾದರೆ ಬೆಂಬಲ ಹಿಂಪಡೆದುಕೊಂಡು ಹೋಗಲಿ ಎಂದು ವಿಶ್ವನಾಥ್ ಕೋಪದಿಂದ ನುಡಿದಿದ್ದಾರೆ.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಬಹುದು ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಅಭಿಪ್ರಾಯವನ್ನು ಟೀಕಿಸಿದ ವೀರಪ್ಪ ಮೊಯ್ಲಿ ಅವರು, ದೇವೇಗೌಡರು ಹೇಗೆ ಬೇಕಾದರೂ ಬದಲಾಗುತ್ತಾರೆ ಎಂದಿದ್ದರು. ಅದಕ್ಕೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್, ಈ ಟೀಕೆಯನ್ನು ಒಪ್ಪುವುದಿಲ್ಲ. ದೇವೇಗೌಡರು ಮೊಯ್ಲಿ ಅವರಿಗಿಂತ ಅನುಭವಿ. ಅವರಿಗೆ ಮಾತನಾಡುವಾಗ ಸಮಯ ಸಂದರ್ಭದ ಅರಿವಿರುತ್ತದೆ ಎಂದಿದ್ದಾರೆ.
ಪ್ರತ್ಯೇಕವಾಗಿ ಚುನಾವಣೆಗೆ ಹೋಗಿದ್ದರೆ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲುತ್ತಿತ್ತು ಎಂಬ ಹೇಳಿಕೆಗೆ ಅವರು, ಜೆಡಿಎಸ್ ಕೂಡ ಹೆಚ್ಚು ಸೀಟುಗಳನ್ನು ಗೆಲ್ಲುತ್ತಿತ್ತು. ಮಂಡ್ಯದಲ್ಲಿ ಮೂರೂ ಪಕ್ಷಗಳು ಸ್ಪರ್ಧಿಸಿದ್ದರೆ ಜೆಡಿಎಸ್ ಗೆಲ್ಲುತ್ತಿತ್ತು ಎಂದಿದ್ದಾರೆ.

ಹೋಗುವುದಾದರೆ ಹೋಗಬಹುದು-ವಿಶ್ವನಾಥ್
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸಂಬಂಧಕ್ಕಿಂತ ಸಂಕಷ್ಟ ಜಾಸ್ತಿಯಾಗುತ್ತದೆ. ಶೇ 70ರಷ್ಟು ಅಧಿಕಾರವನ್ನು ಅವರೇ ಅನುಭವಿಸುತ್ತಿದ್ದಾರೆ. ಶೇ 30ರಷ್ಟು ಮಾತ್ರ ನಮಗೆ ಮಾತ್ರ ಇದೆ. ಅವರು ಅಧಿಕಾರ ಅನುಭವಿಸಿ ಈಗ ಇಲ್ಲ ಎನ್ನುತ್ತಿರುವುದು ವಸ್ತುಸ್ಥಿತಿಗೆ ವಿರುದ್ಧ. ಅವರೂ ಹೋಗುವಷ್ಟು ದಿನ ಹೋಗಲಿ ಎನ್ನುತ್ತಿದ್ದಾರೆ. ಬೆಂಬಲ ವಿತ್ ಡ್ರಾ ಮಾಡಿಕೊಳ್ಳುವುದಿದ್ದರೆ ಮಾಡಿಕೊಳ್ಳಲಿ ಎಂದು ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಎಚ್ ವಿಶ್ವನಾಥ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಯಡವಟ್ಟಾಗಿದ್ದು ನಿಜ
ಮೈತ್ರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಆಗಲಿಲ್ಲ ಏಕಾಏಕಿ ಮೈತ್ರಿ ಮಾಡಿಕೊಂಡು ಹೋಗಿದ್ದರಿಂದ ಎರಡೂ ಪಕ್ಷಗಳು ಇದಕ್ಕೆ ಜವಾಬ್ದಾರರು. ಇದರಿಂದ ಕಾಂಗ್ರೆಸ್ ಅಥವಾ ಜೆಡಿಎಸ್ಗೆ ನಷ್ಟ ಎಂದು ಹೇಳುವಂತಿಲ್ಲ. ಅದನ್ನು ಒಪ್ಪುವುದಿಲ್ಲ. ಪ್ರತ್ಯೇಕವಾಗಿ ಹೋಗಿದ್ದರೆ ಜೆಡಿಎಸ್ಗೆ 4-5 ಸ್ಥಾನ ಸಿಗುತ್ತಿತ್ತು, ಕಾಂಗ್ರೆಸ್ಗೆ 8-10 ಸ್ಥಾನ ಲಭಿಸುತ್ತಿತ್ತು. ಒಟ್ಟಾಗಿ ಹೋಗಿ ಯಡವಟ್ಟಾಗಿರುವುದು ನಿಜ ಎಂದರು.

ಮೊಯ್ಲಿ ಹೇಳಿಕೆ ಒಪ್ಪೊಲ್ಲ
ವೀರಪ್ಪ ಮೊಯ್ಲಿ ಅವರ ಬಗ್ಗೆ ಗೌರವವಿದೆ. ಆದರೆ, ದೇವೇಗೌಡರು ಹೇಗೆ ಬೇಕಾದರೂ ಮಾತನಾಡುತ್ತಾರೆ ಎನ್ನುವ ಆರೋಪವನ್ನು ಒಪ್ಪಲಾಗದು. ಮೊಯ್ಲಿ ಅವರ ಅನುಭವಕ್ಕಿಂತ ದೇವೇಗೌಡರ ಅನುಭವ ದೊಡ್ಡದು, ಸಮಯ ಸಂದರ್ಭಕ್ಕೆ ಅನುಗುಣವಾಗಿ ಅವರು ಮಾತನಾಡುತ್ತಾರೆ ಎಂದರು.

ವಿಶ್ವಾಸ ಕಡಿಮೆ ಆಗುತ್ತಿದೆ
ಎರಡೂ ಪಕ್ಷಗಳ ನಡುವೆ ವಿಶ್ವಾಸ ಕಡಿಮೆ ಆಗುತ್ತಲೆ ಇದೆ. ಸಿದ್ದರಾಮಯ್ಯ ಅವರೇ ದೆಹಲಿಗೆ ಹೋಗಿ ಹೈಕಮಾಂಡ್ ವಿರುದ್ಧ ಆರೋಪಪಟ್ಟಿ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ದಿನವೂ ಹೇಳಿಕೆ ನೀಡುತ್ತಿರುವುದರಿಂದ ಬಾಂಧವ್ಯ ಸಂಕಷ್ಟಕ್ಕೆ ಸಿಲುಕುತ್ತಿದೆ. ಮುಂದೆ ಎರಡೂ ಪಕ್ಷಗಳ ನಾಯಕರು ಹಿರಿಯರು ಕುಳಿತು ಚರ್ಚಿಸಬೇಕಿದೆ. ಸಾಧಕ ಬಾಧಕಗಳ ಪರಿಣಾಮದ ಬಗ್ಗೆ ಸಮಾಲೋಚನೆ ನಡೆಸಬೇಕಿದೆ. ಮುಂದೆ ಏನಾಗುತ್ತದೆಯೋ ನೋಡೋಣ ಎಂದು ವಿಶ್ವನಾಥ್ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications