ಪ್ರಜ್ವಲ್ ರೇವಣ್ಣ ಸ್ಪರ್ಧೆ: ಅಡ್ಡಗೋಡೆ ಮೇಲೆ ದೀಪಯಿಟ್ಟ ದೇವೇಗೌಡ್ರು
ಕುಟುಂಬದಿಂದ ಇಬ್ಬರು ಮಾತ್ರ (ರೇವಣ್ಣ, ಕುಮಾರಸ್ವಾಮಿ) ಸ್ಪರ್ಧಿಸಲಿದ್ದಾರೆಂದು ಹೇಳುತ್ತಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ್ರು, ತಮ್ಮ ನಿಲುವಿನಿಂದ ಹಿಂದಕ್ಕೆ ಸರಿಯುತ್ತಿದ್ದಾರೆಯೇ?
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಟುಂಬದಿಂದ ಇಬ್ಬರು ಮಾತ್ರ (ರೇವಣ್ಣ, ಕುಮಾರಸ್ವಾಮಿ) ಸ್ಪರ್ಧಿಸಲಿದ್ದಾರೆಂದು ಹೇಳುತ್ತಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ್ರು, ತಮ್ಮ ನಿಲುವಿನಿಂದ ಹಿಂದಕ್ಕೆ ಸರಿಯುತ್ತಿದ್ದಾರೆಯೇ?
ತನ್ನನ್ನು ಭೇಟಿಯಾಗಲು ಬಂದ ಪ್ರಜ್ವಲ್ ರೇವಣ್ಣಗೆ ರಾಜಕೀಯ ಪಾಠ ಮಾಡಿದ ದೇವೇಗೌಡ್ರು, ಪಕ್ಷ ಸಂಘಟನೆಯಲ್ಲಿ ತೊಡಗಿದ್ದೀಯಾ. ಟಿಕೆಟ್ ಬಗ್ಗೆ ಈಗ ಚಿಂತೆ ಮಾಡಬೇಡ, ಮುಂದೆ ನೋಡೋಣ ಎಂದು ಹೇಳಿದ್ದಾರೆಂದು ವರದಿಯಾಗಿದೆ. (ದೇವೇಗೌಡರ ವಂಶದಕುಡಿ ಹುಣಸೂರಿಂದ ಕಣಕ್ಕೆ)
ನೀವು ಮತ್ತು ಚಿಕ್ಕಪ್ಪ (ಕುಮಾರಸ್ವಾಮಿ) ಕುಟುಂಬದಿಂದ ಇಬ್ಬರಿಗೆ ಮಾತ್ರ ಟಿಕೆಟ್ ಎಂದು ಈಗಾಗಲೇ ಸ್ಪಷ್ಟ ಪಡಿಸಿದ್ದೀರಾ, ಆದರೆ ಕಾರ್ಯಕರ್ತರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದನಾಗಿದ್ದೇನೆಂದು ಪ್ರಜ್ವಲ್ ಹೇಳಿದ್ದಾರೆ.
ಹಾಸನ ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ನಿರತರಾಗಿರುವ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರ ಒತ್ತಾಯ ಮಾಡುತ್ತಲೇ ಬಂದಿದ್ದರು, ಪ್ರಜ್ವಲ್ ಕೂಡಾ, ತಾತನ ಬಳಿ ಮನವಿ ಮಾಡಿದ್ದರೂ ಕೂಡಾ. ಆದರೆ, ಗೌಡ್ರು ಮತ್ತು ಕುಮಾರಸ್ವಾಮಿ ಕುಟುಂಬದಿಂದ ಇಬ್ಬರಿಗೆ ಮಾತ್ರ ಟಿಕೆಟ್ ಎನ್ನುವ ನಿಲುವು ತಾಳಿದ್ದರು.
ಆದರೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೇ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವೇಗೌಡರು, ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಿದರೆ ಆಶ್ಚರ್ಯ ಪಡಬೇಕಾಗಿಲ್ಲ. ಮುಂದೆ ಓದಿ..

ನಿನ್ನ ಸ್ಪರ್ಧೆಯಿಂದ ಕುಟುಂಬದಲ್ಲಿ ಯಾರಿಗೂ ನೋವಾಗಬಾರದು
ಜೆಡಿಎಸ್ ಕಾರ್ಯಕರ್ತರು ನನ್ನಲ್ಲೂ ಬಹಳಷ್ಟು ಬಾರಿ ನಿನಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ. ನಿನ್ನ ಸ್ಪರ್ಧೆಯಿಂದ ಕುಟುಂಬದಲ್ಲಿ ಯಾರಿಗೂ ನೋವಾಗಬಾರದು. ಪಕ್ಷ ಸಂಘಟನೆಯಲ್ಲಿ ತೊಡಗಿದ್ದೀಯಾ, ನಿನಗಿನ್ನೂ ವಯಸ್ಸಿದೆ - ಮೊಮ್ಮಗನಿಗೆ ದೇವೇಗೌಡ.

