Get Updates
Get notified of breaking news, exclusive insights, and must-see stories!

ಮೇಲುಕೋಟೆ ದೇವಾಲಯದಿಂದ ಪುನಃ ಆಭರಣ ನಾಪತ್ತೆ

ಮಂಡ್ಯ, ಫೆ. 12: ಇತಿಹಾಸ ಪ್ರಸಿದ್ಧ ಮೇಲುಕೋಟೆ ಶ್ರೀ ಚಲುವನಾರಾಯಣ ಸ್ವಾಮಿಯ ದೇವಾಲಯದಲ್ಲಿ ಪುನಃ ಆಭರಣ ಕಳುವಾಗಿದೆ. ದೇವಾಲಯದ 38 ಆಭರಣಗಳು ಕಳುವಾಗಿದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಮೌಲ್ಯಮಾಪಕರು ಸರ್ಕಾರಕ್ಕೆ ವರದಿ ನೀಡಿದ್ದಾರೆ.

ಮೇಲುಕೋಟೆಯಲ್ಲಿ ಆಭರಣಗಳು ಕಾಣೆಯಾಗಿವೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ.ಶ್ರೀನಿವಾಸ್ ಅವರು ಕೆಲವು ದಿನಗಳ ಹಿಂದೆ ಮುಜರಾಯಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ದೂರು ನೀಡಿದ್ದರು.[ಮೇಲುಕೋಟೆ ನರಸರಾಜ ಭಟ್ಟರು ಇನ್ನೂ ನಾಪತ್ತೆ!]

Melkote

ದೂರಿನ ಹಿನ್ನೆಲಯಲ್ಲಿ ಟಿ.ಬಿ.ಜಯಚಂದ್ರ ಅವರು ಧಾರ್ಮಿಕದತ್ತಿ ಇಲಾಖೆ ಆಯುಕ್ತರು, ದಾಖಲೆಗಳನ್ನು ಪರಿಶೀಲಿಸಿ ಮೌಲ್ಯಮಾಪನ ನಡೆಸಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚನೆ ನೀಡಿದ್ದರು. ಫೆಬ್ರವರಿ 7ರಂದು ಮೌಲ್ಯಮಾಪಕರು ಸರ್ಕಾರಕ್ಕೆ 25 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. [ಮೇಲುಕೋಟೆ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ]

ಜನವರಿ 19ರಂದು ಮೇಲುಕೋಟೆ ದೇವಾಲಯಕ್ಕೆ ಆಗಮಿಸಿದ್ದ ಮೌಲ್ಯಮಾಪಕರಾದ ವೇದಮೂರ್ತಾಚಾರ್ ಅವರು, ದೇವಾಲಯದ ಆಡಳಿತ ಮಂಡಳಿ, ಅರ್ಚಕರು, ಸ್ಥಳೀಯರನ್ನು ಭೇಟಿ ಮಾಡಿದ್ದಾರೆ. ಆಭರಣಗಳ ಬಗ್ಗೆ ದಾಖಲೆಗಳು ಮತ್ತು ಛಾಯಾಚಿತ್ರಗಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ.

ವರದಿಯಲ್ಲಿ ಏನಿದೆ : ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ವರದಿಯಲ್ಲಿ ವೇದಮೂರ್ತಾಚಾರ್ ಅವರು, 38 ಆಭರಣಗಳ ಪೈಕಿ ಹಲವು ದೇವಾಲಯದಲ್ಲಿ ದಾಸ್ತಾನಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಆಭರಣಗಳನ್ನು ಸರ್ಕಾರದ ವಶಕ್ಕೆ ಪಡೆಯುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಹಿಂದೆಯೂ ಕಳುವಾಗಿತ್ತು : ಹಿಂದೆಯೂ ಮೇಲುಕೋಟೆಯ ದೇವಾಲಯದಲ್ಲಿ ರತ್ನಾಂಗಿ ಆಭರಣ ಕಳುವಾಗಿತ್ತು. ದೇವಾಲಯದ ಪ್ರಧಾನ ಅರ್ಚಕ ನರಸರಾಜ ಭಟ್ ಅವರ ವಿರುದ್ಧ ಕಳುವಿನ ಆರೋಪ ಕೇಳಿಬಂದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+