ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಸಂಕಷ್ಟ: ಆಪರೇಷನ್ ಕಮಲ ವಿರುದ್ಧ ಎಸಿಬಿಗೆ ದೂರು

|
Google Oneindia Kannada News

Recommended Video

ಆಪರೇಷನ್ ಕಮಲ ವಿರುದ್ಧ ಎಸಿಬಿಗೆ ದೂರು | Oneindia Kannada

ಬೆಂಗಳೂರು, ಫೆಬ್ರವರಿ 11: ಶಾಸಕರನ್ನು ಸೆಳೆಯಲು ಹಣ ಮತ್ತು ಮಂತ್ರಿಗಿರಿಯ ಆಮಿಷವೊಡ್ಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಲಾಗಿದೆ.

ಯಡಿಯೂರಪ್ಪ ಅವರು ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲು 10 ಕೋಟಿ ರೂಪಾಯಿ ನೀಡುವುದಾಗಿ ಮತ್ತು ಸಚಿವ ಸ್ಥಾನ ನಿಡುವುದಾಗಿ ಶಾಸಕ ನಾಗನಗೌಡ ಅವರಿಗೆ ಆಮಿಷವೊಡ್ಡಿದ್ದಾರೆ. ಅದರ ಕುರಿತಾದ ಆಡಿಯೋ ಕ್ಲಿಪ್ ಇದ್ದು, ಅದು ತಮ್ಮದೇ ಧ್ವನಿ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

 ಆಪರೇಷನ್ ಆಡಿಯೋ ಬಾಂಬ್ ಸಿಡಿಸಿದ ಕುಮಾರಸ್ವಾಮಿ ಆಪರೇಷನ್ ಆಡಿಯೋ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಜೆಡಿಎಸ್ ಕಾರ್ಯಕರ್ತ ಸಿದ್ದರಾಜು ಎಂಬುವವರು ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿದ್ದಾರೆ. ಇದರಿಂದ ಯಡಿಯೂರಪ್ಪ ಮತ್ತೊಂದು ಸಂಕಷ್ಟಕ್ಕೆ ಒಳಗಾಗಿದ್ದಾರೆ.

jds worker files complaint to ACB against bjp state president bs yeddyurappa on operation kamala

ಗುರುಮಿಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರನ್ನು ಬಿಜೆಪಿಗೆ ಸೆಳೆಯಲು ಮುಂದಾಗಿದ್ದ ಬಿಎಸ್‌ಯಡಿಯೂರಪ್ಪ ಅವರ ಸಂಭಾಷಣೆ ಇರುವ ಆಡಿಯೋವನ್ನು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು. ಈ ಆಡಿಯೋ ಕ್ಲಿಪ್ ಸುಮಾರು 40 ನಿಮಿಷಗಳ ಅವಧಿಯದ್ದಾಗಿದೆ.

ಕುಮಾರಸ್ವಾಮಿ ಒಳ್ಳೆಯ ಪ್ರೊಡ್ಯೂಸರ್, ಆಡಿಯೋ ಫೇಕ್ : ಬಿಎಸ್‌ವೈಕುಮಾರಸ್ವಾಮಿ ಒಳ್ಳೆಯ ಪ್ರೊಡ್ಯೂಸರ್, ಆಡಿಯೋ ಫೇಕ್ : ಬಿಎಸ್‌ವೈ

ಶಾಸಕ ನಾಗನಗೌಡ ಕಂದಕೂರು ಅವರ ಪುತ್ರ ಶರಣಗೌಡ ಕಂದಕೂರು ​ಈ ಆಡಿಯೋ ಕ್ಲಿಪ್​ ಅನ್ನು ರೆಕಾರ್ಡ್​ ಮಾಡಿಕೊಂಡು ತಮಗೆ ಕೊಟ್ಟಿದ್ದಾಗಿ ಕುಮಾರಸ್ವಾಮಿ ಹೇಳಿದ್ದರು. ನೀನು ನನ್ನ ಮಗ ವಿಜಯೇಂದ್ರ ಇದ್ದಂತೆಯೇ ಎಂದು ಹೇಳುತ್ತಾ ಬಿಎಸ್ ಯಡಿಯೂರಪ್ಪ ಹಣದ ಆಮಿಷವನ್ನು ಒಡ್ಡಲು ಪ್ರಯತ್ನ ಮಾಡಿದ್ದಾರೆ, ಆದರೆ ಶರಣಗೌಡ ಅವರು ನನಗೆ ಕಾಲ್ ಮಾಡಿದ್ದರಿಂದ ಎಲ್ಲವನ್ನೂ ನಾನೇ ರೆಕಾರ್ಡ್ ಮಾಡಿದ್ದೇನೆ ಎಂದು ಎಚ್‌ಡಿಕೆ ವಿವರಿಸಿದ್ದರು.

ಆಡಿಯೋದಲ್ಲಿರುವ ಧ್ವನಿ ನನ್ನದೇ : ಯಡಿಯೂರಪ್ಪಆಡಿಯೋದಲ್ಲಿರುವ ಧ್ವನಿ ನನ್ನದೇ : ಯಡಿಯೂರಪ್ಪ

ಆರಂಭದಲ್ಲಿ ಇದು ನಕಲಿ ಆಡಿಯೋ. ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಬಳಸಿಕೊಳ್ಳಲಾಗಿದೆ. ಈ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಯಡಿಯೂರಪ್ಪ ಹೇಳಿದ್ದರು. ಆದರೆ, ಭಾನುವಾರ ಉಲ್ಟಾ ಹೊಡೆದ ಯಡಿಯೂರಪ್ಪ ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದರು.

English summary
JDS worker filed a complaint to Anty Corruption Beauro (ACB) against BJP State President, Former Chief Minister BS Yeddyurappa on attempt of Operation Kamala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X