ರಾಜಕೀಯ ಎಷ್ಟು ಮುಖ್ಯನೋ, ಕುಟುಂಬ ಕೂಡಾ ಅಷ್ಟೇ ಮುಖ್ಯ
ನನಗೆ ರಾಜಕೀಯ ಎಷ್ಟು ಮುಖ್ಯನೋ, ಕುಟುಂಬ ಕೂಡಾ ಅಷ್ಟೇ ಮುಖ್ಯ. ಕುಟುಂಬದಲ್ಲಿ ನೆಮ್ಮದಿ, ಶಾಂತಿ ನೆಲೆಸಿದ್ದರೆ ರಾಜಕೀಯ ಮಾಡಲು ಶಕ್ತಿ ಬರುತ್ತದೆ. ನಿನ್ನ ಸ್ಪರ್ಧೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ, ಆತುರ ಪಡಬೇಡ - ಪ್ರಜ್ವಲ್ ಗೆ ದೇವೇಗೌಡ್ರು.

ಪ್ರತೀ ಕ್ಷೇತ್ರದಲ್ಲಿ ಸರ್ವೇ
ಪ್ರತೀ ಕ್ಷೇತ್ರದಲ್ಲಿ ಸರ್ವೇ ನಡೆಸುತ್ತಿರುವ ವಿಚಾರ ನಿನಗೂ ತಿಳಿದಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದುಕೊಳ್ಳುತ್ತಿದ್ದೇವೆ. ಜನಾಭಿಪ್ರಾಯ ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ನೀನು ಈಗ ಏನು ಕೆಲಸ ಮಾಡುತ್ತಿದ್ದೀಯಾ ಅಂದನ್ನು ಮುಂದುವರಿಸು - ಮೊಮ್ಮಗನಿಗೆ ತಾತನ ಕಿವಿಮಾತು.

ನಮ್ಮ ಪಕ್ಷಕ್ಕೆ ರಾಜ್ಯದಲ್ಲಿ ಉತ್ತಮ ವಾತಾವರಣವಿದೆ
ಸದ್ಯ ನಮ್ಮ ಪಕ್ಷಕ್ಕೆ ರಾಜ್ಯದಲ್ಲಿ ಉತ್ತಮ ವಾತಾವರಣವಿದೆ. ನೀನು ಸ್ಪರ್ಧಿಸುತ್ತಿದ್ದೀಯಾ ಎಂದಾದರೆ ಕಾಂಗ್ರೆಸ್ ಮತ್ತು ಬಿಜೆಪಿಯವರು ಪ್ರಭಲ ಪ್ರತಿಸ್ಪರ್ಧಿಯನ್ನು ನಿಲ್ಲಿಸುತ್ತಾರೆ. ಅದಕ್ಕೆ ನಾವು ರೆಡಿಯಾಗಿರಬೇಕು. ಚುನಾವಣೆಯಲ್ಲಿ ನೀನು ಸ್ಪರ್ಧಿಸುವ ಕ್ಷೇತ್ರಕ್ಕೆ ಸ್ಪೆಷಲ್ ಅಟೆಂನ್ಸನ್ ಸಿಗುತ್ತದೆ ಎಂದು ಗೌಡ್ರ ಮತ್ತು ರೇವಣ್ಣ ನಡುವೆ ನಡೆದ ಸಂಭಾಷಣೆಯ ಸಾರಾಂಶವನ್ನು ಟಿವಿ9 ಪ್ರಸಾರ ಮಾಡಿದೆ.

ಮೊಮ್ಮಗನಿಗೆ ತಾತನ ರಾಜಕೀಯ ಪಾಠ
ಲೋಕಸಭೆಗೆ ಸ್ಪರ್ಧಿಸುವ ಬಗ್ಗೆ ಗೌಡ್ರು ಮೊಮ್ಮಗನ ಅಭಿಪ್ರಾಯ ಕೇಳಿದಾಗ, ರಾಜ್ಯ ರಾಜಕಾರಣದಲ್ಲೇ ಮುಂದುವರಿಯಬೇಕು ಎಂದು ಪ್ರಜ್ವಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೀನು ಸ್ಪರ್ಧಿಸಿದರೆ ಗೆಲ್ಲಲೇ ಬೇಕು, ಸೋಲಬಾರದು ಎನ್ನುವ ಮಾತನ್ನು ದೇವೇಗೌಡ್ರು, ಮೊಮ್ಮಗ ಪ್ರಜ್ವಲ್ ಗೆ ಹೇಳಿದ್ದಾರೆಂದು ಟಿವಿ9 ವರದಿ ಮಾಡಿದೆ.
{promotion-urls}
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications