ಕರ್ನಾಟದಲ್ಲಿ ಪ್ರಚಾರ ಮಾಡಲಿದ್ದಾರೆ ಜಿಗ್ನೇಶ್ ಮೆವಾನಿ
ಚಿಕ್ಕಮಗಳೂರು, ಡಿಸೆಂಬರ್ 30: ಊನಾ ಚಳುವಳಿಯಿಂದ ಗುಜರಾತ್ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದ್ದ ದಲಿತ ಹೋರಾಟಗಾರ ಮುಖಂಡ ಜಿಗ್ನೇಶ್ ಮೆವಾನಿ ಕರ್ನಾಟಕ ಚುನಾವಣೆಯಲ್ಲಿಯೂ ಬಿಜೆಪಿ ವಿರುದ್ಧ ಪ್ರಚಾರ ಮಾಡಲಿದ್ದಾರೆ.
ತಮ್ಮ ಪ್ರಖರ ಮಾತು, ವಾಕ್ಚಾತುರ್ಯದಿಂದ ದಲಿತರ ಸಂಘಟನೆ ಮಾಡಿ, ಬಿಜೆಪಿ ವಿರುದ್ಧ ತಿರುಗಿ ಬೀಳುವಂತೆ ಮಾಡಿದ್ದ ಜಿಗ್ನೇಶ್ ಮೆವಾನಿ ರಾಜ್ಯದಲ್ಲಿಯೂ ಇದನ್ನೇ ಮುಂದುವರೆಸುವುದಾಗಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕರ್ನಾಟಕ ಕೋಮು ಸೌಹಾರ್ಧ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಪ್ರಚಾರದಿಂದ ಯಾವ ಪಕ್ಷಕ್ಕೆ ಲಾಭವಾಗುತ್ತದೆಯೊ ಗೊತ್ತಿಲ್ಲ ಆದರೆ ನನ್ನ ಗುರಿ ಬಿಜೆಪಿಯನ್ನು ಸೋಲಿಸುವುದಷ್ಟೆ' ಎಂದಿದ್ದಾರೆ.
ದಲಿತ ಪರ ಹೋರಾಟಗಾರರು ಎಲ್ಲೆಲ್ಲಿ ಚುನಾವಣೆಗೆ ನಿಲ್ಲುತ್ತಾರೊ ಅವರಿಗೆ ಹೋರಾಟಗಾರರು ಬೆಂಬಲ ಕೊಡಬೇಕು ಎಂದ ಅವರು, ಹೋರಾಟಗಾರರು ಚುನಾವಣೆಗೆ ನಿಂತ ಸ್ಥಾನಕ್ಕೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಕಾಂಗ್ರೆಸ್ ಪಕ್ಷವನ್ನು ಮನವಿ ಮಾಡಿಕೊಳ್ಳಬೇಕು, ನಮ್ಮ ಗುರಿ ಬಿಜೆಪಿ ಯನ್ನು ಆ ಮೂಲಕ ಸಂಘ ಪರಿವಾರವನ್ನು ಸೋಲಿಸುವುದೇ ಆಗಿರಬೇಕು ಎಂದು ಅವರು ಹೇಳಿದರು.
ಕೋಮುವಾದ ಈ ದೇಶದ ದೊಡ್ಡ ಪಿಡುಗು ಎಂದ ಅವರು ಬಿಜೆಪಿ ಅದಕ್ಕಿಂತಲೂ ದೊಡ್ಡ ಪಿಡುಗು ಆದಷ್ಟು ಬೇಗ ಇವೆರಡನ್ನು ದೇಶದಿಂದ ತೊಲಗಿಸಬೇಕು ಎಂದರು.
ದಲಿತರು ಮತ್ತು ಮುಸ್ಲೀಮರು ಒಗ್ಗೂಡಬೇಕು ಎಂದು ಕರೆ ನೀಡಿದ ಜಿಗ್ನೇಶ್ ಮೆವಾನಿ 'ಗುಜರಾತ್ ಚುನಾವಣೆಯಲ್ಲಿ ವದಗಾಂ ಕ್ಷೇತ್ರದಲ್ಲಿ ಶೇ 85 ಮುಸ್ಲಿಮರು ಮತ್ತು ದಲಿತರು ಬಿಜೆಪಿಗೆ ವಿರುದ್ಧವಾಗಿ ಮತ ಚಲಾಯಿಸಿದರು, ಕರ್ನಾಟಕದಲ್ಲಿ ಶೇ 95 ದಲಿತರು ಮುಸ್ಲಿಮರು ಬಿಜೆಪಿ ವಿರುದ್ಧ ಮತ ಚಲಾಯಿಸಲಿ' ಎಂದು ಅವರು ಹೇಳಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications