ಕರ್ನಾಟಕ ಚುನಾವಣೆ : ಕಾಂಗ್ರೆಸ್ ಅಥವ ಜೆಡಿಎಸ್ ಜೊತೆ ಜೆಡಿಯು ಮೈತ್ರಿ
Recommended Video
ಬೆಂಗಳೂರು, ಮಾರ್ಚ್ 31 : 'ಕರ್ನಾಟಕದ ಚುನಾವಣೆಯಲ್ಲಿ ಜೆಡಿಎಸ್ ಅಥವ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಜೆಡಿಯು ಮುಖ್ಯಸ್ಥ ಶರದ್ ಯಾದವ್ ಹೇಳಿದ್ದಾರೆ.
ಶರದ್ ಯಾದವ್ ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. 'ಮೈತ್ರಿ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿಗೆ ಬಂದಿದ್ದೇನೆ. ಎರಡು ದಿನ ನಗರದಲ್ಲಿಯೇ ಇದ್ದು, ಕಾರ್ಯಕರ್ತರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೆನೆ' ಎಂದು ಹೇಳಿದರು.
ಬಿಹಾರದಂತೆ ಕರ್ನಾಟಕದಲ್ಲೂ ಜೆ.ಡಿ.ಯು ವಿಭಜನೆ
'ಕರ್ನಾಟಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಇದ್ದಾರೆ. ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗೆಡೆ, ಜೆ.ಎಚ್.ಪಟೇಲ್ ನಮ್ಮ ಪಕ್ಷದವರು. ಈ ಬಾರಿಯ ಕರ್ನಾಟಕದ ಚುನಾವಣೆ ಮೇಲೆ ದೇಶವೇ ಕಣ್ಣಿಟ್ಟಿದೆ. ಫಲಿತಾಂಶಕ್ಕಾಗಿ ಜನರು ಕುತೂಹಲದಿಂದ ಕಾಯುತ್ತಿದ್ದಾರೆ' ಎಂದರು.
'ಕರ್ನಾಟಕದ ವಿಧಾನಸಭೆ ಚುನಾವಣೆ 2019ರ ಲೋಸಭೆ ಚುನಾವಣೆಗೆ ಸೆಮಿ ಫೈನಲ್ ಇದ್ದಂತೆ. ಇಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ. ಚುನಾವಣೆಯಲ್ಲಿ ಕಾಂಗ್ರೆಸ್ ಅಥವ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕೇ? ಎಂಬ ಕುರಿತು ಚರ್ಚೆ ನಡೆಸುತ್ತಿದ್ದೇವೆ' ಎಂದು ತಿಳಿಸಿದರು.
ಜೆಎಚ್ ಪಟೇಲರ ಪುತ್ರ ಮಹಿಮಾ ಈಗ ಜೆಡಿಯು ಅಧ್ಯಕ್ಷ
'ಜೆಡಿಎಸ್ ಪಕ್ಷ ಯಾರಿಗೆ ಸೇರಿದ್ದು ಎಂಬ ಬಗ್ಗೆ ಸೋಮವಾರ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಲಿದೆ. ಬಳಿಕ ಹೊಸ ಚಿನ್ಹೆಯಡಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಲಾಗುತ್ತದೆ' ಎಂದು ಶರದ್ ಯಾದವ್ ಹೇಳಿದರು.
ಮತ್ತೊಂದು ಕಡೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಕರ್ನಾಟಕದಲ್ಲಿ ಹೊಸ ಕಚೇರಿಯನ್ನು ತೆರೆದಿದೆ. ವಿಲ್ಸನ್ ಗಾರ್ಡನ್ನಲ್ಲಿ ನೂತನ ಕಚೇರಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಶುಕ್ರವಾರ ಉದ್ಗಾಟಿಸಿದರು.