ಕರ್ನಾಟದಲ್ಲಿ ಪ್ರಚಾರ ಮಾಡಲಿದ್ದಾರೆ ಜಿಗ್ನೇಶ್ ಮೆವಾನಿ
ಚಿಕ್ಕಮಗಳೂರು, ಡಿಸೆಂಬರ್ 30: ಊನಾ ಚಳುವಳಿಯಿಂದ ಗುಜರಾತ್ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದ್ದ ದಲಿತ ಹೋರಾಟಗಾರ ಮುಖಂಡ ಜಿಗ್ನೇಶ್ ಮೆವಾನಿ ಕರ್ನಾಟಕ ಚುನಾವಣೆಯಲ್ಲಿಯೂ ಬಿಜೆಪಿ ವಿರುದ್ಧ ಪ್ರಚಾರ ಮಾಡಲಿದ್ದಾರೆ.
ತಮ್ಮ ಪ್ರಖರ ಮಾತು, ವಾಕ್ಚಾತುರ್ಯದಿಂದ ದಲಿತರ ಸಂಘಟನೆ ಮಾಡಿ, ಬಿಜೆಪಿ ವಿರುದ್ಧ ತಿರುಗಿ ಬೀಳುವಂತೆ ಮಾಡಿದ್ದ ಜಿಗ್ನೇಶ್ ಮೆವಾನಿ ರಾಜ್ಯದಲ್ಲಿಯೂ ಇದನ್ನೇ ಮುಂದುವರೆಸುವುದಾಗಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕರ್ನಾಟಕ ಕೋಮು ಸೌಹಾರ್ಧ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಪ್ರಚಾರದಿಂದ ಯಾವ ಪಕ್ಷಕ್ಕೆ ಲಾಭವಾಗುತ್ತದೆಯೊ ಗೊತ್ತಿಲ್ಲ ಆದರೆ ನನ್ನ ಗುರಿ ಬಿಜೆಪಿಯನ್ನು ಸೋಲಿಸುವುದಷ್ಟೆ' ಎಂದಿದ್ದಾರೆ.
ದಲಿತ ಪರ ಹೋರಾಟಗಾರರು ಎಲ್ಲೆಲ್ಲಿ ಚುನಾವಣೆಗೆ ನಿಲ್ಲುತ್ತಾರೊ ಅವರಿಗೆ ಹೋರಾಟಗಾರರು ಬೆಂಬಲ ಕೊಡಬೇಕು ಎಂದ ಅವರು, ಹೋರಾಟಗಾರರು ಚುನಾವಣೆಗೆ ನಿಂತ ಸ್ಥಾನಕ್ಕೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಕಾಂಗ್ರೆಸ್ ಪಕ್ಷವನ್ನು ಮನವಿ ಮಾಡಿಕೊಳ್ಳಬೇಕು, ನಮ್ಮ ಗುರಿ ಬಿಜೆಪಿ ಯನ್ನು ಆ ಮೂಲಕ ಸಂಘ ಪರಿವಾರವನ್ನು ಸೋಲಿಸುವುದೇ ಆಗಿರಬೇಕು ಎಂದು ಅವರು ಹೇಳಿದರು.
ಕೋಮುವಾದ ಈ ದೇಶದ ದೊಡ್ಡ ಪಿಡುಗು ಎಂದ ಅವರು ಬಿಜೆಪಿ ಅದಕ್ಕಿಂತಲೂ ದೊಡ್ಡ ಪಿಡುಗು ಆದಷ್ಟು ಬೇಗ ಇವೆರಡನ್ನು ದೇಶದಿಂದ ತೊಲಗಿಸಬೇಕು ಎಂದರು.
ದಲಿತರು ಮತ್ತು ಮುಸ್ಲೀಮರು ಒಗ್ಗೂಡಬೇಕು ಎಂದು ಕರೆ ನೀಡಿದ ಜಿಗ್ನೇಶ್ ಮೆವಾನಿ 'ಗುಜರಾತ್ ಚುನಾವಣೆಯಲ್ಲಿ ವದಗಾಂ ಕ್ಷೇತ್ರದಲ್ಲಿ ಶೇ 85 ಮುಸ್ಲಿಮರು ಮತ್ತು ದಲಿತರು ಬಿಜೆಪಿಗೆ ವಿರುದ್ಧವಾಗಿ ಮತ ಚಲಾಯಿಸಿದರು, ಕರ್ನಾಟಕದಲ್ಲಿ ಶೇ 95 ದಲಿತರು ಮುಸ್ಲಿಮರು ಬಿಜೆಪಿ ವಿರುದ್ಧ ಮತ ಚಲಾಯಿಸಲಿ' ಎಂದು ಅವರು ಹೇಳಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications