ಮೋದಿ ಒಬ್ಬ ಮೋಸಗಾರ ಎಂದು ನಿಂದಿಸಿದ ರಾಮ್ ಜೇಠ್ಮಲಾನಿ
ಬೆಂಗಳೂರು, ಮೇ 07: ಮೋದಿ ಮೋಸಗಾರ. ಜನರು ಈ ಮೋಸಗಾರನಿಗೆ ತಕ್ಕ ಪಾಠ ಕಲಿಸಬೇಕು. ಆತನಿಗೆ ಬುದ್ಧಿ ಕಲಿಸುವತನಕ ಹಾಗೂ ನನ್ನ ಕೊನೆ ಉಸಿರು ಇರುವತನಕ ಹೋರಾಡುತ್ತೇನೆ. ಮೋದಿ ವಿರುದ್ಧ ರಾಜ್ಯಸಭಾ ಸದಸ್ಯ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಗುಡುಗಿದರು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟದಿಂದ ಆಯೋಜನೆ ಮಾಡಿದ್ದ ಮಾತು ಮಂಥನ ಸಂವಾದದಲ್ಲಿ ಮಾತನಾಡಿದ ಅವರು, ಮೋದಿಯ ಮೇಲೆ ನಂಬಿಕೆ ಇಡಿ, ಮೋದಿಯನ್ನು ಪ್ರಧಾನಿ ಮಾಡಿ ಎಂದು ಹೇಳಿ ಜೀವನದಲ್ಲಿ ದೊಡ್ಡ ತಪ್ಪು ಮಾಡಿ ಮೂರ್ಖನಾಗಿದ್ದೇನೆ.
ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರುತ್ತೇನೆಂದು ಪ್ರಣಾಳಿಕೆಯಲ್ಲಿ ನನ್ನಿಂದ ಬರೆಯಿಸಿಕೊಂಡ ಜನ ಇಂದು ಅದರ ಕುರಿತು ಚಕಾರ ಎತ್ತುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಅಮಿತ್ ಶಾನಂಥವರು ಉಡಾಫೆಯ ಮಾತುಗಳನ್ನಾಡುತ್ತಾರೆ. ಇಂಥವರಿಗೆ ಏನೆನ್ನಬೇಕು ಎಂದು ಪ್ರಶ್ನಿಸಿದರು.

ಕರ್ನಾಟಕದ ಜನರು ಈ ಚುನಾವಣೆಯಲ್ಲಿ ಮೋದಿಯ ಮೋಡಿ ಮಾತುಗಳಿಗೆ ಮರುಳಾಗದಂತೆ ಎಚ್ಚರಿಕೆ ನೀಡಿದ ಜೇಠ್ಮಲಾನಿ, ನಿಮಗಿಷ್ಟ ಬಂದವರಿಗೆ ಮತ ನೀಡಿ. ಆದರೆ ಮೋದಿಯಂಥ ಕುಕೃತ್ಯಗಾರನ ಮೋಸಗಳನ್ನು ಮರೆಯಬೇಡಿ ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.
ನರೇಂದ್ರ ಮೋದಿ ಪ್ರಧಾನಿಯಾಗಲು ಅರ್ಹ ಎಂದು ಆರಂಭದಲ್ಲಿ ಧ್ವನಿ ಎತ್ತಿದವನು ನಾನು ಅವತ್ತು ನಾನು ಕೆಟ್ಟ ನಿರ್ಧಾರ ಮಾಡಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಪ್ಯಾರಾಗಟ್ಟಲೆ ಕಪ್ಪು ಹಣದ ಹಿಂತರುವ ಬಗ್ಗೆ ಉಲ್ಲೇಖ ಮಾಡಿದ್ದರು ಆದರೆ ಇಲ್ಲಿಯವರೆಗೂ ಕಪ್ಪು ಹಣ ಬಂದಿದೆಯಾ ಮೋದಿ ಸರ್ಕಾರ ಅದ್ರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಅಮಿತ್ ಶಾ ತಮ್ಮ ಸಾರ್ವಜನಿಕ ಭಾಷಣದಲ್ಲಿ ಕಪ್ಪು ಹಣದ ಬಗ್ಗೆ ಮಾತನಾಡ್ತಾರೆ ಎಷ್ಟು ಹಾಸ್ಯಾಸ್ಪದ ಅನ್ನಿಸುತ್ತೆ ಎಂದರು.
ಈ ನಾಲ್ಕು ವರ್ಷದ ಅವಧಿಯಲ್ಲಿ ಜನರಿಗೆ ಮೋಸ ಮಾಡಿದ್ದಾರೆ ನಾನು ಇಲ್ಲಿಗೆ ಬಂದ ಉದ್ದೇಶವೇ ಮೋದಿ ಬಣ್ಣ ಮಾಡೋದಕ್ಕೆ , ಬಿಜೆಪಿಗೆ ವೋಟು ಮಾಡಬೇಡಿ, ಕಾಂಗ್ರೆಸ್ ಗೆ ವೋಟು ಮಾಡಿ ಅಂತಾ ನಾನು ಯಾಕೆ ಹೇಳಲಿ. ಯಾರಿಗೆ ಮತ ಹಾಕಬೇಕು ಅನ್ನೋದು ಜನರಿಗೆ ಬಿಟ್ಟ ವಿಚಾರ. ಅವರಿಗೆ ಯಾರನ್ನು ಅಧಿಕಾರಕ್ಕೆ ತರಬೇಕು ಅನಿಸುತ್ತದೆಯೋ ಅವರಿಗೆ ಮತ ಹಾಕಲಿ ದೇಶದ ಜನ ತಪ್ಪಿತಸ್ಥರಿಗೆ ಶಿಕ್ಷೆ ಕೊಡ್ತಾರೆ ಆ ದಿನವನ್ನು ತಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications