ಹೊರಟ್ಟಿಗೆ ಸಭಾಪತಿ ಸ್ಥಾನ ಸಿಗುವಂತೆ ಮಾಡಲು ಜೆಡಿಎಸ್ ಚಿಂತನೆ
ರಾಜ್ಯ ವಿಧಾನ ಮಂಡಲದ ಮೇಲ್ಮನೆಯ ಸಭಾಪತಿ ಸ್ಥಾನದ ಮೇಲೆ ಜೆಡಿಎಸ್ ಆಸಕ್ತಿ. ಸ್ಪೀಕರ್ ಸ್ಥಾನಕ್ಕೆ ಬಸವರಾಜ್ ಹೊರಟ್ಟಿಯವರನ್ನು ಕೂರಿಸಲು ಚಿಂತನೆ. ಈ ಸಂಬಂಧ, ಕಾಂಗ್ರೆಸ್ ನೊಂದಿಗೆ ಷರತ್ತುಬದ್ಧ ಮಾತುಕತೆಗೆ ನಿರ್ಧಾರ. ಹಾಲಿ ಸಭಾಪತಿ ಡಿ.ಎಚ್. ಶಂಕರ
ಬೆಂಗಳೂರು, ಜೂನ್ 6: ಜೆಡಿಎಸ್ ಹಿರಿಯ ನಾಯಕ, ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿಯವರನ್ನು ಮೇಲ್ಮನೆಯ ಸಭಾಪತಿ ಮಾಡುವ ವಿಚಾರದಲ್ಲಿ ಜೆಡಿಎಸ್ ತೀವ್ರ ತೆರನಾಗಿ ಚಿಂತನೆಯಲ್ಲಿ ತೊಡಗಿದೆ.
ಸದ್ಯಕ್ಕೆ ಈ ಸ್ಥಾನದಲ್ಲಿರುವ ಬಿಜೆಪಿಯ ನಾಯಕ ಡಿ.ಎಸ್. ಶಂಕರಮೂರ್ತಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ವಿಚಾರದಲ್ಲಿ ಹೊರಟ್ಟಿಯವರನ್ನು ಸಭಾಪತಿ ಮಾಡುವ ಷರತ್ತನ್ನು ಕಾಂಗ್ರೆಸ್ ಗೆ ವಿಧಿಸಲು ಜೆಡಿಎಸ್ ಉತ್ಸುಕವಾಗಿದೆ ಎಂದು ಹೇಳಲಾಗಿದೆ.

ಆದರೆ, ಈ ವಿಚಾರ ಇನ್ನೂ ಜೆಡಿಎಸ್ ಪಕ್ಷದ ಅಂಗಳ ಬಿಟ್ಟು ಆಚೆ ಬಂದಿಲ್ಲ. ಈಗಾಗಲೇ ಅವಿಶ್ವಾಸ ಮಂಡನೆ ವೇಳೆ ಕಾಂಗ್ರೆಸ್ಸನ್ನು ಬೆಂಬಲಿಸುವುದಾಗಿ ಜೆಡಿಎಸ್, ಕಾಂಗ್ರೆಸ್ ಸಂದೇಶ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಮಾತುಕತೆಗೆ ಬಂದಾಗ ಮಾತ್ರ ತನ್ನ ಈ ಅಭಿಲಾಷೆಯನ್ನು ಷರತ್ತಿನ ರೂಪದಲ್ಲಿ ಕಾಂಗ್ರೆಸ್ ಮುಂದಿಡಲು ಜೆಡಿಎಸ್ ನಿರ್ಧರಿಸಿದೆ ಎನ್ನುತ್ತಿವೆ ಮೂಲಗಳು.
ಆದರೆ, ಈ ಚಿಂತನೆಯ ಹಿನ್ನೆಲೆಯಲ್ಲಿ ಆ ಪಕ್ಷದ ನಾಯಕರಲ್ಲೇ ಗೊಂದಲವಿದೆ ಎನ್ನಲಾಗಿದೆ. ಶಂಕರಮೂರ್ತಿ ಪದಚ್ಯುತಿ ವಿಚಾರದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದರೆ, ಮುಂದೆ ಅದು ಚುನಾವಣೆಯ ವೇಳೆ ಬಿಜೆಪಿಗೆ ಎರಡೂ ಪಕ್ಷಗಳ ಮೇಲೆ (ಕಾಂಗ್ರೆಸ್, ಜೆಡಿಎಸ್) ಆರೋಪಗಳನ್ನು ಮಾಡಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬ ಆತಂಕವನ್ನು ಕೆಲವು ನಾಯಕರು ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications